ಮಂಗಳೂರು : ಸೆ.22ರಂದು ಕಾರು ಬಿಡಿ, ಸೈಕಲ್ ತುಳಿಯಿರಿ
ಮಂಗಳೂರು, ಸೆಪ್ಟೆಂಬರ್ 08 : ಮಂಗಳೂರು ನಗರದಲ್ಲಿ ಸೆಪ್ಟೆಂಬರ್ 22 ರಂದು ವಿಶ್ವ ಕಾರು ರಹಿತ ದಿನ ಆಚರಣೆ ಮಾಡಲಾಗುತ್ತದೆ. ಕಾಲ್ನಡಿಗೆ, ಸೈಕ್ಲಿಂಗ್ ಹಾಗೂ ಸಮೂಹ ಸಾರಿಗೆಗಳನ್ನು ಉಪಯೋಗಿಸಲು ಉತ್ತೇಜಿಸುವ ಸಲುವಾಗಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಮಂಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ವಕೀಲರ ಸಂಘ, ಮಂಗಳೂರು ಬೈಸಿಕಲ್ ಕ್ಲಬ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಗಳೂರು ಲಯನ್ಸ್ ಕ್ಲಬ್ ಮುಂತಾದವುಗಳು ಜಂಟಿಯಾಗಿ ಈ ಅಭಿಯಾನವನ್ನು ನಗರದಲ್ಲಿ ಆಯೋಜಿಸಿವೆ.[ವೆಬ್ ಸೈಟ್ ಆರಂಭಿಸಿದ ಮಂಗಳೂರು ಬೈಸಿಕಲ್ ಕ್ಲಬ್]

ಸೆ. 22 ರಂದು 'ವಿಶ್ವ ಕಾರು ರಹಿತ ದಿನ'ವನ್ನು ಹಲವು ದೇಶಗಳಲ್ಲಿ ಆಚರಣೆ ಮಾಡಲಾಗುತ್ತದೆ. ಮಂಗಳೂರಿನಲ್ಲಿಯೂ ಈ ದಿನವನ್ನು ಆಚರಿಸಲು ನಿರ್ಧರಿಸಲಾಗಿದೆ ಮತ್ತು ಪ್ರತಿ ತಿಂಗಳ 3ನೇ ಶನಿವಾರ ವಾಹನ ರಹಿತ ದಿನ ನಡೆಸಲು ನಿರ್ಧರಿಸಲಾಗಿದೆ.[ಬೈಸಿಕಲ್ ಗಿದೆ ತ್ರಿಚಕ್ರ ವಾಹನದ ನಂಬರ್ ಪ್ಲೇಟ್]
Must Read : ಬೆರಳ ತುದಿಯಲ್ಲಿ ರಿಲಯನ್ಸ್ ಕಾರ್ ವಿಮೆ ನವೀಕರಣ
ಸೆ. 22 ರಂದು ನಗರದ ಟೌನ್ ಹಾಲ್ನಿಂದ ಬೆಳಗ್ಗೆ 7.30ಕ್ಕೆ ಬೈಸಿಕಲ್ ಜಾಥಾ ಹಮ್ಮಿಕೊಳ್ಳಲಾಗಿದೆ. ಸರ್ಕಾರಿ ಕಚೇರಿ, ಸರ್ಕಾರಿ ಮತ್ತು ಖಾಸಗಿ ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಸದಸ್ಯರು ಈ ಜಾಥಾದಲ್ಲಿ ಪಾಲ್ಗೊಳ್ಳಲಿದ್ದಾರೆ.[8 ಜನರನ್ನು ಹೊತ್ತೊಯ್ಯುವ ಡಿಫರೆಂಟ್ ಸೈಕಲ್]
ಜಾಥಾದಲ್ಲಿ ಪಾಲ್ಗೊಳ್ಳ ಬಯಸುವವರು ಹೆಸರು ಮತ್ತು ವಿವರಗಳನ್ನು [email protected] ಗೆ ಸಪ್ಟೆಂಬರ್ 15ರೊಳಗೆ ಕಳಿಸಬೇಕು. ಹೆಚ್ಚಿನ ವಿವರಗಳಿಗೆ www.mangalorebicycleclub.com ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications