ಮಂಗಳೂರು: ಸಿರಿಯಲ್ ಕಿಲ್ಲರ್ ಸೈನೈಡ್ ಮೋಹನ್ ಗೆ ಜೀವಾವಧಿ ಶಿಕ್ಷೆ
ಮಂಗಳೂರು, ಸೆಪ್ಟೆಂಬರ್ 15 : ದೇಶವನ್ನೇ ಬೆಚ್ಚಿ ಬೀಳಿಸಿದ ಸಿರಿಯಲ್ ಕಿಲ್ಲರ್ ಹಾಗು ಸರಣಿ ಅತ್ಯಾಚಾರ ಪ್ರಕರಣಗಳ ಆರೋಪಿ ಸೈನೈಡ್ ಮೋಹನ್ ನ 4ನೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳೂರು 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.
ವೇಳೆ ಕೊಲೆ ,ಅತ್ಯಾಚಾರ ,ಚಿನ್ನಾಭರಣ ಲೂಟಿ , ಸೈನೆಡ್ ನೀಡಿರುವುದು ಹಾಗೂ ಸಾಕ್ಷಿ ನಾಶ ಮಾಡಿರುವ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ಸೆಕ್ಷನ್ 302 ರ ಅಡಿಯಲ್ಲಿ ಸೈನೈಡ್ ಮೋಹನ್ ಗೆ ಜೀವಾವಧಿ ಶಿಕ್ಷೆ ಹಾಗೂ 26 ಸಾವಿರ ರು. ದಂಡ ವಿಧಿಸಿ ನ್ಯಾಯಾಧೀಶ ಡಿ. ಟಿ ಪುಟ್ಟರಂಗ ಸ್ವಾಮಿ ಅವರು ಆದೇಶ ಹೊರಡಿಸಿದರು.

ಪುತ್ತೂರು ತಾಲೂಕಿನ ಪಟ್ಟೆಮಜಲು ಎಂಬಲ್ಲಿನ 22 ವರ್ಷದ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ವಿಚಾರಣೆ ನಡೆಸಿದ್ದ ನ್ಯಾಯಾಲಯ ನಾಲ್ಕನೇ ಪ್ರಕರಣದಲ್ಲೂ ಸೆನೈಡ್ ಮೋಹನ್ ದೋಷಿ ಎಂದು ಘೋಷಿಸಿ ಶಿಕ್ಷೆ ಪ್ರಮಾಣವನ್ನು ಸೆ.15ಕ್ಕೆ ಮುಂದೂಡಿತ್ತು.
ಪಟ್ಟೆಮಜಲಿನ ಬೀಡಿ ಕಟ್ಟುವ ಯುವತಿಯನ್ನು ಮೋಹನ, ತನ್ನ ಹೆಸರು ಆನಂದ್ ಎಂದು ಹೇಳಿ ಪರಿಚಯಿಸಿಕೊಂಡಿದ್ದ. ನಂತರ ಮೊಬೈಲ್ ನಂಬರ್ ಪಡೆದುಕೊಂಡು ಸಂಪರ್ಕ ಬೆಳೆಸಿದ್ದ. ಆಕೆಯನ್ನು ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿದ್ದ.
ನಂತರ ಆಕೆಯನ್ನು 17-9-2009ರಂದು ಪುತ್ತೂರಿನ ಬಸ್ ನಿಲ್ದಾಣಕ್ಕೆ ಒಡವೆ ಹಾಕಿಕೊಂಡು ಬಾ ಎಂದು ನಂಬಿಸಿ. ಇಬ್ಬರೂ ಮಡಿಕೇರಿಗೆ ಹೋಗಿ ಅಲ್ಲಿನ ವಸತಿ ನಿಲಯದಲ್ಲಿ ತಂಗಿದ್ದರು. ಯುವತಿಯೊಡನೆ ಲೈಂಗಿಕ ಸಂಪರ್ಕ ನಡೆಸಿ ಇದರಿಂದ ಗರ್ಭ ಧರಿಸುವ ಸಾಧ್ಯತೆ ಇದೆ ಹಾಗಾಗಿ ನಾನು ಕೊಡುವ ಗುಳಿಗೆ ತಿಂದರೆ ಗರ್ಭ ನಿಲ್ಲುವುದಿಲ್ಲ ಎಂದು ಸೈನೈಡ್ ನೀಡಿದ್ದ.
ಅದನ್ನು ತಿಂದು ಯುವತಿ ಶೌಚಾಲಯದಲ್ಲಿ ಮೃತಪಟ್ಟ ಬಳಿಕ. ಆಕೆಯ ಬಳಿ ಇದ್ದ ಚಿನ್ನ, ಮೊಬೈಲ್ನೊಂದಿಗೆ ಮೋಹನ್ ಪರಾರಿಯಾಗಿದ್ದ. ಮಡಿಕೇರಿಯಲ್ಲಿ ಇದೊಂದು ಅಸಹಜ ಸಾವು ಎಂದು ಪ್ರಕರಣ ದಾಖಲಾಗಿತ್ತು.
ಬಂಟ್ವಾಳದ ಬರಿಮಾರಿನ ಯುವತಿಯ ಕೊಲೆ ಪ್ರಕರಣದ ಪತ್ತೆಯೊಂದಿಗೆ ಸೆನೈಡ್ ಮೋಹನನ ಸರಣಿ ಹತ್ಯೆ ವಿಚಾರ ಬಯಲಾಗಿತ್ತು. ಸೈನೈಡ್ ಮೋಹನನ ಬಂಧನದೊಂದಿಗೆ ಇತರ ಪ್ರಕರಣಗಳೂ ಬೆಳಕಿಗೆ ಬಂದಿದ್ದವು. ಆತನ ಮನೆ ಶೋಧದ ವೇಳೆ ಪಟ್ಟೆಮಜಲಿನ ಯುವತಿಯ ಮೊಬೈಲ್ ಕೂಡಾ ಪತ್ತೆಯಾಗಿತ್ತು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications