ವೈಭವದ ಮಂಗಳೂರು ದಸರಾ ಮಹೋತ್ಸವಕ್ಕೆ ತೆರೆ
ಮಂಗಳೂರು, ಅಕ್ಟೋಬರ್ 20: ವೈಭವದ ಮಂಗಳೂರು ದಸರಾ ಮಹೋತ್ಸವಕ್ಕೆ ತೆರೆಬಿದ್ದಿದೆ. 10 ದಿನಗಳ ಕಾಲ ನಡೆದ ಈ ಉತ್ಸವದ ಕೊನೆಯ ದಿನವಾದ ಶುಕ್ರವಾರ ಆರಂಭವಾದ ನವದುರ್ಗೆಯರ ಶೋಭಾಯಾತ್ರೆ ಶನಿವಾರ ಮುಂಜಾನೆ ಸಂಪನ್ನಗೊಂಡಿದೆ.
ನಿನ್ನೆ ಸಂಜೆ ಶ್ರೀಕ್ಷೇತ್ರ ಕುದ್ರೋಳಿ ಗೋಕರ್ಣನಾಥೇಶ್ವರ ದಿಂದ ಆರಂಭಗೊಂಡ ಶೋಭಾಯಾತ್ರೆಯು ನಗರದೆಲ್ಲೆಡೆ ಸಂಚರಿಸಿ ಇಂದು ಮುಂಜಾನೆ ಶ್ರೀ ಕ್ಷೇತ್ರ ಕುದ್ರೋಳಿಯನ್ನು ಪ್ರವೇಶಿಸಿತು.
ನಿನ್ನೆ ಸಂಜೆ ಆರಂಭಗೊಂಡಿದ್ದ ಭವ್ಯ ಮೆರವಣಿಗೆ ಕಂಬ್ಳಾ ರಸ್ತೆ, ಮಣ್ಣ ಗುಡ್ಡೆ ಮಾರ್ಗವಾಗಿ ಲೇಡಿ ಹಿಲ್ ಸರ್ಕಲ್, ನವಭಾರತ ಸರ್ಕಲ್, ಕೆ.ಎಸ್.ರಾವ್ ರಸ್ತೆ, ಹಂಪನಕಟ್ಟೆ, ವಿ.ವಿ.ಕಾಲೇಜು ವೃತ್ತದಿಂದ ತಿರುಗಿ, ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್ ಸ್ಟ್ರೀಟ್ ಚಿತ್ರಾ ಟಾಕೀಸು ಅಳಕೆಯಾಗಿ ಮರಳಿ ಕುದ್ರೋಳಿ ಕ್ಷೇತ್ರವನ್ನು ಪ್ರವೇಶಿಸಿತು.

ಬಳಿಕ ಮಹಾಗಣಪತಿ, ನವದುರ್ಗೆಯರು ಸೇರಿದಂತೆ ಶಾರದಾ ಮಾತೆಯ ವಿಗ್ರಹವನ್ನು ಗೋಕರ್ಣನಾಥೇಶ್ವರ ದೇವಳದ ಕಲ್ಯಾಣಿಯಲ್ಲಿ ವಿಸರ್ಜನೆ ಮಾಡಲಾಯಿತು. ಕೊನೆಯದಾಗಿ ಶ್ರೀ ಶಾರದಾ ಮಾತೆಯ ವಿಗ್ರಹ ವಿಸರ್ಜನಾ ಪೂಜೆ ನೆರವೇರಿಸುವ ಮೂಲಕ ಮಂಗಳೂರು ದಸರಾ ಮಹೋತ್ಸವಕ್ಕೆ ತೆರೆಬಿದ್ದಿತು.
ಕಲ್ಯಾಣಿಯಲ್ಲಿ ದೇವರ ಬಲಿಸೇವೆ ಹಾಗೂ ತೆಪ್ಪೋತ್ಸವ ನೆರವೇರಿಸಿ ನಂತರ ಶ್ರೀ ಶಾರದಾಮಾತೆಯ ವಿಗ್ರಹವನ್ನು ವಿಸರ್ಜನೆ ಮಾಡಲಾಯಿತು. ಅತ್ಯಂತ ವೈಭವಯುತವಾಗಿ ನಡೆದ ಮಂಗಳೂರು ದಸರಾ ಮಹೋತ್ಸವ ಅದ್ಧೂರಿಯಾಗಿ ಕೊನೆಗೊಂಡಿದೆ.

ಸುಮಾರು 9 ಕಿಮೀ ಉದ್ದದ ಮೆರವಣಿಗೆಗೆ ಪೂರಕವಾಗಿ ರಸ್ತೆಯುದ್ದಕ್ಕೂ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿತ್ತು.
ನವದುರ್ಗೆಯರ ಈ ಭವ್ಯ ಮೆರವಣಿಗೆಯಲ್ಲಿ 75 ಟ್ಯಾಬ್ಲೋಗಳು, ಕಲಾತಂಡಗಳು ಸೇರಿದಂತೆ ರಾಜ್ಯದ ಸಂಸ್ಕೃತಿ ಪರಂಪರೆ ಬಿಂಬಿಸುವ ಡೊಳ್ಳು ಕುಣಿತ, ಭಜನಾ ತಂಡಗಳು, ಕೋಲಾಟ, ನಂದಿಕೋಲು, ಪಟದ ಕುಣಿತದ ತಂಡಗಳು ಈ ಮೆರವಣಿಗೆಯಲ್ಲಿ ಭಾಗವಹಿಸಿದ್ದವು.

ಅದಲ್ಲದೇ ಈ ಮೆರವಣಿಗೆಯಲ್ಲಿ ತಾಸೆಯ ಬಡಿತಕ್ಕೆ ಹೆಜ್ಜೆಹಾಕುವ ಮಂಗಳೂರಿನ ದಸರಾ ಹುಲಿ ವೇಷದ ತಂಡಗಳ ನರ್ತನ ಮುಖ್ಯ ಆಕರ್ಷಣೆಯಾಗಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications