ಕಂಬಳಬೆಟ್ಟು ಸಿಡಿಮದ್ದು ಸ್ಫೋಟ: ಮಾಲೀಕನ ಮೇಲೆ ದೂರು ದಾಖಲು
ಮಾರ್ಚ್ 22 ರಂದು ವಿಟ್ಲದ ಕಂಬಳಬೆಟ್ಟುವಿನ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಆಕಸ್ಮಿಕವಾಗಿ ಸಿಡಿಮದ್ದು ಸ್ಫೋಟಗೊಂಡು , ಇಬ್ಬರು ಮೃತರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟಕದ ಮಾಲೀಕನ ಮೇಲೆ ದೂರು ದಾಖಲಾಗಿದೆ.
ಮಂಗಳೂರು, ಮಾರ್ಚ್ 22: ವಿಟ್ಲದ ಕಂಬಳಬೆಟ್ಟು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟಕದ ಮಾಲೀಕ ಅಬ್ದುಲ್ ಶುಕೂರು ಎಂಬುವವರ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ 22 ಸೋಮವಾರ ಸಂಜೆ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಕಂಬಳಬೆಟ್ಟುವಿನ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಆಕಸ್ಮಿಕವಾಗಿ ಸಿಡಿಮದ್ದು ಸ್ಫೋಟಗೊಂಡಿತ್ತು. ಈ ದುರ್ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದರು.[ಮಂಗಳೂರು: ಸಿಡಿಮದ್ದು ತಯಾರಿ ವೇಳೆ ಸ್ಫೋಟ, ಇಬ್ಬರು ಸಾವು]

ಈ ಘಟಕ ಗರ್ನಾಲ್ ಸಾಹೇಬರೆಂದೇ ಚಿರಪರಿಚಿತರಾಗಿದ್ದ ದಿ. ಇಬ್ರಾಹೀಂ ಸಾಹೇಬರ ಮಗನ ಅಬ್ದುಲ್ ಶುಕೂರು ರವರದ್ದು. ಇವರು ಸದ್ಯ ವಿದೇಶದಲ್ಲಿದ್ದು, ಇವರ ಮೇಲೆ ಐಪಿಸಿ ಕಲಂ 286, 304 (ಉದ್ದೇಶ ಪೂರ್ವಕವಲ್ಲದ ಮಾನವ ಹತ್ಯೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಿಡಿಮದ್ದು ತಯಾರಿಕಾ ಘಟಕಕ್ಕೆ ಪರವಾನಗಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.[ಬಾಳಿಗಾ ಕೊಲೆ ಆರೋಪಿ ನರೇಶ್ ಶೆಣೈಗೆ ಶಿಕ್ಷೆಯಾಗಲೆಂದು ದೇವರಲ್ಲಿ ಪ್ರಾರ್ಥನೆ]
ಮೃತರ ಅಂಗಾಂಗ ಪತ್ತೆ:
ಸಿಡಿಮದ್ದು ಸ್ಫೋಟಗೊಂಡ ಘಟಕದ ಸುತ್ತಮುತ್ತ ಸೋಮವಾರ ತಡರಾತ್ರಿವರೆಗೆ ಹಾಗೂ ಮಂಗಳವಾರ ಬೆಳಗ್ಗೆ ಪರಿಶೀಲನೆ ನಡೆಸಿದ ಅಧಿಕಾರಿಗಳಿಗೆ ಮೃತರ ದೇಹದ ಭಾಗಗಳು ಸಿಕ್ಕಿವೆ. ಸುಂದರ ಪೂಜಾರಿ ಮತ್ತು ಅಬ್ದುಲ್ ಅಝೀಂರವರ ಶವಪರೀಕ್ಷೆ ನಡೆಸಿ ಕುಟುಂಬಕ್ಕೆ ಬಿಟ್ಟುಕೊಡಲಾಗಿದೆ.
ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಐಜಿ ಹರಿಶೇಖರನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ, ಹೆಚ್ಚುವರಿ ಪೊಲೀಸ್ ವೇದಮೂರ್ತಿ, ಬಂಟ್ವಾಳ ಡಿವೈಎಸ್ಪಿ ರವೀಶ್ ಸಿ.ಆರ್., ವೃತ್ತ ನಿರೀಕ್ಷಕ ಮಂಜಯ್ಯ, ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ, ಕಂದಾಯ ನಿರೀಕ್ಷಕ ದಿವಾಕರ ಮೊದಲಾದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications