ದಿಡ್ಡಳ್ಳಿ ಆದಿವಾಸಿಗಳ ಪುನರ್ವಸತಿಗೆ ಆಗ್ರಹಿಸಿ ಮಂಗಳೂರಿನಲ್ಲಿ ಪ್ರತಿಭಟನೆ
ಮಂಗಳೂರು, ಡಿಸೆಂಬರ್, 21 : ಕೊಡಗಿನ ದಿಡ್ಡಳ್ಳಿಯ ಆದಿವಾಸಿ ಕುಟುಂಬಗಳ ಒಕ್ಕಲೆಬ್ಬಿಸಿದನ್ನು ಖಂಡಿಸಿ ಮತ್ತು ಆದಿವಾಸಿಗಳ ಪುನರ್ವಸತಿಗೆ ಆಗ್ರಹಿಸಿ ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿ ಮಂಗಳವಾರ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿತು.
ಈ ವೇಳೆ ಮಾತನಾಡಿದ ದಲಿತ ಸಂಘರ್ಷ ಸಮಿತಿ(ಪ್ರೊ.ಕೃಷ್ಣಪ್ಪ ಸ್ಥಾಪಿತ) ತಾಲೂಕು ಸಂಚಾಲಕ ರಾಕೇಶ್ ಕುಂದರ್, 'ಅಹಿಂದ ಪರವೆಂದೇ ಹೇಳಿಕೊಂಡು ಅಧಿಕಾರ ಹಿಡಿದ ರಾಜ್ಯ ಸರಕಾರವು ದಲಿತರ ಮೇಲೆ ಸಂಘಪರಿವಾರವನ್ನೇ ನಾಚಿಸುವಂತೆ ದೌರ್ಜನ್ಯ ಎಸಗಿದೆ.
ಸಿಎಂ ಸಿದ್ದರಾಮಯ್ಯನವರಿಗೆ ದಲಿತರ ಪರ ನಿಜವಾದ ಕಾಳಜಿ ಇದ್ದರೆ ದೌರ್ಜನ್ಯ ಎಸಗಿದ ಅರಣ್ಯ ಇಲಾಖೆ ಅಧಿಕಾರಿಗಳನ್ನು ತಕ್ಷಣವೇ ವಜಾಗೊಳಿಸಲಿ ಎಂದು ಆಗ್ರಹಿಸಿದರು. ಅಲ್ಲದೇ ಆದಿವಾಸಿ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲಿ ಎಂದರು.

ದಲಿತ ಮುಖಂಡ ಅಶೋಕ್ ಕೊಂಚಾಡಿ ಮಾತನಾಡಿ, 'ಆದಿವಾಸಿಗಳನ್ನು ಅಮಾನವೀಯವಾಗಿ ಒಕ್ಕಲೆಬ್ಬಿಸಿರುವ ಘಟನೆ ತೀರಾ ನಾಚಿಕೆಗೇಡು. ಈ ದೌರ್ಜನ್ಯವನ್ನು ಖಂಡಿಸಿ ಉಡುಪಿ ಚಲೋ ಮಾದರಿಯಲ್ಲೇ ಇದೇ 23ರಂದು 'ಮಡಿಕೇರಿ ಚಲೋ' ನಡೆಸುವುದಾಗಿ ತಿಳಿಸಿದರು.
ಪ್ರತಿಭಟನೆಯಲ್ಲಿ ಕೋಮು ಸೌಹಾರ್ದ ವೇದಿಕೆ ಜಿಲ್ಲಾಧ್ಯಕ್ಷ ಸುರೇಶ್ ಭಟ್ ಬಾಕ್ರಬೈಲ್, ಎಸ್ಪಿ ಆನಂದ, ಜಮಾಅತೆ ಇಸ್ಲಾಮಿ ಮುಖಂಡ ಶಬೀರ್ ಮೊದಲಾದವರು ಉಪಸ್ಥಿತರಿದ್ದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications