ಮಂಗಳೂರು ವಿಮಾನ ನಿಲ್ದಾಣದ ಖಾಸಗೀಕರಣ ವಿವಾದ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಮಂಗಳೂರು, ಸೆಪ್ಟೆಂಬರ್ 2: ಮಂಗಳೂರು ವಿಮಾನ ನಿಲ್ದಾಣವನ್ನು ಖಾಸಗೀಕರಣಕ್ಕೆ ನೀಡಲಾಗಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯ ತೀರ್ಪನ್ನು ಬುಧವಾರ ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿದೆ.
ಮಂಗಳೂರು ಸೇರಿದಂತೆ ಮೂರು ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್ ಎಂಟರ್ಪ್ರೈಸಸ್ಗೆ ಗುತ್ತಿಗೆ ನೀಡುವ 2019ರ ಸಚಿವ ಸಂಪುಟದ ನಿರ್ಧಾರವನ್ನು ವಜಾ ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಇದ್ದ ವಿಭಾಗೀಯ ಪೀಠವು ನಡೆಸಿತು.
ಆರು ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಮನವಿಯಲ್ಲಿ ಪ್ರಶ್ನಿಸಲಾಗಿದ್ದು, ಕೇಂದ್ರದ ಕ್ರಮವು ಕಾನೂನುಬಾಹಿರ ಮತ್ತು ಸ್ವೇಚ್ಛೆಯಿದ ಕೂಡಿದೆ. ಅಲ್ಲದೇ ಇದು ವಿಮಾನ ನಿಲ್ದಾಣ ಪ್ರಾಧಿಕಾರ ಕಾಯಿದೆ 1994ರ ವ್ಯಾಪ್ತಿ ಮೀರಿದ್ದಾಗಿದೆ ಎಂದು ಹೇಳಲಾಗಿದ್ದು, ಸದರಿ ಮನವಿಯನ್ನು ನಿರ್ದಿಷ್ಟವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿ ಸಲ್ಲಿಸಲಾಗಿದೆ.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, "ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಕಾಯಿದೆಯ ಸೆಕ್ಷನ್ 12 ಅನ್ನು ಉಲ್ಲೇಖಿಸಿ, ವಿಮಾನ ನಿಲ್ದಾಣ ಆವರಣವನ್ನು ಗುತ್ತಿಗೆ ನೀಡಬಹುದಾಗಿದೆ. ಆದರೆ, ಇಡೀ ನಿಲ್ದಾಣವನ್ನು ಖಾಸಗಿ ವ್ಯಕ್ತಿಗಳ ನಿರ್ವಹಣೆಗೆ ಒಪ್ಪಿಸಲಾಗಿದೆ ಎಂಬುದು ನಮ್ಮ ವಾದ," ಎಂದರು.
"ರನ್ ವೇಗಳು, ಟ್ಯಾಕ್ಸಿ ವೇಗಳು ಮತ್ತು ಏರ್ಕ್ರಾಫ್ಟ್ ಸಂರಕ್ಷಣಾ ಅಗ್ನಿ ಕಟ್ಟಡಗಳನ್ನೂ ಗುತ್ತಿಗೆಗೆ ನೀಡಲಾಗಿದೆ. ಇವೆಲ್ಲವೂ ಏರ್ ಟ್ರಾಫಿಕ್ ಸೇವೆಯ ಭಾಗವಾಗಿದ್ದು, ಅವುಗಳನ್ನು ಯಾವುದೇ ಕಾರಣಕ್ಕೂ ಗುತ್ತಿಗೆ ನೀಡುವಂತಿಲ್ಲ. ಇದರರ್ಥ ವಿಮಾನಯಾನ ಸೇವೆಗಳ ನಿಯಂತ್ರಣವನ್ನು ಅವರಿಗೆ ಒಪ್ಪಿಸಿದಂತಾಗುತ್ತದೆ, ಇದು ಎಎಐ ಕಾಯಿದೆಗೆ ವಿರುದ್ಧವಾಗಿದೆ," ಎಂದರು.
"ವಿಮಾನ ನಿಲ್ದಾಣವನ್ನು ಮೂರನೇ ವ್ಯಕ್ತಿಗೆ ನೀಡಲಾಗಿದೆ, ಇದು ಸಾರ್ವಜನಿಕ- ಖಾಸಗಿ- ಸಹಭಾಗಿತ್ವ ಮಾದರಿಯ ನೀತಿಗೆ ಅನುಗುಣವಾಗಿಲ್ಲ. ಇದು ಪಾಲುದಾರಿಕೆಯಲ್ಲ ಬದಲಿಗೆ ಅವರಿಗೆ ಒಪ್ಪಿಸುವುದಾಗಿದೆ," ಎಂದು ಆಕ್ಷೇಪಣೆ ವ್ಯಕ್ತಪಡಿಸಿದರು.

ವಕೀಲ ಹಾರನಹಳ್ಳಿ ವಾದವನ್ನು ಬಲವಾಗಿ ವಿರೋಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ. ಬಿ. ನರಗುಂದ್, "ಅರ್ಜಿಯ ನಿರ್ವಹಣೆಯನ್ನು ಪ್ರಶ್ನಿಸಿದರು. ಅರ್ಜಿದಾರ ಒಕ್ಕೂಟದ ಕೇರಳ ವಿಭಾಗವು ಕೇರಳ ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಮನವಿಯನ್ನು ವಜಾ ಮಾಡಲಾಗಿದೆ. ಹೀಗಾಗಿ, ಈ ಮನವಿಯು ನಿರ್ವಹಣೆಗೆ ಅರ್ಹವಲ್ಲ," ಎಂದರು.
ಇದಕ್ಕೆ ಆಕ್ಷೇಪಿಸಿದ ವಕೀಲ ಹಾರನಹಳ್ಳಿ, "ಅದಾನಿ ಸಮೂಹಕ್ಕೆ ತಿರುವನಂತಪುರಂನ ವಿಮಾನ ನಿಲ್ದಾಣವನ್ನು ಗುತ್ತಿಗೆ ನೀಡುವುದಕ್ಕೆ ಮಾತ್ರ ಕೇರಳ ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಮನವಿ ಸೀಮಿತವಾಗಿತ್ತು. ಆ ಆದೇಶವು ಮಂಗಳೂರು ವಿಮಾನ ನಿಲ್ದಾಣದ ಖಾಸಗೀಕರಣ ನೀತಿಯನ್ನು ಪ್ರಶ್ನಿಸುವುದನ್ನು ವಿಮುಖಗೊಳಿಸುವುದಿಲ್ಲ," ಎಂದು ವಾದಿಸಿದರು.
ಆಗ ಹೆಚ್ಚುವರಿ ಸಾಲಿಸಿಟರ್ ಜನರಲ್ ನರಗುಂದ್, "ದ್ವಿತೀಯ ಮತ್ತು ತೃತೀಯ ದರ್ಜೆ ನಗರಗಳಲ್ಲಿ ವಿಮಾನ ನಿಲ್ದಾಣಗಳನ್ನು ನಿರ್ಮಿಸಲು ನಿಧಿ ಸಂಗ್ರಹಿಸುವ ದೃಷ್ಟಿಯಿಂದ ಹೀಗೆ ಮಾಡಲಾಗಿದ್ದು, ಪ್ರತಿ ಬಾರಿಯೂ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಅನುದಾನ ಮೀಸಲಿಡಲು ಕಷ್ಟವಾಗಲಿದೆ. ಇದಕ್ಕಾಗಿ ಹೊಸ ವಿಧಾನವನ್ನು ಅಭಿವೃದ್ಧಿಪಡಿಸಲಾಗಿದ್ದು, ವಿಮಾನ ನಿಲ್ದಾಣಗಳನ್ನು ಗುತ್ತಿಗೆ ನೀಡುವ ಮೂಲಕ ಅದರಿಂದ ಸಂಗ್ರಹವಾಗುವ ಹಣವನ್ನು ಹೊಸ ವಿಮಾನ ನಿಲ್ದಾಣಗಳನ್ನು ನಿರ್ಮಿಸಲು ಎಎಐ ವಿನಿಯೋಗಿಸಲಿದೆ."
"ಇದರ ಉದ್ದೇಶ ಮಂಗಳೂರು ಮತ್ತು ಮುಂಬೈ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸುವುದಷ್ಟೇ ಅಲ್ಲ ಕಲಬುರಗಿ ಮತ್ತು ಬೀದರ್ ಇತ್ಯಾದಿ ಕಡೆಯಲ್ಲೂ ವಿಮಾನ ನಿಲ್ದಾಣ ನಿರ್ಮಿಸುವುದಾಗಿದೆ. ಇಲ್ಲಿ ಸಂಗ್ರಹವಾಗುವ ಹಣವನ್ನು ವರ್ಗಾಯಿಸುವ ಮೂಲಕ ಸಮಗ್ರ ದೃಷ್ಟಿಯಿಂದ ಯೋಜನೆ ಜಾರಿಗೊಳಿಸಲಾಗಿದೆ," ಎಂದರು.
"ಕೇರಳ ಹೈಕೋರ್ಟ್ನಲ್ಲಿ ಮನವಿಯು ತೀರ್ಪಿಗೆ ಬಾಕಿ ಇರುವಾಗ ಕರ್ನಾಟಕ ಹೈಕೋರ್ಟ್ನಲ್ಲಿ ಮನವಿ ಸಲ್ಲಿಸಲಾಗಿದೆ. ಹೀಗಾಗಿ ಇದನ್ನು ವಜಾ ಮಾಡಬೇಕು," ಎಂದು ನಗರಗುಂದ್ ನ್ಯಾಯಾಲಯಕ್ಕೆ ಕೋರಿದರು.
Recommended Video
ಪ್ರಕರಣದಲ್ಲಿ ಪ್ರತಿವಾದಿಯಾಗಿರುವ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಕೇಂದ್ರ ಸರ್ಕಾರದ ವಾದಕ್ಕೆ ಒಪ್ಪಿಗೆ ಸೂಚಿಸಿತು. ಕಳೆದ ಫೆಬ್ರವರಿಯಲ್ಲಿ ನ್ಯಾಯಾಲಯವು ನೋಟಿಸ್ ಜಾರಿ ಮಾಡಿತ್ತು.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications