ಸುರತ್ಕಲ್ ಬಂಟರ ಭವನದಲ್ಲಿ ವಿದ್ಯಾರ್ಥಿ ವೇತನ ವಿತರಣೆ
ಮಂಗಳೂರು, ಜೂನ್ 27 : ಬಂಟ ಸಮಾಜ ಎಲ್ಲರನ್ನೂ ಪ್ರೀತಿ ಮಾಡುವ ಮತ್ತು ಮರ್ಯಾದೆ ನೀಡಿ ಗೌರವಿಸುವ ಸಮಾಜವಾಗಿದೆ ಎಂದು ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ಅಭಿಪ್ರಾಯ ಪಟ್ಟಿದ್ದಾರೆ.
ಅವರು ಭಾನುವಾರದಂದು ಸುರತ್ಕಲ್ ಬಂಟರ ಭವನದಲ್ಲಿ ನಡೆದ ಸುರತ್ಕಲ್ ಬಂಟರ ಸಂಘದ ಮಹಾಸಭೆ ಅಭಿನಂದನೆ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಬಂಟ ಸಮಾಜದಲ್ಲಿ ಒಗ್ಗಟ್ಟು ಸೌಹಾರ್ದತೆ ಮುಖ್ಯ ಅದನ್ನು ಉಳಿಸಿ ಬೆಳೆಸಿ ಬೇರೆ ಸಮಾಜವನ್ನು ಗೌರವಿಸುವ ಮತ್ತು ಒಗ್ಗಟ್ಟನ್ನು ಬೆಳೆಸುವ ಪ್ರಕ್ರಿಯೆ ಮುಂದುವರಿಯಲಿ ಎಂದು ಶುಭ ಹಾರೈಸಿದರು.
ಮುಂಬಯಿ ವಿ.ಕೆ.ಗ್ರೂಪ್ ಆಫ್ ಕಂಪನೀಸ್ ಸಂಸ್ಥೆಯ ಚೇರ್ಮನ್ ಕರುಣಾಕರ ಎಂ.ಶೆಟ್ಟಿ ಮದ್ಯಗುತ್ತು ಮಾತನಾಡಿ, ಮಕ್ಕಳಿಗೆ ನಮ್ಮ ಸಂಸ್ಕೃತಿ, ಆಚಾರ ವಿಚಾರದ ಕುರಿತು ತಿಳಿವಳಿಕೆ ನೀಡುವ ಕೆಲಸ ನಡೆಯಬೇಕು. ಎಲ್ಲಾ ಮಕ್ಕಳು ವಿದ್ಯಾಭ್ಯಾಸ ಪಡೆದು ಉನ್ನತ ಮಟ್ಟಕ್ಕೆ ಏರಿದಾಗ ಸಮಾಜದಲ್ಲಿ ಕಷ್ಟ ಕಾರ್ಪಣ್ಯಗಳು ದೂರವಾಗುತ್ತವೆ ಎಂದರು.
ಉದ್ಯಮಿ ರಮಾನಾಥ ಶೆಟ್ಟಿ ಕೃಷ್ಣಾಪುರ, ಪಿಡಬ್ಲ್ಯುಡಿ ಅಸಿಸ್ಟೆಂಟ್ ಇಂಜಿನಿಯರ್ ರಾಜೇಶ್ ರೈ, ಬಂಟರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಣೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಅಭಿನಂದನೆ ಹಾಗೂ ವಿಧವೆಯವರಿಗೆ, ಭಿನ್ನ ಸಾಮರ್ಥ್ಯದವರಿಗೆ, ವಿಕಲ ಚೇತನರಿಗೆ ಸಹಾಯ ಹಸ್ತ ನೀಡಲಾಯಿತು.
ಸಂಘದ ಅಧ್ಯಕ್ಷ ಉಲ್ಲಾಸ್ ಆರ್.ಶೆಟ್ಟಿ, ಉಪಾಧ್ಯಕ್ಷ ಸುಧಾಕರ ಪೂಂಜ, ಕಾರ್ಯದರ್ಶಿ ಸೀತಾರಾಮ ರೈ, ಕೋಶಾಧಿಕಾರಿ ಪ್ರವೀಣ್ ಪಿ.ಶೆಟ್ಟಿ ಜತೆ ಕಾರ್ಯದರ್ಶಿ ಜಯರಾಮ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯಕ್ಷೆ ಚಂದ್ರಕಲಾ ಶೆಟ್ಟಿ ಉಪಸ್ಥಿತರಿದ್ದರು. ರಾಜೇಶ್ವರಿ ಡಿ.ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಲೀಲಾಧರ್ ಶೆಟ್ಟಿ ಮತ್ತು ಚಿತ್ರಾ ಜೆ.ಶೆಟ್ಟಿಯವರ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications