ಮಂಗಳೂರು ದಸರಾಕ್ಕೆ ಸೆಪ್ಟೆಂಬರ್ 21ರಂದು ಚಾಲನೆ
ಮಂಗಳೂರು, ಸೆಪ್ಟೆಂಬರ್ 18: 'ಮಂಗಳೂರು ದಸರಾ' ಎಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಾಲಯದಲ್ಲಿ ಇದೇ ಸೆಪ್ಟೆಂಬರ್ 21ರಂದು ದಸರಾ ಮಹೋತ್ಸವಕ್ಕೆ ಚಾಲನೆ ದೊರಕಲಿದೆ .
ಶಾರದಾ ಮಾತೆ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆಯೊಂದಿಗೆ ದಸರಾ ಮಹೋತ್ಸಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ ಜನಾರ್ದನ ಪೂಜಾರಿ ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

1990ರಿಂದ ದಸರಾ ಮಹೋತ್ಸವ
"1990 ರಿಂದ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಅದ್ಧೂರಿ ನವರಾತ್ರಿ ಉತ್ಸವ ನಡೆದು ಬಂದಿದೆ. ಶ್ರೀಕ್ಷೇತ್ರದ ದಸರಾ ಹಬ್ಬವೆಂದರೆ ಮಂಗಳೂರು ದಸರಾ ಎಂದೇ ದೇಶ ವಿದೇಶದಲ್ಲಿ ಖ್ಯಾತಿ ಪಡೆದಿದೆ," ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಭರ್ಜರಿ ಮೆರವಣಿಗೆ
"ಈ ಬಾರಿಯ ದಸರಾ ಸಿದ್ಧತೆ ಕುದ್ರೋಳಿಯಲ್ಲಿ ಭರದಿಂದ ಸಾಗಿದೆ. ರಾಷ್ಟ್ರಮಟ್ಟದಲ್ಲಿ ಎದ್ದು ಕಾಣುವಂತೆ ಈ ಬಾರಿ ದಸರಾ ಮೆರವಣಿಗೆ ಮಾಡಲಾಗುವುದು," ಎಂದು ಜನಾರ್ದನ ಪೂಜಾರಿ ತಿಳಿಸಿದರು.

ರಾಜ್ಯ ಸರಕಾರದ ಸಚಿವರಿಂದ ಚಾಲನೆ
ಇದೇ ಬರುವ ಸೆಪ್ಟೆಂಬರ್ 21 ರಂದು ಶಾರದಾ ಮಾತೆ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರಕಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ಈ ಬಾರಿ ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರದ ಸಚಿವರೊಬ್ಬರು ಚಾಲನೆ ನೀಡಲಿದ್ದಾರೆ ಎಂದು ಹೇಳಿದ ಅವರು ಸಚಿವರ ಹೆಸರು ಬಹಿರಂಗಪಡಿಸಲು ನಿರಾಕರಿಸಿದರು .

ಸೆಪ್ಟೆಂಬರ್ 30ರಂದು ಮೆರವಣಿಗೆ
ಸೆಪ್ಟೆಂಬರ್ 30 ರಂದು ಸಂಜೆ ಶ್ರೀ ಕ್ಷೇತ್ರದಿಂದ ಮಂಗಳೂರು ದಸರಾ ಮೆರವಣಿಗೆ ಹೊರಡಲಿದ್ದು ಶಾರದಾ ಮಾತೆ , ಮಹಾಗಣಪತಿ , ನವದುರ್ಗೆಯರ ಮೂರ್ತಿ ಸಹಿತ ರಾಜ್ಯದ ವಿವಿಧ ಭಾಗಳಿಂದ ಬರುವ 75 ಕ್ಕೂ ಅಧಿಕ ಕಲಾ ಪ್ರಕಾರಗಳು ಹಾಗೂ ಸ್ತಬ್ಧಚಿತ್ರಗಳು ಮೆರವಣಿಗೆಗೆ ಮೆರಗು ನೀಡಲಿವೆ ಎಂದು ಅವರು ಹೇಳಿದರು .
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications