ಮಂಗಳೂರು ಸೈಂಟ್ ಲಾರೆನ್ಸ್ ಚರ್ಚ್ ವಾರ್ಷಿಕ ಮಹೋತ್ಸವ
ಮಂಗಳೂರು, ಆಗಸ್ಟ್, 11: ಕ್ರೈಸ್ತರು ಮನಸ್ಸಿನಲ್ಲಿ ಕನಸು, ಕಣ್ಣಲ್ಲಿ ದಯೆ, ಮುಖದಲ್ಲಿ ಸಂತೋಷ, ಬಾಯಲ್ಲಿ ಸತ್ಯ, ಹೃದಯದಲ್ಲಿ ಪ್ರೀತಿ, ಸೇವಾ ಮನೋಭಾವನೆ ಹೊಂದಿ ಬಾಳ್ವೆ ನಡೆಸಬೇಕು ಎಂದು ಬಳ್ಳಾರಿಯ ಬಿಷಪ್ ರೈ|ರೆ|ಡಾ| ಹೆನ್ರಿ ಡಿಸೋಜಾ ಕರೆ ನೀಡಿದರು.
ಬೋಂದೆಲ್ ಸೈಂಟ್ ಲಾರೆನ್ಸ್ ಚರ್ಚ್ ಮತ್ತು ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಸೋಮವಾರ ನಡೆದಿದ್ದು, ಇದರಲ್ಲಿ ಭಾಗವಹಿಸಿದ ಇವರು ಸಂಭ್ರಮದ ಬಲಿ ಪೂಜೆಯ ನೇತೃತ್ವ ವಹಿಸಿದ್ದರು. ಬೋಂದೆಲ್ ಚರ್ಚ್ ಪುಣ್ಯ ಕ್ಷೇತ್ರವಾಗಿ ಬೆಳವಣಿಗೆ ಹೊಂದುತ್ತಿರುವ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.[ರೈಲು ಅಪಘಾತ ತಡೆದ ಫ್ರಾಂಕ್ಲಿನ್ ಗೆ ಸನ್ಮಾನ]

ಹಬ್ಬದ ಸಂದೇಶದ ಬಗ್ಗೆ ಮಾತನಾಡಿದ ಕುಲಶೇಖರ ಹೋಲಿ ಕ್ರಾಸ್ ಚರ್ಚ್ನ ಧರ್ಮಗುರು ವಂ| ವಿಕ್ಟರ್ ಮಚಾದೊ ಅವರು, ಸಮರ್ಪಣಾ ಮನೋಭಾವದ ಜೀವನ ಎನ್ನುವುದು ಕೇವಲ ಕ್ರೈಸ್ತರಿಗೆ ಮಾತ್ರ ಸೀಮಿತವಲ್ಲ. ಮಹಾತ್ಮಾ ಗಾಂಧಿ, ಡಾ| ಎ.ಪಿ.ಜೆ. ಅಬ್ದುಲ್ ಕಲಾಂ ನಂತಹ ಮಹನೀಯರು ಇಂತಹ ಬದುಕು ನಡೆಸಿ ಆದರ್ಶರಾಗಿದ್ದಾರೆ. ಅರ್ಪಣಾ ಮನೋಭಾವದ ಬದುಕನ್ನು ನಾವು ನಡೆಸೋಣ ಎಂದರು.
ಶಿಲುಬೆ ಕುರುಹು ಪ್ರತಿಷ್ಠಾಪನೆ:
ಯೇಸು ಕ್ರಿಸ್ತರ ಶಿಲುಬೆ ಕುರುಹನ್ನು ಚರ್ಚ್ನಲ್ಲಿ ಪ್ರತಿಷ್ಠಾಪಿಸುವ ಕಾರ್ಯ ಈ ಸಂದರ್ಭದಲ್ಲಿ ಜರುಗಿದ್ದು, ಬಿಷಪ್ ಹೆನ್ರಿ ಡಿಸೋಜಾ ಅವರು ನೆರವೇರಿಸಿದರು.
ಫ್ರಾಂಕ್ಲಿನ್ ಗೆ ಸನ್ಮಾನ:
ವಾರದ ಹಿಂದೆ ಪಚ್ಚನಾಡಿಯಲ್ಲಿ ರೈಲು ಹಳಿ ಬಿರುಕು ಬಿಟ್ಟಿರುವ ಸ್ಥಳದಲ್ಲಿ ರಥ ಪುಷ್ಪ ಗುಚ್ಚವನ್ನು ಕೆಂಪು ಬಾವುಟವಾಗಿ ಬಳಸಿ ರೈಲಿಗೆ ತೋರಿಸಿ ಸಂಭಾವ್ಯ ರೈಲು ದುರಂತ ತಪ್ಪಿಸಿದ ಫ್ರಾಂಕ್ಲಿನ್ ಡಿಸೋಜಾ ಅವರನ್ನು ಬೋಂದೆಲ್ ಚರ್ಚ್ ವತಿಯಿಂದ ಸನ್ಮಾನಿಸಲಾಯಿತು.
ಬೋಂದೆಲ್ ಚರ್ಚ್ನ ಧರ್ಮಗುರು ಡಿಸೋಜಾ, ಪಾಲನಾ ಮಂಡಳಿ ಉಪಾಧ್ಯಕ್ಷ ಪಿಂಟೊ, ಕಾರ್ಯದರ್ಶಿ ವಿಲ್ಫೆಡ್ ಅಲ್ವಾರಿಸ್, ಪ್ರಚಾರ ಸಮಿತಿಯ ಸಂಚಾಲಕ ಸ್ಟ್ಯಾನಿ ಅಲ್ವಾರಿಸ್ ಉಪಸ್ಥಿತರಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications