ಮಂಗಳೂರಿನಲ್ಲಿ ಸಿನಿಮೀಯ ರೀತಿಯಲ್ಲಿ ವಿದ್ಯಾರ್ಥಿ ಅಪಹರಿಸಿ ಬಿಡುಗಡೆ ಮಾಡಿದ ಯುವಕರು
ಮಂಗಳೂರು, ಡಿಸೆಂಬರ್ 07: ಬಿಹಾರ್, ಉತ್ತರಪ್ರದೇಶದಲ್ಲಿ ನಡೆಯುತ್ತಿದ್ದ ಅಪಹರಣ ಪ್ರಕರಣಗಳು ಈಗ ಮಂಗಳೂರಿನಲ್ಲೂ ನಡೆಯಲು ಆರಂಭಿಸಿವೆ. ವಿದ್ಯಾರ್ಥಿಯೋರ್ವನನ್ನು ಅಪಹರಿಸಿ ಹಲ್ಲೆ ನಡೆಸಿದ ಯುವಕರ ತಂಡ ನಂತರ ವಿದ್ಯಾರ್ಥಿಯ ಮನೆಯವರ ಬಳಿ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ನಗರದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಬಿಬಿಎಂ ವಿದ್ಯಾರ್ಥಿ, ಫಳ್ನೀರ್ ನಿವಾಸಿ ಶಿಮಾಕ್ ಹಸನ್(22) ನನ್ನು 5 ಮಂದಿ ಯುವಕರ ತಂಡ ಸಿನಿಮೀಯ ರೀತಿಯಲ್ಲಿ ಅಪಹರಿಸಿತ್ತು.
ಘಟನೆಯ ವಿವರ:
ಡಿಸೆಂಬರ್ 05 ರಂದು ಸಂಜೆ ನಗರದ ಅತ್ತಾವರ ಮಳಿಗೆಯೊಂದರ ಬಳಿ ಶಿಮಾಕ್ ಹಾಗು ಸ್ನೇಹಿತರು ಉಪಹಾರ ಸೇವಿಸುತ್ತಿದ್ದರು. ಆ ಸಂದರ್ಭದಲ್ಲಿ ಅಲ್ಲಿಗೆ ಬೈಕ್ ನಲ್ಲಿ ಬಂದ ಶಿಮಾಕ್ ಅವರ ಸಹಪಾಠಿ ಅಂಕಿತ್ ಸ್ವಲ್ಪ ಕೆಲಸವಿದೆ ಬಾ ಎಂದು ಶಿಮಾಕ್ ನನ್ನು ಕರೆದುಕೊಂಡು ಹೋಗಿದ್ದಾನೆ.

ತುಂಬಾ ಹೊತ್ತಾದ ಬಳಿಕವೂ ಶಿಮಾಕ್ ವಾಪಸ್ಸಾಗದ ಕಾರಣ ಸ್ನೇಹಿತರು ಶಿಮಾಕ್ ಮೊಬೈಲ್ ಗೆ ಕರೆ ಮಾಡಿದ್ದಾರೆ. ಮೊದಲು ಯಾರೂ ಕರೆಯನ್ನು ಸ್ವೀಕರಿಸಿಲ್ಲ. ಬಳಿಕ ಮತ್ತೊಂದು ಬಾರಿ ಕರೆ ಮಾಡಿದಾಗ ದುಷ್ಕರ್ಮಿಗಳು ಕರೆ ಸ್ವೀಕರಿಸಿ "ಶಿಮಾಕ್ ನನ್ನು ಮೂಡುಬಿದಿರೆಗೆ ಕರೆದೊಯ್ಯುತ್ತಿದ್ದೇವೆ" ಎಂದು ತಿಳಿಸಿದ್ದಾರೆ.
"ಶಿಮಾಕ್ ನನ್ನು ಬಿಡಬೇಕಾದರೆ 50 ಸಾವಿರ ರೂಪಾಯಿ ನೀಡಬೇಕು. ಇಲ್ಲದಿದ್ದರೆ ಶಿಮಾಕ್ ನನ್ನು ಬಿಡುವುದಿಲ್ಲ" ಎಂದು ಬೆದರಿಕೆ ಒಡ್ಡಿದ್ದಾರೆ. ನಂತರ ಮತ್ತೆ ಕರೆ ಮಾಡಿ ಆತನನ್ನು ಕೊಲ್ಲುವುದಾಗಿ ಬೆದರಿಸಿದ್ದಾರೆ.
ಆಗ ಕುಟುಂಬಸ್ಥರು 20 ಸಾವಿರ ರೂಪಾಯಿ ಕೊಡಲು ಒಪ್ಪಿದ್ದಾರೆ. ನಗರದ ಕೆಪಿಟಿ ಬಳಿ ದುಷ್ಕರ್ಮಿಗಳಿಗೆ ಬೇಡಿಕೆಯ ಹಣ ತಲುಪಿಸಿದ ತಕ್ಷಣ, ಶಿಮಾಕ್ ನನ್ನು ಸ್ವಿಫ್ಟ್ ಕಾರಿನಲ್ಲಿ ತಂದು ರಸ್ತೆಗೆ ತಳ್ಳಿ ಪರಾರಿಯಾಗಿದ್ದಾರೆ.
ಶಿಮಾಕ್ ನನ್ನು ಅಪಹರಿಸಿ ಹಲ್ಲೆ ನಡೆಸಿದವರು ಗೌತಮ್ , ಲಾಯ್ ವೇಗಸ್ , ಅಂಕಿತ್ , ಆದಿತ್ಯ ವಾಲ್ಕೆ ಎಂದು ಗುರುತಿಸಲಾಗಿದ್ದು ಈ ಕುರಿತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಪಿನಲ್ಲಿದ್ದ ಐವರು ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಅಪಹರಣಕ್ಕೆ ಬಳಸಿದ ಸ್ವಿಫ್ಟ್ ಕಾರು ಹಾಗೂ ಅದರಲ್ಲಿದ್ದ ಕಬ್ಬಿಣದ ರಾಡ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications