ಮಂಗಳೂರು ದಸರಾ: ಕುಮಾರಸ್ವಾಮಿ, ದೇವೇಗೌಡರನ್ನು ಕೊಂಡಾಡಿದ ಜನಾರ್ಧನ ಪೂಜಾರಿ
Recommended Video

ಮಂಗಳೂರು, ಅಕ್ಟೋಬರ್. 15: ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ನಡೆಯುತ್ತಿರುವ ವೈಭವದ ಮಂಗಳೂರು ದಸರಾ ಮಹೋತ್ಸವವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ (ಅ.14) ಉದ್ಘಾಟಿಸಿದರು.
ಉದ್ಘಾಟನೆಯ ನಂತರ ಮಾತನಾಡಿದ ಕುಮಾರಸ್ವಾಮಿ, ಮಂಗಳೂರು ದಸರಾ ಉತ್ಸವದಲ್ಲಿ ಭಾಗವಹಿಸೋದು ನನ್ನ ಜೀವನದ ಅದೃಷ್ಟದ ಕ್ಷಣ. ದಸರಾ ಉತ್ಸವವನ್ನು ಉದ್ಘಾಟಿಸಬೇಕೆಂದು ಜನಾರ್ಧನ ಪೂಜಾರಿ ಕೇಳಿದಾಗ ಅವರ ಮಾತಿಗೆ ಗೌರವ ಕೊಟ್ಟು ಒಪ್ಪಿಕೊಂಡೆ. ಈ ಕ್ಷೇತ್ರದ ದೇವರ ಮೇಲೆ ನನಗೆ ಅಪಾರ ಭಕ್ತಿ.
ಕೆಲವರು ನವರಾತ್ರಿ, ದಸರಾ ಉತ್ಸವಕ್ಕೆ ಅಷ್ಟು ಬೇಕು, ಇಷ್ಟು ಬೇಕು ಎಂದು ಕೇಳುತ್ತಾರೆ. ಆದರೆ ಮಂಗಳೂರು ದಸರಾವನ್ನು ಯಾವುದೇ ಅನುದಾನ ಪಡೆಯದೇ ನಡೆಸುತ್ತಿರೋದು ಆಶ್ಚರ್ಯಕರ. ಮಂಗಳೂರು ದಸರಾ ವಿಶೇಷವಾಗಿದ್ದು, ಇದು ಜನತಾ ಉತ್ಸವ, ಜನತಾ ದಸರಾವಾಗಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ದ.ಕ.ಜಿಲ್ಲೆಯಲ್ಲಿ ನಾನು ಬಡವರನ್ನೂ ಕಂಡಿದ್ದೇನೆ, ಶ್ರೀಮಂತರನ್ನೂ ಕಂಡಿದ್ದೇನೆ. ಆದರೆ ಜನರೆಲ್ಲರೂ ನೆಮ್ಮದಿಯಿಂದ ಜೀವನ ಸಾಗಿಸಲೆಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು. ಮುಂದೆ ಓದಿ...

ಜನಾರ್ಧನ ಪೂಜಾರಿಯವರ ಮೇಲೆ ವಿಶೇಷ ಗೌರವ
ಜನಾರ್ಧನ ಪೂಜಾರಿಯವರ ಮೇಲೆ ನನಗೆ ವಿಶೇಷ ಗೌರವವಿದೆ. ಕ್ಷೇತ್ರದ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ಕೊಡುಗೆ ನೀಡಿದರು. ನಾನು ಕಂಡ ಪ್ರಾಮಾಣಿಕ ರಾಜಕಾರಣಿ ಜನಾರ್ಧನ ಪೂಜಾರಿ ಎಂದು ಶ್ಲಾಘಿಸಿದರು.

ದೇವೇಗೌಡರನ್ನು ನೆನೆದ ಪೂಜಾರಿ
ಇದೇ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ಧನ ಪೂಜಾರಿ, ಮುಖ್ಯಮಂತ್ರಿ ಕುಮಾರಸ್ವಾಮಿ ದಸರಾ ಉದ್ಘಾಟಿಸಿದ್ದರಿಂದ ಎಂದಿಗೂ ಸಿಗದಂತಹ ತೃಪ್ತಿ ನನಗಿಂದು ದೊರಕಿದೆ. ದೇವೇಗೌಡರು ಎಲ್ಲಿ ನೋಡಿದರೂ ನನ್ನನ್ನು ಗುರುಗಳೇ ಅನ್ನುತ್ತಿದ್ದರು. ಕುದ್ರೋಳಿ ಕ್ಷೇತ್ರ ನಿರ್ಮಾಣವಾದ ಪರಿಯ ಬಗ್ಗೆ ಹೊಗಳುತ್ತಿದ್ದರು ಎಂದು ನೆನಪಿಸಿಕೊಂಡರು.

ಮುಂದೊಂದು ದಿನ ಭಾರತದ ರಾಷ್ಟ್ರಪತಿ
ಎಲ್ಲರಿಗೂ ಪ್ರಧಾನಿಯಾಗಲು ಸಾಧ್ಯವಿಲ್ಲ. ಅದು ಪೂರ್ವಜನ್ಮದ ಪೂರ್ವಜರ ಪುಣ್ಯದಿಂದ ಸಾಧ್ಯ. ದೇವೇಗೌಡರ ಸುಪುತ್ರ ರಾಜ್ಯದ ಮುಖ್ಯಮಂತ್ರಿಯಾಗಿದ್ದು, ಅವರಲ್ಲಿ ಸಹನೆ, ವಿನಯ ಇದೆ. ದೇಶದ ಚರಿತ್ರೆಯಲ್ಲಿ ದೇವೇಗೌಡರ ಪಾತ್ರ ಬಹಳ ದೊಡ್ಡದು. ದೇವೇಗೌಡರೇ, ನಿಮ್ಮ ಮಗ ನಮ್ಮ ದೇವಳಕ್ಕೆ ಬಂದು ದೇವರಿಗೆ ಕೈಮುಗಿದರು.
ಕುಮಾರಸ್ವಾಮಿಯವರಲ್ಲಿ ನಾನು ವಿಶೇಷತೆಯನ್ನು ಕಂಡಿದ್ದೇನೆ. ಕುಮಾರಸ್ವಾಮಿ ಮುಂದೊಂದು ದಿನ ಭಾರತದ ರಾಷ್ಟ್ರಪತಿಗಳಾಗೋದು ಖಂಡಿತ ಎಂದು ಭವಿಷ್ಯ ನುಡಿದರು. ಕುಮಾರಸ್ವಾಮಿ ರಾಷ್ಟ್ರಪತಿ ಆಗುವಾಗ ನಾನು ಇರಲ್ಲ. ಆದರೆ, ರಾಷ್ಟ್ರಪತಿಯಾದಾಗ ದೇವರ ಸಮ್ಮುಖದಲ್ಲಿ ಪೂಜಾರಿ ಹೇಳಿದ ಎಂದು ನೆನಪಿಸಿಕೊಳ್ಳಿ ಎಂದು ತಿಳಿಸಿದರು.

ಜನಾರ್ಧನ ಪೂಜಾರಿಯಿಂದ ಬೈಸಿಕೊಳ್ಳುವ ಅಸೆ
ವಿಧಾನ ಪರಿಷತ್ ನ ವಿರೋಧ ಪಕ್ಷದ ಮುಖ್ಯ ಸಚೇತಕ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ, ಜೀವನದಲ್ಲಿ ಒಮ್ಮೆಯಾದರೂ ಜನಾರ್ಧನ ಪೂಜಾರಿಯಿಂದ ಬೈಸಿಕೊಳ್ಳೋ ಅಸೆಯಿದೆ. ಅವರು ಬೈದಲ್ಲಿ ಆಶೀರ್ವಾದ ನೀಡಿದಂತೆ ಎಂದು ಅಭಿಪ್ರಾಯ ಪಟ್ಟರು. ಅದ್ಭುತ ದಸರಾ ಉತ್ಸವವೆಂದರೆ ಮಂಗಳೂರು ದಸರಾ.
ಜಗತ್ತಿನಲ್ಲಿದ್ದ ಆಧುನಿಕ ಬ್ರಹ್ಮನೆಂದು ನಾರಾಯಣಗುರು ಗುರುತಿಸಿಕೊಂಡಿದ್ದರು. ನಾರಾಯಣಗುರುಗಳ ಆದರ್ಶ ಪ್ರತಿಪಾದಿಸುವ ವ್ಯಕ್ತಿಯೆಂದರೆ ಜನಾರ್ಧನ ಪೂಜಾರಿ ಎಂದು ಪ್ರಶಂಸಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಜನಾರ್ಧನ ಪೂಜಾರಿ ಸಿಎಂ ಕುಮಾರಸ್ವಾಮಿಗೆ ಸ್ವಾಗತ ಕೋರಲು ದೇವಾಲಯದ ಹೊರಗೆ ಮಳೆಯಲ್ಲಿ ಕೊಡೆಹಿಡಿದು ಕಾದು ಕುಳಿತಿದ್ದರು.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications