ಪಾತಕಿಗೆ ಗೌಪ್ಯ ಮಾಹಿತಿ ನೀಡುತ್ತಿದ್ದ ಸಿಸಿಬಿ ಪೊಲೀಸ್ ಆಡಿಯೋ ಬಹಿರಂಗ
ಮಂಗಳೂರು, ಡಿಸೆಂಬರ್ 04: ಪೊಲೀಸ್ ಇಲಾಖೆಯ ಕೆಲವು ಪ್ರಮುಖ ಗೌಪ್ಯ ಮಾಹಿತಿಯನ್ನು ಸಿಸಿಬಿ ಪೊಲೀಸ್ ಓರ್ವ ಕುಖ್ಯಾತ ನಟೋರಿಯಸ್ ಆರೋಪಿಗೆ ನೀಡುತ್ತಿದ್ದ ವಿಚಾರ ಬಹಿರಂಗಗೊಂಡಿದೆ.
ಈ ಮಾಹಿತಿ ಬಹಿರಂಗಗೊಳ್ಳುತ್ತಿದ್ದಂತೆ ಮಂಗಳೂರು ಪೊಲೀಸ್ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. ಮಂಗಳೂರು ಸಿಸಿಬಿ ಪೊಲೀಸ್ ಪಿ.ಸಿ. ಚಂದ್ರ ಪೊಲೀಸ್ ಇಲಾಖೆಯ ಗೌಪ್ಯ ಮಾಹಿತಿಗಳನ್ನು ನೀಡುತ್ತಿದ್ದ ಎಂಬುದು ಇದೀಗ ಬಹಿರಂಗವಾಗಿದೆ. ಅಪರಾಧಿ ಸ್ಥಾನದಲ್ಲಿರುವ ಸಿಸಿಬಿ ಪೊಲೀಸ್ ಕಾನ್ಸ್ಟೇಬಲ್ ಮುಖ್ಯಮಂತ್ರಿ ಪದಕ ವಿಜೇತ ಕೂಡ.
ಸಿಸಿಬಿ ಪೊಲೀಸ್ ಚಂದ್ರ ಸುಮಾರು 19 ಪ್ರಕರಣದ ಪ್ರಮುಖ ಆರೋಪಿ ಕೇರಳದ ಮಂಜೇಶ್ವರ ನಿವಾಸಿ ನಟೋರಿಯಸ್ ತಲಕಿ ರಫೀಕ್ ಗೆ ಇಲಾಖೆಯ ಗೌಪ್ಯ ಮಾಹಿತಿ ನೀಡುತ್ತಿದ್ದ. ಪ್ರತಿ ಮಾಹಿತಿಗೆ ಇಂತಿಷ್ಟು ಅಮೌಂಟ್ ಎಂದು ಮೊದಲೇ ಡೀಲ್ ಮಾಡುತ್ತಿದ್ದ ಎಂದು ಹೇಳಲಾಗಿದೆ. ಈ ಕುರಿತ ಆಡಿಯೋ ಕ್ಲಿಪ್ ಈಗ ಬಹಿರಂಗವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ಆಡಿಯೋ ಕ್ಲಿಪ್ ಬಹಿರಂಗವಾಗುತ್ತಿದ್ದಂತೆ ಮಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ.
ಅವನಿಗೆ ಬೇಕಾದವರ ಅಥವಾ ವಿರೋಧಿ ಗ್ಯಾಂಗ್ ನ ಸದಸ್ಯರ ಮೊಬೈಲ್ ಲೊಕೇಶನ್ ಮಾಹಿತಿ, ವ್ಯಕ್ತಿಗಳ ಹಿನ್ನೆಲೆ ಸೇರಿದಂತೆ ಪೊಲೀಸ್ ಇಲಾಖೆಗಳ ಕೆಲವೊಂದು ಗೌಪ್ಯ ವಿಚಾರಗಳನ್ನುಪಿ.ಸಿ. ಚಂದ್ರ ನೀಡುತ್ತಿದ್ದ ಎಂದು ಹೇಳಲಾಗಿದೆ. ಬಹಿರಂಗಗೊಂಡಿರುವ ಆಡಿಯೋ ಕ್ಲಿಪ್ ಮಲಯಾಳಂ ಭಾಷೆಯಲ್ಲಿದ್ದು, ಮೊಬೈಲ್ ಸಿಡಿಆರ್ ರಿಪೋರ್ಟ್ ನೀಡುವ ಬಗ್ಗೆ ಡೀಲ್ ಮಾತುಕತೆ ಇದೆ.
ಚಂದ್ರ ನೀಡುತ್ತಿದ್ದ ಮಾಹಿತಿಯನ್ನು ರಫೀಕ್ ದುಷ್ಕೃತ್ಯ ಎಸಗಲು ಬಳಸುತ್ತಿದ್ದ ಎಂದು ಹೇಳಲಾಗಿದೆ. ಕಳೆದ ಜೂನ್ ನಲ್ಲಿ ರಫೀಕ್ ನನ್ನು ಮಂಗಳೂರು ದಕ್ಷಿಣ ಠಾಣೆಯ ರೌಡಿ ನಿಗ್ರಹ ದಳ ಅಕ್ರಮ ಆಯುಧ ಹಾಗೂ ಮಾದಕ ವಸ್ತು ಹೊಂದಿದ್ದ ಪ್ರಕರಣದಲ್ಲಿ ಬಂಧಿಸಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications