ಗುಡ್ಡಗಾಡು ಓಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ಚಾಂಪಿಯನ್
ಮಂಗಳೂರು, ಅಕ್ಟೋಬರ್ 11: ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಗುಡ್ಡಗಾಡು ಓಟದಲ್ಲಿ ಆಳ್ವಾಸ್ ಪ.ಪೂ. ಕಾಲೇಜು ಬಾಲಕರ ಹಾಗೂ ಬಾಲಕಿಯರ ಎರಡೂ ವಿಭಾಗದಲ್ಲಿ 13ನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದ್ದು ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ನೂಜಿ ಬಾಳ್ತಿಲದ ಬೆಥನಿ ಸಂಯುಕ್ತ ಪಿ.ಯು. ಕಾಲೇಜಿನಲ್ಲಿ ಈ ಕ್ರೀಡಾಕೂಟ ನಡೆದಿತ್ತು.
ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಬೆಥನಿ ಸಂಯುಕ್ತ ಪಿ.ಯು. ಕಾಲೇಜು ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಎಸ್.ಡಿ.ಎಂ. ಕಾಲೇಜು, ಉಜಿರೆ ಪಡೆದುಕೊಂಡಿದೆ.

ಬಾಲಕರ ವಿಭಾಗದಲ್ಲಿ ಆಳ್ವಾಸ್ನ ವಿದ್ಯಾರ್ಥಿಗಳಾದ ಶಶಿಧರ್ ಬಿ.ಎಲ್( ಪ್ರಥಮ), ಶಂಕ್ರಪ್ಪ (ದ್ವಿತೀಯ), ರಕ್ಷಿತ್ ಆರ್ (ತೃತೀಯ), ಮಿಲನ್(4ನೇ ಸ್ಥಾನ), ಹರ್ಷಿತ್ ಕೆ - ಸರ್ಕಾರಿ ಪ.ಪೂ. ಕಾಲೇಜು, ಬೆಟ್ಟಂಪಾಡಿ (5ನೇ ಸ್ಥಾನ), ಬಸವರಾಜ್ ಗೋಡಿ - ಆಳ್ವಾಸ್ (6ನೇ ಸ್ಥಾನ) ಪಡೆದುಕೊಂಡಿದ್ದಾರೆ.
ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ವಿದ್ಯಾರ್ಥಿನಿಯರಾದ ಪ್ರಿಯಾ ಎಲ್.ಡಿ (ಪ್ರಥಮ), ಸಂಧ್ಯಾ ಕೆ.ಆರ್ (ದ್ವಿತೀಯ), ನಂದಿನಿ (ತೃತೀಯ), ರಕ್ಷಿತಾ (4ನೇ ಸ್ಥಾನ), ಎಸ್.ಡಿ.ಎಂ. ಉಜಿರೆ ವಿದ್ಯಾರ್ಥಿನಿಯರಾದ ಸಿಂಚನಾ (5ನೇ ಸ್ಥಾನ), ತ್ರಿಷಾ (6ನೇ ಸ್ಥಾನ) ಪಡೆದುಕೊಂಡಿದ್ದಾರೆ.
ವಿಜೇತ ಕ್ರೀಡಾಪಟುಗಳು ನವೆಂಬರಿನಲ್ಲಿ 11 ರಿಂದ 13 ರವರೆಗೆ ಬ್ರಹ್ಮಾವರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಗುಡ್ಡಗಾಡು ಓಟಕ್ಕೆ ಆಯ್ಕೆಯಾಗಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications