ಶೀಘ್ರದಲ್ಲೇ ಮಂಗಳೂರಿನ ಕಡಲ ತೀರಗಳು ರಾತ್ರಿಯೂ ಪ್ರವಾಸಿಗರ ಪ್ರವೇಶಕ್ಕೆ ಮುಕ್ತ
ಮಂಗಳೂರು, ಡಿಸೆಂಬರ್ 27: ಮಂಗಳೂರು ಅಂದಾಕ್ಷಣವೇ ನೆನಪಾಗುವುದು ಅಲ್ಲಿನ ಸಮುದ್ರ ತೀರ. ಜೀವನದಲ್ಲಿ ಅದೆಷ್ಟು ಒತ್ತಡಗಳಿದ್ದರೂ ಈ ಸಮದ್ರ ತೀರದಲ್ಲಿ ನಿಂತು ದಿಗಂತದತ್ತ ನೋಡಿದರೆ ಸಾಕು ಮನಸ್ಸು ಹಗುರಾಗುತ್ತದೆ. ಇನ್ನು ಮೋಜು ಮಸ್ತಿಗೂ ಸಮುದ್ರ ತೀರಾ ಸೂಕ್ತ ಸ್ಥಳ. ಹೀಗಾಗಿ ಮಂಗಳೂರಿನ ಸಮುದ್ರ ತೀರಗಳನ್ನು ಅರಿಸಿ ಬರುವವರ ಸಂಖ್ಯೆ ದಿನಕ್ಕೆ ಸಾವಿರದ ಗಡಿ ದಾಟುತ್ತದೆ. ಇನ್ನು ಈ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಮಯದಲ್ಲಂತೂ ಸಮದ್ರ ತೀರಗಳು ಜನರಿಂದ ತುಂಬಿತುಳಕುತ್ತದೆ.
ಹಬ್ಬ ಹಾಗೂ ವಿಶೇಷ ದಿನಗಳನ್ನು ಬಿಟ್ಟು ಉಳಿದ ದಿನಗಳಲ್ಲಿಯೂ ಮಂಗಳೂರಿನ ಕಡಲ ತೀರಗಳು ಜನರಿಂದ ತುಂಬಿರುತ್ತದೆ. ಈವರೆಗೆ ಮುಂಜಾನೆಯಿಂದ ರಾತ್ರಿ ತನಕ ಇಲ್ಲಿ ಜನರ ಪ್ರವೇಶಕ್ಕೆ ಅನುಮತಿ ಇದ್ದು, ಶೀಘ್ರದಲ್ಲೇ ಪ್ರವಾಸಿಗರ ಬಹುದಿನದ ಬೇಡಿಕೆ ಈಡೇರಲಿದೆ. ಹೌದು, ಮಂಗಳೂರಿನ ಕಡಲ ತೀರಗಳು ಶೀಘ್ರದಲ್ಲೇ ರಾತ್ರಿ ಸಮಯದಲ್ಲೂ ಪ್ರವಾಸಿಗರಿಗೆ ಮುಕ್ತವಾಗುವ ಸಾಧ್ಯತೆ ಹೆಚ್ಚಿದೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಈಗಾಗಲೇ ಸಿದ್ಧತೆ ಆರಂಭಿಸಿದ್ದು, ಬೀದಿ ದೀಪಗಳು, ಲೈಫ್ ಗಾರ್ಡ್ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಈ ಬಗ್ಗೆ ಸ್ವತಃ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
'ಮೊದಲು ಮಂಗಳೂರಿನ ಜನಪ್ರಿಯ ಕಡಲ ತೀರವಾದ ಪಣಂಬೂರು ಬೀಚ್ಅನ್ನು ರಾತ್ರಿ 1 ಗಂಟೆವರೆಗೆ ಪ್ರವಾಸಿಗರಿಗೆ ತೆರೆಯಲು ಯೋಜಿಸಲಾಗಿದೆ. ನಂತರದ ದಿನಗಳಲ್ಲಿ ತಣ್ಣೀರು ಬಾವಿ ಬೀಚ್. ಬ್ಲೂಫ್ಲ್ಯಾಗ್ ಬೀಚ್ಗಳಲ್ಲೂ ಈ ಕ್ರಮ ಅನುಸರಿಸಲಾಗುವುದು. ಈಗಾಗಲೇ ಈ ಯೋಜನೆ ಜಾರಿಗೊಳಿಸಲು ಉದ್ದೇಶವಿತ್ತು. ಆದರೆ ಕೆಲ ಕಾರಣಗಳಿಂದ ಇದು ವಿಳಂಬವಾಗಿದೆ' ಎಂದು ಹೇಳಿದರು.
ಕಣ್ಣಾವಲು, ಬೆಳಕು, ಲೈಫ್ ಗಾರ್ಡ್ಗಳಂತಹ ಎಲ್ಲಾ ಅಗತ್ಯ ಭದ್ರತಾ ವ್ಯವಸ್ಥೆಗಳು ಜಾರಿಯಾದ ನಂತರ ಒಂದು ಅಥವಾ ಎರಡು ವಾರಗಳಲ್ಲಿ ಕಡಲ ತೀರಗಳು ರಾತ್ರಿ ಸಮಯದಲ್ಲೂ ಪ್ರವಾಸಿಗರಿಗೆ ಮುಕ್ತವಾಗುವ ಸಾಧ್ಯತೆ ಇದೆ. ಇನ್ನು ರಾತ್ರಿ ವೇಳೆಯಲ್ಲೂ ಬೀಚ್ಗಳನ್ನು ಪ್ರವಾಸಿಗರಿಗೆ ಮುಕ್ತಗೊಳಿಸಬೇಕು ಎಂಬ ಬೇಡಿಕೆ ಅನೇಕ ವರ್ಷಗಳಿಂದ ಕೇಳಿ ಬಂದಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ಅನುಮತಿ ನೀಡಿದೆ.
ಇನ್ನು ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾತನಾಡಿ,' ಕಡಲ ತೀರಗಳನ್ನು ಸುರಕ್ಷಿತಗೊಳಿಸಿದ ಮೇಲೆ ರಾತ್ರಿಯಲ್ಲಿ ಪ್ರವಾಸಿಗರಿಗೆ ಪ್ರವೇಶ ನೀಡಲು ನಮಗೆ ಯಾವುದೇ ತೊಂದರೆ ಇಲ್ಲ. ಆದರೆ, ಪಬ್ಗಳು, ಬಾರ್ ಮತ್ತು ರೆಸ್ಟೋರೆಂಟ್ಗಳನ್ನು ಮಧ್ಯರಾತ್ರಿ 1 ಗಂಟೆಯವರೆಗೆ ತೆರೆದಿಡುವ ನಿಯಮವು ಸದ್ಯಕ್ಕೆ ಬೆಂಗಳೂರು ಹೊರತುಪಡಿಸಿಇತರ ನಗರಗಳಿಗೆ ಅನ್ವಯಿಸುವುದಿಲ್ಲ' ಎಂದು ತಿಳಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications