ಬಡ್ಡಿ ಮಾಫಿಯಾಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಮಂಗಳೂರಿನ ದಂಪತಿ
ಮಂಗಳೂರು, ಜೂನ್ 9: ಹಣಕಾಸಿನ ಮುಗ್ಗಟ್ಟಿನಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಕದ್ರಿ ಬಳಿಯ ಪಿಂಟೋ ಲೇನ್ನಲ್ಲಿ ನಡೆದಿದೆ.
ಪಿಂಟೋ ಲೇನ್ ನಿವಾಸಿ ಸುರೇಶ್(62) ಹಾಗೂ ಅವರ ಪತ್ನಿ ವಾಣಿ(55) ಆತ್ಮಹತ್ಯೆ ಮಾಡಿಕೊಂಡ ದಂಪತಿಯಾಗಿದ್ದಾರೆ. ಮನೆಯ ಟೇರೆಸ್ನಲ್ಲಿ ನೇಣು ಬಿಗಿದು ಪತ್ನಿ ವಾಣಿ ಆತ್ಮಹತ್ಯೆಕೊಂಡರೆ, ಮನೆಯ ಬಾವಿಗೆ ಹಾರಿ ಪತಿ ಸುರೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದಂಪತಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಚಿಟ್ ಫಂಡ್ನಲ್ಲಾದ ನಷ್ಟದಿಂದ ಆತ್ಮಹತ್ಯೆಗೆ ಶರಣಾದ ಬಗ್ಗೆ ತನಿಖೆಯಲ್ಲಿ ತಿಳಿದುಬಂದಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದಂಪತಿ ಆತ್ಮಹತ್ಯೆ ಬೆನ್ನಲ್ಲೇ ಬಡ್ಡಿ ಮಾಫಿಯಾಗೆ ಕಮಿಷನರ್ ವಾರ್ನಿಂಗ್ ನೀಡಿದ್ದು, ಆತ್ಮಹತ್ಯೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಕಮಿಷನರ್ ಶಶಿಕುಮಾರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
"ದಂಪತಿಗಳ ಆತ್ಮಹತ್ಯೆ ಕೆಟ್ಟ ನಿರ್ಧಾರವಾಗಿದೆ. ಚೀಟಿ ವ್ಯವಹಾರ, ಹಣಕಾಸು ಸಮಸ್ಯೆ ಇದ್ದಲ್ಲಿ ಹೇಳಿಕೊಳ್ಳಬಹುದಿತ್ತು. ಈ ಲಾಕ್ಡೌನ್ ಸಮಯದಲ್ಲಿ ಸಾಕಷ್ಟು ಜನರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಈ ಮಧ್ಯೆ ಹಲವೆಡೆ ಹೆಚ್ಚಿನ ದರದಲ್ಲಿ ಬಡ್ಡಿ ವಸೂಲಿ ಮಾಡ್ತಿರೋದು ಗಮನಕ್ಕೆ ಬಂದಿದೆ. ಇಂಥವರ ವಿರುದ್ದ ಎಕ್ಸೋರ್ಬಿಟಂಟ್ ರೇಟ್ ಅಫ್ ಇಂಟ್ರೆಸ್ಟ್ ಆಕ್ಟ್ನಡಿ ಪ್ರಕರಣ ದಾಖಲಿಸಲು ಅವಕಾಶ ಇದೆ. ಅತಿಯಾದ ಬಡ್ಡಿ ವಸೂಲಿಗೆ ಒತ್ತಡ, ಬೆದರಿಕೆ ಹಾಕಿದಲ್ಲಿ ಸ್ಥಳೀಯ ಠಾಣೆಗೆ ದೂರು ನೀಡಿ'' ಅಂತಾ ಜನರಿಗೆ ಮನವಿ ಮಾಡಿದ್ದಾರೆ.
ಚೀಟಿ ವ್ಯವಹಾರ ಮಾಡುವವರು ಆತ್ಮಹತ್ಯೆ ಮಾಡಿಕೊಳ್ಳುವುದು, ಊರು ಬಿಟ್ಟು ಹೋಗುವುದು ಮಾಡುತ್ತಿದ್ದಾರೆ. ಇಂಥಹ ರಿಸ್ಕ್ ತೆಗೆದುಕೊಳ್ಳದೇ ಸುರಕ್ಷಿತ ಹಣಕಾಸು ವ್ಯವಹಾರ ಮಾಡಿದರೆ ಉತ್ತಮ. ಕಮಿಷನರೇಟ್ ವ್ಯಾಪ್ತಿಯಲ್ಲಿ ಹೆಚ್ಚಿನ ಬಡ್ಡಿ ವಸೂಲಿ ಕಂಡುಬಂದರೆ ದೂರು ಕೊಡಿ. ಸೂಕ್ತ ಕಾನೂನು ಕ್ರಮಕ್ಕೆ ನಮ್ಮ ಎಲ್ಲಾ ಅಧಿಕಾರಿಗಳಿಗೆ ಸೂಚನೆ ಕೊಡುತ್ತೇನೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications