ಕೊಲೆ, ದರೋಡೆಗಾಗಿ ಹೊಂಚು ಹಾಕುತ್ತಿದ್ದ 9 ಖದೀಮರು ಅಂದರ್
ಮಂಗಳೂರಿನಲ್ಲಿ ವ್ಯಕ್ತಿಯೊಬ್ಬರ ಕೊಲೆಗೆ ಹಾಗೂ ದರೋಡೆಗಾಗಿ ಸಂಚು ರೂಪಿಸುತ್ತಿದ್ದ 9 ಕುಖ್ಯಾತ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 2 ಪಿಸ್ತೂಲ್, 7 ಗುಂಡು, ಚೂರಿ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು, ಫೆಬ್ರವರಿ 20: ಮಂಗಳೂರಿನಲ್ಲಿ ವ್ಯಕ್ತಿಯೊಬ್ಬರ ಕೊಲೆಗೆ ಹಾಗೂ ಶ್ರೀಮಂತ ವ್ಯಕ್ತಿಗಳ ದರೋಡೆಗಾಗಿ ಸಂಚು ರೂಪಿಸುತ್ತಿದ್ದ 9 ಕುಖ್ಯಾತ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ2 ಪಿಸ್ತೂಲ್, ಸಜೀವ ಗುಂಡುಗಳು, ಚೂರಿ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಬಾವಿ ಬೀಚ್ ರಸ್ತೆಯಲ್ಲಿ ಸಿಸಿಬಿ ಪೊಲೀಸರು ಈ 9 ಜನರನ್ನು ಬಂಧಿಸಿದ್ದಾರೆ. ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ಜೈಲ್ ನಿಂದ ಇತ್ತೀಚೆಗಷ್ಟೆ ಬಿಡುಗಡೆಗೊಂಡಿದ್ದ ಈ ಕಳ್ಳರು ವ್ಯಕ್ತಿಯೊಬ್ಬರ ಕೊಲೆಗೆ ಕಾರು ಮತ್ತು ಆಟೋ ರಿಕ್ಷಾವೊಂದರಲ್ಲಿ ಕುಳಿತು ಸಂಚು ರೂಪಿಸುತ್ತಿದ್ದರು.[ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಸಿದ ಹೆಣ್ಮಕ್ಕಳ ಸಂಖ್ಯೆ!]
ಈ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಸುರತ್ಕಲ್ ನ ಸಫ್ವಾನ್, ಹುಸೈನ್, ಮೊಹಮ್ಮದ್ ಫೈಸಲ್ , ಎಮ್ಮೆಕೆರೆಯ ಅಬ್ದುಲ್ ನಾಸಿರ್, ಮುಕ್ಕ ಸುರತ್ಕಲ್ ನ ಸಂಶುದ್ದೀನ್, ಉಳ್ಳಾಲದ ಹಳೆಕೋಟೆಯ ಉಮ್ಮರ್ ಫಾರೂಕ್ ಹಾಗೂ ಮೊಹಮ್ಮದ್ ಅನ್ಸಾರ್ ಎಂಬುವವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ದಾಳಿ ವೇಳೆ 2 ಪಿಸ್ತೂಲ್ ಗಳು, 7 ಸಜೀವ ಮದ್ದುಗುಂಡುಗಳು, 2 ಚೂರಿಗಳು, 3 ಮೊಬೈಲ್ ಫೋನ್ ಗಳು, ಕೆಎ-19 ಎಂಇ-4009 ನೋಂದಣಿಯ ಮಾರುತಿ ಸ್ವಿಪ್ಟ್ ಕಾರು, ಕೆಎ-19 ಎಬಿ-6123 ಬಜಾಜ್ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.[ಕಾಲಿಯಾ ರಫೀಕ್ ನ ಕೊಲ್ಲಿಸಿದ್ದು ನಾನೇ ಎಂದ ದುಬೈನಲ್ಲಿರುವ ಜಿಯಾ]
ಈ ಆರೋಪಿಗಳ ಪೈಕಿ ಸಫ್ವಾನ್ ಹುಸೈನ್ ಎಂಬಾತನ ವಿರುದ್ದ ಕೊಲೆ, ಕೊಲೆ ಯತ್ನ, ಅಪಹರಣ, ದರೋಡೆ, ಕರ್ತವ್ಯ ನಿರತ ಪೊಲೀಸರ ಹಲ್ಲೆ ಮುಂತಾದ ಒಟ್ಟು 23 ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳಲ್ಲಿ ಜಾಮೀನು ಪಡೆದು 2 ತಿಂಗಳ ಹಿಂದಷ್ಟೆ ಈತ ಬಿಡುಗಡೆಗೊಂಡಿದ್ದ.
ಇನ್ನು ಮೊಹಮ್ಮದ್ ಫೈಸಲ್, ಸಂಶುದ್ದೀನ್, ಅಬ್ದುಲ್ ನಾಸೀರ್ ಯಾನೆ ಡಾನ್ ನಾಸೀರ್, ಉಮರ್ ಫಾರೂಕ್ ಯಾನೆ ಮಾನಾ ಫಾರೂಕ್ ವಿರುದ್ಧವೂ ಕೊಲೆ ಯತ್ನ, ದರೋಡೆ, ಅಪಹರಣ, ಜೈಲ್ ನಲ್ಲಿ ಗಲಾಟೆ ಮುಂತಾದ ಪ್ರಕರಣಗಳು ದಾಖಲಾಗಿದ್ದು, ಇತ್ತೀಚೆಗಷ್ಟೆ ಜೈಲ್ ನಿಂದ ಬಿಡುಗಡೆಗೊಂಡಿದ್ದರು. ಮೊಹಮ್ಮದ್ ಅನ್ಸಾರ್ ನ ಮೇಲೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ.
ಆರೋಪಿಗಳನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಪಣಂಬೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications