'ಮಂಗಳೂರು ಚಲೋ' ಬೈಕ್ ಜಾಥಾ ನಿಷೇಧಿಸಿ : ಎಸ್.ಡಿ.ಪಿ.ಐ ಒತ್ತಾಯ
ಮಂಗಳೂರು, ಸೆಪ್ಟೆಂಬರ್ 3: ಬಿಜೆಪಿ ಯುವ ಮೋರ್ಚಾ ಆಯೋಜಿಸಿರುವ ಬೈಕ್ ಜಾಥಾ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಯುವ ಮೋರ್ಚಾದ ಕಾರ್ಯಕ್ರಮವನ್ನು ವಿಫಲಗೊಳಿಸಿವುದಾಗಿ ಎಸ್.ಡಿ.ಪಿ.ಐ ಜಿಲ್ಲಾದ್ಯಕ್ಷ ಹನೀಫ್ ಖಾನ್ ಕೊಣಾಜೆ ತಿಳಿಸಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, "
ಜಿಲ್ಲೆಯ ಶಾಂತಿ ಕದಡುವ ಬಿಜೆಪಿ ಯುವ ಮೋರ್ಚಾದ ಬೈಕ್ ಜಾಥಾವನ್ನು ನಿಷೇಧಿಸಿ," ಎಂದು ಆಗ್ರಹಿಸಿದರು.

ಸೆಪ್ಟಂಬರ್ 7 ರಂದು ಬಿಜೆಪಿ ಯುವ ಮೋರ್ಚಾ ನಡೆಸಲುದ್ದೇಶಿಸಿರುವ 'ಮಂಗಳೂರು ಚಲೋ' ಬೈಕ್ ರ್ಯಾಲಿಗೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅವಕಾಶ ನೀಡಬಾರದೆಂದು ಒತ್ತಾಯಿಸಿದರು.
"ಕಳೆದ ಮೂರು ತಿಂಗಳ ಹಿಂದೆ ಕಲ್ಲಡ್ಕದಲ್ಲಿ ಚೂರಿ ಹಾಕಿದ ಘಟನೆಯಿಂದ ಹಿಡಿದು ಹಲವು ದುಷ್ಕೃತ್ಯಗಳ ಮೂಲಕ ಜಿಲ್ಲೆಯ ಶಾಂತಿಯನ್ನು ಕದಡುವ ಹುನ್ನಾರವನ್ನು ಸಂಘ ಪರಿವಾರ ಸಂಘಟನೆಗಳು ನಡೆಸುತ್ತಿವೆ," ಎಂದು ಅವರು ಆರೋಪಿಸಿದರು.
ಈ 'ಮಂಗಳೂರು ಚಲೋ' ಕಾರ್ಯಕ್ರಮದ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸುವ ತಂತ್ರಗಾರಿಕೆಯೂ ಅಡಗಿದೆ ಎಂದು ಅವರು ಆರೋಪಿಸಿದರು.

ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷ ಪ್ರತಾಪ್ ಸಿಂಹ ಸುಳ್ಳು ಹೇಳಿಕೆಗಳನ್ನು ನೀಡಿ, ಪ್ರಚೋಧನಾತ್ಮಕ ಭಾಷಣಗಳನ್ನು ಮಾಡಿ ಜಿಲ್ಲೆಯ ಮತ್ತು ರಾಜ್ಯದ ಶಾಂತಿ ಕದಡಲು ಯತ್ನಿಸುತ್ತಿದ್ದಾರೆ. ಆದುದರಿಂದ ಪೊಲೀಸ್ ಇಲಾಖೆ ಕೂಡಲೇ ಮುಂಜಾಗ್ರತಾ ಕ್ರಮವಾಗಿ ಅವರನ್ನು ಬಂಧಿಸಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications