ಕೋಟಿ ಚೆನ್ನಯ್ಯರ ಬಗ್ಗೆ ಅವಹೇಳನ: ಬಿಜೆಪಿ ಮುಖಂಡ ಕ್ಷಮೆಯಾಚನೆ
ಮಂಗಳೂರು, ಫೆಬ್ರವರಿ 10: ಕಾಂಗ್ರೆಸ್ ಮುಖಂಡ ಜನಾರ್ಧನ್ ಪೂಜಾರಿ ಹಾಗೂ ಬಿಲ್ಲವ ಸಮಾಜದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಅವರು ಮಂಗಳವಾರ ಕೆಲ್ಲಪುತ್ತಿಗೆಯ ಪುರಾತನ ಶ್ರೀಕ್ಷೇತ್ರ ಭೂತರಾಜಗುಡ್ಡೆಯ ಶ್ರೀ ಧರ್ಮರಸು ದೈವ, ಕುಕ್ಕಿನಂತಾಯ, ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ ಗರಡಿಗೆ ಭೇಟಿ ನೀಡಿ, ತಪ್ಪು ಕಾಣಿಕೆ ಸಲ್ಲಿಸಿ ಕ್ಷಮೆ ಯಾಚಿಸಿದರು.
ಈ ಕುರಿತು ಮಾತನಾಡಿದ ಜಗದೀಶ್ ಅಧಿಕಾರಿ, ""ನಾನು ಇತ್ತೀಚೆಗೆ ನೀಡಿದ ಹೇಳಿಕೆಗಳಿಂದಾಗಿ ಬಿಲ್ಲವ ಸಮುದಾಯ ಹಾಗೂ ಜನಾರ್ಧನ್ ಪೂಜಾರಿ ಅವರಿಗೆ, ಅವರ ಅಭಿಮಾನಿಗಳಿಗೆ ನೋವುಂಟಾಗಿದೆ. ನನ್ನಿಂದಾದ ತಪ್ಪಿಗೆ ಕೋಟಿ ಚೆನ್ನಯರ ಗರಡಿಯಲ್ಲಿ ಕ್ಷಮೆಯಾಚಿಸಿ, ತಪ್ಪು ಕಾಣಿಕೆ ಸಲ್ಲಿಸುವ ಮೂಲಕ ಎಲ್ಲ ವಿವಾದಗಳಿಗೆ ತಾನು ಇತಿಶ್ರೀ ನೀಡಲು ನಿರ್ಧರಿಸಿದ್ದೇನೆ'' ಎಂದರು.

ನಂತರ ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ಧನ್ ಪೂಜಾರಿ ಅವರ ನಿವಾಸಕ್ಕೆ ತೆರಳಿ ಅವರಲ್ಲಿ ಕ್ಷಮೆಯಾಚಿಸುತ್ತೇನೆ. ಜತೆಗೆ ಕುದ್ರೋಳಿ ಹಾಗೂ ಗೆಜ್ಜೆಗಿರಿ ಕ್ಷೇತ್ರಕ್ಕೆ ತೆರಳಿ ತಪ್ಪು ಕಾಣಿಕೆ ಸಲ್ಲಿಸಿ, ಕ್ಷಮೆಯಾಚನೆ ಮಾಡುವುದಾಗಿಯೂ ಜಗದೀಶ್ ಅಧಿಕಾರಿ ತಿಳಿಸಿದ್ದಾರೆ.
ಏನಿದು ವಿವಾದ?
ಮೂಡಬಿದಿರೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ, ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ್ ಪೂಜಾರಿ ಬಗ್ಗೆ ಅವಹೇಳನ ಮಾಡಿದ್ದರು. ಇದನ್ನು ಬಿಲ್ಲವ ಸಮಾಜದ ಹಿರಿಯ ಮುಖಂಡರೊಬ್ಬರು ಕರೆ ಮಾಡಿ ಪ್ರಶ್ನೆ ಮಾಡಿದ್ದರು. ಆದರೆ ಅವರ ಫೋನ್ ಕರೆಗೆ ಉದಾಸೀನ ರೀತಿಯಲ್ಲಿ ಜಗದೀಶ್ ಅಧಿಕಾರಿ ಪ್ರತಿಕ್ರಿಯೆ ನೀಡಿದ್ದರು.

ಅಲ್ಲದೆ ಕರೆ ಕಟ್ ಮಾಡದೆ ಬಿಲ್ಲವರ ಪ್ರಮುಖ ಶಕ್ತಿಗಳಾದ ಕೋಟಿ ಚೆನ್ನಯರ ಬಗ್ಗೆ ಅವಹೇಳನಕಾರಿ ರೀತಿಯಲ್ಲಿ ಮಾತನಾಡಿದ್ದರು. ಅವರ ಪ್ರತೀ ಮಾತುಗಳು ಫೋನ್ನಲ್ಲಿ ರೆಕಾರ್ಡ್ ಆಗಿತ್ತು.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications