ವಿಪಕ್ಷ ಸದಸ್ಯರ ಪ್ರಶ್ನೆಗಳಗೆ ತತ್ತರ: ಮನಪಾ ಸಾಮಾನ್ಯ ಸಭೆ ಮೊಟಕು
ಮಂಗಳೂರು, ಫೆಬ್ರವರಿ 29: ಆಸ್ತಿ ತೆರಿಗೆ ಭಾರೀ ಏರಿಕೆ ವಿಚಾರವನ್ನು ಖಂಡಿಸಿ ವಿಪಕ್ಷ ಕಾಂಗ್ರೆಸ್ ಸದಸ್ಯರು ಫ್ಲಕ್ ಕಾರ್ಡ್ ಹಿಡಿದು ತೀವ್ರ ಪ್ರತಿಭಟನೆ ನಡೆಸಿದ್ದರಿಂದ ಮಂಗಳೂರು ಮಹಾನಗರ ಪಾಲಿಕೆ ಸಭೆ ಮೊಟಕುಗೊಂಡಿದೆ. ವಿಪಕ್ಷ ಸದಸ್ಯರು ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮನಪಾ ಮೇಯರ್ ಎರಡೆರಡು ಬಾರಿ ಸಾಮಾನ್ಯ ಸಭೆಯನ್ನು ಮುಂದೂಡಿ ಕೊನೆಗೆ ಸಭೆಯೇ ಮೊಟಕುಗೊಳಿಸಿರುವ ಪ್ರಸಂಗ ನಡೆದಿದೆ.
ಸಭೆಯ ಆರಂಭದಲ್ಲಿಯೇ ಆಸ್ತಿ ತೆರಿಗೆ ಹೆಚ್ಚಳ ಕುರಿತು ಕಾಂಗ್ರೆಸ್ ಸದಸ್ಯರು ತೀವ್ರ ಪ್ರತಿಭಟನೆಗಿಳಿದಿದ್ದಾರೆ. ಪೂರ್ವಯೋಜಿತವಾಗಿ ಸಿದ್ಧಪಡಿಸಿರುವ ಫ್ಲಕ್ ಕಾರ್ಡ್ ಅನ್ನು ಹಿಡಿದು ಬಿಜೆಪಿಯ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿ ಸದನದ ಬಾವಿಗಿಳಿದು ಪ್ರತಿಭಟಿಸಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಸಭೆಯನ್ನು ಮೊದಲ ಬಾರಿ ಮುಂದೂಡಿದ್ದಾರೆ. ಆಗ ಎಲ್ಲಾ ಬಿಜೆಪಿ ಸದಸ್ಯರು ಸಭೆಯಿಂದ ಹೊರ ನಡೆದಿದ್ದಾರೆ.

ಬಳಿಕ ಮತ್ತೆ ಸಭೆ ಆರಂಭವಾಯಿತಾದರೂ ಪಟ್ಟುಬಿಡದ ಕಾಂಗ್ರೆಸ್ ಸದಸ್ಯರು ಮತ್ತೆ ಫ್ಲಕ್ ಕಾರ್ಡ್ ಹಿಡಿದು ಸದನದ ಬಾವಿಗಿಳಿದು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಇದು ತೀವ್ರ ಗದ್ದಲಕ್ಕೆ ಕಾರಣವಾಯಿತು. ಇತ್ತ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಂತೆ ಅತ್ತ ಬಿಜೆಪಿ ಸದಸ್ಯರೂ ಸದನದ ಬಾವಿಗಿಳಿದು ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿದ್ದಲ್ಲದೆ, ತಾವು ಕೂಡಾ ಫ್ಲಕ್ ಕಾರ್ಡ್ ಹಿಡಿದು ಪ್ರತಿರೋಧ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯ ಕಾವು ಹೆಚ್ಚುತ್ತಿದ್ದಂತೆ ಸದನವನ್ನು 2ನೇ ಬಾರಿ ಮುಂದೂಡಿ ಮೇಯರ್ ಹೊರನಡೆದಿದ್ದಾರೆ. ಆ ಬಳಿಕ ಅಧಿಕಾರಿಯೊಬ್ಬರು ಬಂದು ಸಭೆಯನ್ನು ಮೊಟಕುಗೊಳಿಸಲಾಗಿದೆ ಎಂದು ಹೇಳಿದ್ದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರು ಅಧಿಕಾರಿಯನ್ನೇ ತರಾಟೆಗೆ ತೆಗೆದುಕೊಂಡಿದ್ದಾರೆ. ತಾವು 'ಯಾರು ಇದನ್ನು ಹೇಳಲು' ಮೇಯರ್ ಅವರೇ ಬಂದು ಸಭೆ ಮೊಟಕುಗೊಳಿಸಿರುವುದನ್ನು ತಿಳಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications