ಮಂಗಳೂರು: ಅಧಿಕ ಮಾತ್ರೆ ಸೇವನೆಯಿಂದ ಅಸ್ವಸ್ಥಗೊಂಡ ಕೈದಿ ಆಸ್ಪತ್ರೆಗೆ
ಮಂಗಳೂರು, ಮೇ 18 : ಅಧಿಕ ಮಾತ್ರೆ ಸೇವಿಸಿ ಅಸ್ವಸ್ಥಗೊಂಡ ಮಂಗಳೂರು ಜಿಲ್ಲಾ ಕಾರಾಗೃಹದ ವಿಚಾರಣಾಧೀನ ಕೈದಿಯೊಬ್ಬನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣವೊಂದರಲ್ಲಿ ಬಂಧಿತನಾಗಿರುವ ಆರೋಪಿ ಎಚ್ ಐ ವಿ ಪೀಡಿತನಾಗಿದ್ದರಿಂದ ಕೈದಿ ಮಾತ್ರೆಗಳನ್ನು ಸೇವಿಸುತ್ತಿದ್ದ. ಆದರೆ, ಬುಧವಾರ ಈತ ಹೆಚ್ಚಿನ ಪ್ರಮಾಣದಲ್ಲಿ ಮಾತ್ರೆಗಳನ್ನು ಸೇವಿಸಿದ್ದಾನೆ ಎನ್ನಲಾಗಿದೆ. ಇದರಿಂದ ಅಸ್ವಸ್ಥಗೊಡಿದ್ದು, ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕಾರಾಗೃಹದ ಅಧೀಕ್ಷಕ ಕೃಷ್ಣಮೂರ್ತಿ ತಿಳಿಸಿದ್ದಾರೆ.

ಆರೋಪಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನವಾಗಿ ಹೆಚ್ಚು ಮಾತ್ರೆಗಳನ್ನು ಸೇವಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಆರೋಪಿ ಹೆಸರು ಬಹಿರಂಗ ಪಡಿಸದಂತೆ ಕಾರಾಗೃಹದ ಅಧೀಕ್ಷಕ ಕೃಷ್ಣಮೂರ್ತಿ ಅವರು ಹೇಳಿದ್ದರಿಂದ ಕೈದಿಯ ಹೆಸರನ್ನು ಇಲ್ಲಿ ನಮೂದಿಸಲಾಗಿಲ್ಲ.












Click it and Unblock the Notifications