ವಿಡಿಯೋ: ಮಂಗಳೂರು ಎಎಸ್ಐ ಸೂಪರ್ ಚೇಸಿಂಗ್; ಬಹುಮಾನ ಘೋಷಣೆ
ಮಂಗಳೂರು, ಜನವರಿ 13: ಸಿನಿಮಾದ ಕ್ಲೈಮ್ಯಾಕ್ಸ್ನಲ್ಲಿ ಕಳ್ಳರನ್ನು ಚೇಸ್ ಮಾಡಿ ಪೊಲೀಸ್ ಅಧಿಕಾರಿ ಹಿಡಿಯುವ ಸೀನ್ ತುಂಬಾ ಥ್ರಿಲ್ ಕೊಡುತ್ತದೆ. ಇಂತಹುದೇ ಒಂದು ಥ್ರಿಲ್ಲಿಂಗ್ ಪ್ರಸಂಗ ಮಂಗಳೂರಿನಲ್ಲಿ ನಡೆದಿದೆ. ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಕಳ್ಳರನ್ನು ಮಂಗಳೂರಿನ ಪೊಲೀಸ್ ಅಧಿಕಾರಿಯೊಬ್ಬರು ಹಿಡಿದ ಘಟನೆ ಬೆಳಕಿಗೆ ಬಂದಿದೆ.
ಈ ಘಟನೆ ನಡೆದಿದ್ದು ಮಂಗಳೂರು ನಗರದ ಹೃದಯಭಾಗದ ಸ್ಟೇಟ್ ಬ್ಯಾಂಕ್ ಬಳಿ ನಡೆದಿದೆ. ಬುಧವಾರ ಮಧ್ಯಾಹ್ನ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂಭಾಗದಲ್ಲಿರುವ ಕೇಂದ್ರ ಮೈದಾನದಲ್ಲಿ ರಾಜಸ್ಥಾನದ ಡೋಲಾಪುರ ನಿವಾಸಿ ಗ್ರಾನೈಟ್ ಕೆಲಸ ಮಾಡಿಕೊಂಡಿದ್ದ. ಪ್ರೇಮ್ ನಾರಾಯಣ ತ್ಯಾಗಿ ಎಂಬಾತನ ಮೊಬೈಲ್ ಕಳವು ಮಾಡಿ ಪರಾರಿಯಾಗುತ್ತಿರುವುದು ಕಂಡುಬಂದಿದೆ.
ತಕ್ಷಣವೇ ಪ್ರೇಮ್ ನಾರಾಯಣ ಹಾಗೂ ಸ್ಥಳೀಯರು ಎಚ್ಚೆತ್ತು ಬೊಬ್ಬೆ ಹಾಕಿ ಕಳ್ಳನನ್ನು ಓಡಿಸಿಕೊಂಡು ಹೋಗಿದ್ದಾರೆ. ಈ ಸಂದರ್ಭ ಕಮೀಷನರೇಟ್ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಎಎಸ್ಐ ವರುಣ್ ಅವರು ಗಮನಿಸಿ ಸಿನಿಮೀಯ ರೀತಿಯಲ್ಲಿ ಆತನ ಬೆನ್ನಟ್ಟಿ ಹಿಡಿದಿದ್ದಾರೆ. ಆದರೆ ಆ ಸಂದರ್ಭದಲ್ಲಿ ಆರೋಪಿಯಿಂದ ಮೊಬೈಲ್ ದೊರೆತಿರಲಿಲ್ಲ. ತಕ್ಷಣ ಆತನನ್ನು ತೀವ್ರ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಮತ್ತಿಬ್ಬರು ಈ ಕೃತ್ಯದಲ್ಲಿ ಭಾಗಿಯಾಗಿರುವುದು ಗೊತ್ತಾಗಿದೆ.

ಕದ್ದ ಮೊಬೈಲ್ ಕೂಡ ಅವರೊಂದಿಗೆ ಇರುವುದರ ಬಗ್ಗೆ ಆರೋಪಿ ಬಾಯ್ಬಿಟ್ಟಿದ್ದಾನೆ. ಈ ಹಿನ್ನೆಲೆಯಲ್ಲಿ ವಶದಲ್ಲಿರುವ ಆರೋಪಿಯನ್ನು ಬಳಸಿ ಪರಾರಿಯಾಗಿರುವ ಮತ್ತಿಬ್ಬರನ್ನು ಬಂಧಿಸಲು ಪೊಲೀಸರು ತಂತ್ರ ರೂಪಿಸಿ ವಶದಲ್ಲಿರುವ ಆರೋಪಿಯಿಂದಲೇ ಆತನ ಸಹಚರರಿಗೆ ಫೋನ್ ಮಾಡಿಸಿ ರೈಲ್ವೆ ಸ್ಟೇಷನ್ ಬಳಿ ಬರುವಂತೆ ಹೇಳಿಸಿದ್ದಾರೆ.
ಪ್ಲಾನ್ನಂತೆ ವಶದಲ್ಲಿರುವ ಆರೋಪಿಯನ್ನು ಮತ್ತೊಂದು ವಾಹನದಲ್ಲಿ ಪೊಲೀಸರು ರೈಲ್ವೆ ಸ್ಟೇಷನ್ ಬಳಿ ಕರೆದುಕೊಂಡು ಹೋಗಿದ್ದಾರೆ. ಆತ ನನ್ನು ಮುಂದೆ ಹೋಗಲು ಬಿಟ್ಟು, ಹಿಂದಿನಿಂದ ಪೊಲೀಸರು ಆತನನ್ನು ಹಿಂಬಾಲಿಸಿದ್ದಾರೆ. ಈ ಸಂದರ್ಭದಲ್ಲಿ ಆತ ಕೂಡ ತನ್ನ ಸಹಚರರೊಂದಿಗೆ ರಿಕ್ಷಾ ಏರಿ ಪರಾರಿಯಾಗಲು ಯತ್ನಿಸಿದ್ದಾನೆ. ಪರಿಸ್ಥಿತಿಗನುಗುಣವಾಗಿ ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು, ಬೆನ್ನಟ್ಟಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರು ಹೊರವಲಯದ ನಿರ್ಮಾರ್ಗ ನಿವಾಸಿ ಶಮಂತ್ ಹಾಗೂ ನಗರದ ಅತ್ತಾವರ ನಿವಾಸಿ ಹರೀಶ್ ಪೂಜಾರಿ ಎಂದು ಗುರುತಿಸಲಾಗಿದೆ.
ಕಳ್ಳತನದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿ ರಾಜೇಶ್ ಎಂಬಾತ ಪರಾರಿಯಾಗಿದ್ದಾನೆ. ಪರಾರಿಯಾಗಿರುವ ರಾಜೇಶ್ ಬಂಧನಕ್ಕೂ ಪೊಲೀಸರು ಬಲೆ ಬೀಸಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗದು ಬಹುಮಾನ ಘೋಷಣೆ
ಸದ್ಯ ಪೊಲೀಸರ ಚೇಸಿಂಗ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್, ಎಎಸ್ಐ ವರುಣ್ ತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೊಬೈಲ್ ಕಳ್ಳರನ್ನು ಹಿಡಿಯುವಲ್ಲಿ ಸಮಯ ಪ್ರಜ್ಞೆ ಮೆರೆದ ಎಎಸ್ಐ ವರುಣ್ ತಂಡಕ್ಕೆ ಹತ್ತು ಸಾವಿರ ರೂಪಾಯಿ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.

ಇನ್ನು ಈ ಕಾರ್ಯಾಚರಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ವರುಣ್ ಆಳ್ವಾ, "ಇದೊಂದು ಸಣ್ಣ ಕಾರ್ಯಾಚರಣೆಯಾಗಿದೆ. ಭಾರೀ ದೊಡ್ಡ ಮಟ್ಟದಲ್ಲಿ ಜನ ಪ್ರೋತ್ಸಾಹ ನೀಡಿದ್ದಾರೆ. ಈ ಪ್ರೋತ್ಸಾಹ ಮುಂದೆ ದೊಡ್ಡ ಕಾರ್ಯಾಚರಣೆಗೆ ಉತ್ಸಾಹ ನೀಡಲಿದೆ. ಪ್ರತಿ ದಿನ ಎರಡು ಕಿಮೀ ರನ್ನಿಂಗ್ ಮಾಡುತ್ತೇನೆ. ವ್ಯಾಯಾಮ, ಯೋಗದಲ್ಲಿ ತೊಡಗಿಸಿಕೊಂಡಿದ್ದೇನೆ. ಹೀಗಾಗಿ ಚೇಸಿಂಗ್ ಮಾಡುವುದಕ್ಕೆ ಸುಲಭ ಆಯ್ತು," ಎಂದು ಹೇಳಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications