ಶೀಘ್ರದಲ್ಲೇ ಮಂಗಳೂರಿನ ಕಡಲ ತೀರಗಳು ರಾತ್ರಿಯೂ ಪ್ರವಾಸಿಗರ ಪ್ರವೇಶಕ್ಕೆ ಮುಕ್ತ
ಮಂಗಳೂರು, ಡಿಸೆಂಬರ್ 27: ಮಂಗಳೂರು ಅಂದಾಕ್ಷಣವೇ ನೆನಪಾಗುವುದು ಅಲ್ಲಿನ ಸಮುದ್ರ ತೀರ. ಜೀವನದಲ್ಲಿ ಅದೆಷ್ಟು ಒತ್ತಡಗಳಿದ್ದರೂ ಈ ಸಮದ್ರ ತೀರದಲ್ಲಿ ನಿಂತು ದಿಗಂತದತ್ತ ನೋಡಿದರೆ ಸಾಕು ಮನಸ್ಸು ಹಗುರಾಗುತ್ತದೆ. ಇನ್ನು ಮೋಜು ಮಸ್ತಿಗೂ ಸಮುದ್ರ ತೀರಾ ಸೂಕ್ತ ಸ್ಥಳ. ಹೀಗಾಗಿ ಮಂಗಳೂರಿನ ಸಮುದ್ರ ತೀರಗಳನ್ನು ಅರಿಸಿ ಬರುವವರ ಸಂಖ್ಯೆ ದಿನಕ್ಕೆ ಸಾವಿರದ ಗಡಿ ದಾಟುತ್ತದೆ. ಇನ್ನು ಈ ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಮಯದಲ್ಲಂತೂ ಸಮದ್ರ ತೀರಗಳು ಜನರಿಂದ ತುಂಬಿತುಳಕುತ್ತದೆ.
ಹಬ್ಬ ಹಾಗೂ ವಿಶೇಷ ದಿನಗಳನ್ನು ಬಿಟ್ಟು ಉಳಿದ ದಿನಗಳಲ್ಲಿಯೂ ಮಂಗಳೂರಿನ ಕಡಲ ತೀರಗಳು ಜನರಿಂದ ತುಂಬಿರುತ್ತದೆ. ಈವರೆಗೆ ಮುಂಜಾನೆಯಿಂದ ರಾತ್ರಿ ತನಕ ಇಲ್ಲಿ ಜನರ ಪ್ರವೇಶಕ್ಕೆ ಅನುಮತಿ ಇದ್ದು, ಶೀಘ್ರದಲ್ಲೇ ಪ್ರವಾಸಿಗರ ಬಹುದಿನದ ಬೇಡಿಕೆ ಈಡೇರಲಿದೆ. ಹೌದು, ಮಂಗಳೂರಿನ ಕಡಲ ತೀರಗಳು ಶೀಘ್ರದಲ್ಲೇ ರಾತ್ರಿ ಸಮಯದಲ್ಲೂ ಪ್ರವಾಸಿಗರಿಗೆ ಮುಕ್ತವಾಗುವ ಸಾಧ್ಯತೆ ಹೆಚ್ಚಿದೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಈಗಾಗಲೇ ಸಿದ್ಧತೆ ಆರಂಭಿಸಿದ್ದು, ಬೀದಿ ದೀಪಗಳು, ಲೈಫ್ ಗಾರ್ಡ್ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಈ ಬಗ್ಗೆ ಸ್ವತಃ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
'ಮೊದಲು ಮಂಗಳೂರಿನ ಜನಪ್ರಿಯ ಕಡಲ ತೀರವಾದ ಪಣಂಬೂರು ಬೀಚ್ಅನ್ನು ರಾತ್ರಿ 1 ಗಂಟೆವರೆಗೆ ಪ್ರವಾಸಿಗರಿಗೆ ತೆರೆಯಲು ಯೋಜಿಸಲಾಗಿದೆ. ನಂತರದ ದಿನಗಳಲ್ಲಿ ತಣ್ಣೀರು ಬಾವಿ ಬೀಚ್. ಬ್ಲೂಫ್ಲ್ಯಾಗ್ ಬೀಚ್ಗಳಲ್ಲೂ ಈ ಕ್ರಮ ಅನುಸರಿಸಲಾಗುವುದು. ಈಗಾಗಲೇ ಈ ಯೋಜನೆ ಜಾರಿಗೊಳಿಸಲು ಉದ್ದೇಶವಿತ್ತು. ಆದರೆ ಕೆಲ ಕಾರಣಗಳಿಂದ ಇದು ವಿಳಂಬವಾಗಿದೆ' ಎಂದು ಹೇಳಿದರು.
ಕಣ್ಣಾವಲು, ಬೆಳಕು, ಲೈಫ್ ಗಾರ್ಡ್ಗಳಂತಹ ಎಲ್ಲಾ ಅಗತ್ಯ ಭದ್ರತಾ ವ್ಯವಸ್ಥೆಗಳು ಜಾರಿಯಾದ ನಂತರ ಒಂದು ಅಥವಾ ಎರಡು ವಾರಗಳಲ್ಲಿ ಕಡಲ ತೀರಗಳು ರಾತ್ರಿ ಸಮಯದಲ್ಲೂ ಪ್ರವಾಸಿಗರಿಗೆ ಮುಕ್ತವಾಗುವ ಸಾಧ್ಯತೆ ಇದೆ. ಇನ್ನು ರಾತ್ರಿ ವೇಳೆಯಲ್ಲೂ ಬೀಚ್ಗಳನ್ನು ಪ್ರವಾಸಿಗರಿಗೆ ಮುಕ್ತಗೊಳಿಸಬೇಕು ಎಂಬ ಬೇಡಿಕೆ ಅನೇಕ ವರ್ಷಗಳಿಂದ ಕೇಳಿ ಬಂದಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ಅನುಮತಿ ನೀಡಿದೆ.
ಇನ್ನು ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಮಾತನಾಡಿ,' ಕಡಲ ತೀರಗಳನ್ನು ಸುರಕ್ಷಿತಗೊಳಿಸಿದ ಮೇಲೆ ರಾತ್ರಿಯಲ್ಲಿ ಪ್ರವಾಸಿಗರಿಗೆ ಪ್ರವೇಶ ನೀಡಲು ನಮಗೆ ಯಾವುದೇ ತೊಂದರೆ ಇಲ್ಲ. ಆದರೆ, ಪಬ್ಗಳು, ಬಾರ್ ಮತ್ತು ರೆಸ್ಟೋರೆಂಟ್ಗಳನ್ನು ಮಧ್ಯರಾತ್ರಿ 1 ಗಂಟೆಯವರೆಗೆ ತೆರೆದಿಡುವ ನಿಯಮವು ಸದ್ಯಕ್ಕೆ ಬೆಂಗಳೂರು ಹೊರತುಪಡಿಸಿಇತರ ನಗರಗಳಿಗೆ ಅನ್ವಯಿಸುವುದಿಲ್ಲ' ಎಂದು ತಿಳಿಸಿದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications