ಉಳ್ಳಾಲದಲ್ಲಿ ಶಂಕಿತ ಉಗ್ರ ಚಟುವಟಿಕೆ ಪ್ರಕರಣದ ತೀರ್ಪು ಪ್ರಕಟ
ಮಂಗಳೂರಿನ ಉಳ್ಳಾಲ ಶಂಕಿತ ಉಗ್ರ ಚಟುವಟಿಕೆ ಪ್ರಕರಣದಲ್ಲಿ ಮೂವರು ದೋಷಿಗಳು ಹಾಘೂ 4 ಜನ ನಿರ್ದೋಷಿಗಳು ಎಂದು ಮಂಗಳೂರಿನ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತನ್ನ ಆದೇಶದಲ್ಲಿ ಸೋಮವಾರ ಹೇಳಿದೆ.
ಮಂಗಳೂರು, ಎಪ್ರಿಲ್ 10: ಶಂಕಿತ ಉಗ್ರ ಚಟುವಟಿಕೆ ಪ್ರಕರಣದಲ್ಲಿ ಮೂವರು ದೋಷಿಗಳು ಎಂದು ಮಂಗಳೂರಿನ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹೇಳಿದೆ. ಪ್ರಕರಣದಲ್ಲಿ ಬಂಧಿತರಾಗಿದ್ದ 7 ಜನರಲ್ಲಿ 4 ಜನರನ್ನು ಕೋರ್ಟ್ ಖುಲಾಸೆಗೊಳಿಸಿದೆ.
ನ್ಯಾಯಾಧೀಶೆ ಪುಷ್ಪಾಂಜಲಿ ಅಹ್ಮದ್ ಬಾವ, ನೌಶಾದ್ ಹಾಗೂ ಫಕೀರ್ ಎಂಬುವವರನ್ನ ಅಪರಾಧಿಗಳೆಂದು ಘೋಷಿಸಿದರು. ಇನ್ನು ಮುಹಮ್ಮದ್ ಅಲಿ, ಅವರ ಪುತ್ರ ಜಾವೆದ್ ಅಲಿ, ಶಬೀರ್ ಹಾಗೂ ರಫೀಕ್ ಪ್ರಕರಣದಲ್ಲಿ ದೋಷ ಮುಕ್ತರಾಗಿದ್ದಾರೆ.[ಪಿಎಫ್ಐ ಈಗ ನನ್ನನ್ನು ಟಾರ್ಗೆಟ್ ಮಾಡಿದೆ: ಸಚಿವ ಖಾದರ್]
ಉಳ್ಳಾಲದ ಮುಕ್ಕಚ್ಚೇರಿಯಲ್ಲಿ ಭಯೋತ್ಪಾದನೆ ಚಟುವಟಿಕೆ ಆರೋಪದಲ್ಲಿ 2008ರಲ್ಲಿ ಈ 7 ಜನರನ್ನು ಮಂಗಳೂರಿನ ವಿವಿಧೆಡೆ ಬಂಧಿಸಲಾಗಿತ್ತು. ಬಂಧಿತರ ವಿರುದ್ಧ ದೇಶದ್ರೋಹದ ಪಿತೂರಿ, ವಿಧ್ವಂಸಕ ಕೃತ್ಯಕ್ಕೆ ಸಂಚು ಮತ್ತಿತರ ಕೇಸನ್ನು ದಾಖಲಿಸಲಾಗಿತ್ತು.[ಭಾರೀ ಮೌಲ್ಯದ ನಿಷೇಧಿತ ನೋಟುಗಳನ್ನು ಸಾಗಿಸುತ್ತಿದ್ದವನ ಬಂಧನ]
ಸೋಮವಾರ ಕೋರ್ಟ್ ತೀರ್ಪು ನೀಡಿದ್ದು ತಪ್ಪಿತಸ್ಥ ಉಗ್ರರಿಗೆ ಶಿಕ್ಷೆ ಪ್ರಮಾಣವನ್ನು ಎಪ್ರಿಲ್ 12ರಂದು ಘೋಷಿಸಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ62 ಸಾಕ್ಷಿಗಳನ್ನು ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ.