ವೈಭವದ ಮಂಗಳೂರು ದಸರಾ ಮಹೋತ್ಸವಕ್ಕೆ ತೆರೆ
ಮಂಗಳೂರು, ಅಕ್ಟೋಬರ್ 20: ವೈಭವದ ಮಂಗಳೂರು ದಸರಾ ಮಹೋತ್ಸವಕ್ಕೆ ತೆರೆಬಿದ್ದಿದೆ. 10 ದಿನಗಳ ಕಾಲ ನಡೆದ ಈ ಉತ್ಸವದ ಕೊನೆಯ ದಿನವಾದ ಶುಕ್ರವಾರ ಆರಂಭವಾದ ನವದುರ್ಗೆಯರ ಶೋಭಾಯಾತ್ರೆ ಶನಿವಾರ ಮುಂಜಾನೆ ಸಂಪನ್ನಗೊಂಡಿದೆ.
ನಿನ್ನೆ ಸಂಜೆ ಶ್ರೀಕ್ಷೇತ್ರ ಕುದ್ರೋಳಿ ಗೋಕರ್ಣನಾಥೇಶ್ವರ ದಿಂದ ಆರಂಭಗೊಂಡ ಶೋಭಾಯಾತ್ರೆಯು ನಗರದೆಲ್ಲೆಡೆ ಸಂಚರಿಸಿ ಇಂದು ಮುಂಜಾನೆ ಶ್ರೀ ಕ್ಷೇತ್ರ ಕುದ್ರೋಳಿಯನ್ನು ಪ್ರವೇಶಿಸಿತು.
ನಿನ್ನೆ ಸಂಜೆ ಆರಂಭಗೊಂಡಿದ್ದ ಭವ್ಯ ಮೆರವಣಿಗೆ ಕಂಬ್ಳಾ ರಸ್ತೆ, ಮಣ್ಣ ಗುಡ್ಡೆ ಮಾರ್ಗವಾಗಿ ಲೇಡಿ ಹಿಲ್ ಸರ್ಕಲ್, ನವಭಾರತ ಸರ್ಕಲ್, ಕೆ.ಎಸ್.ರಾವ್ ರಸ್ತೆ, ಹಂಪನಕಟ್ಟೆ, ವಿ.ವಿ.ಕಾಲೇಜು ವೃತ್ತದಿಂದ ತಿರುಗಿ, ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಕಾರ್ ಸ್ಟ್ರೀಟ್ ಚಿತ್ರಾ ಟಾಕೀಸು ಅಳಕೆಯಾಗಿ ಮರಳಿ ಕುದ್ರೋಳಿ ಕ್ಷೇತ್ರವನ್ನು ಪ್ರವೇಶಿಸಿತು.

ಬಳಿಕ ಮಹಾಗಣಪತಿ, ನವದುರ್ಗೆಯರು ಸೇರಿದಂತೆ ಶಾರದಾ ಮಾತೆಯ ವಿಗ್ರಹವನ್ನು ಗೋಕರ್ಣನಾಥೇಶ್ವರ ದೇವಳದ ಕಲ್ಯಾಣಿಯಲ್ಲಿ ವಿಸರ್ಜನೆ ಮಾಡಲಾಯಿತು. ಕೊನೆಯದಾಗಿ ಶ್ರೀ ಶಾರದಾ ಮಾತೆಯ ವಿಗ್ರಹ ವಿಸರ್ಜನಾ ಪೂಜೆ ನೆರವೇರಿಸುವ ಮೂಲಕ ಮಂಗಳೂರು ದಸರಾ ಮಹೋತ್ಸವಕ್ಕೆ ತೆರೆಬಿದ್ದಿತು.
ಕಲ್ಯಾಣಿಯಲ್ಲಿ ದೇವರ ಬಲಿಸೇವೆ ಹಾಗೂ ತೆಪ್ಪೋತ್ಸವ ನೆರವೇರಿಸಿ ನಂತರ ಶ್ರೀ ಶಾರದಾಮಾತೆಯ ವಿಗ್ರಹವನ್ನು ವಿಸರ್ಜನೆ ಮಾಡಲಾಯಿತು. ಅತ್ಯಂತ ವೈಭವಯುತವಾಗಿ ನಡೆದ ಮಂಗಳೂರು ದಸರಾ ಮಹೋತ್ಸವ ಅದ್ಧೂರಿಯಾಗಿ ಕೊನೆಗೊಂಡಿದೆ.

ಸುಮಾರು 9 ಕಿಮೀ ಉದ್ದದ ಮೆರವಣಿಗೆಗೆ ಪೂರಕವಾಗಿ ರಸ್ತೆಯುದ್ದಕ್ಕೂ ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿತ್ತು.
ನವದುರ್ಗೆಯರ ಈ ಭವ್ಯ ಮೆರವಣಿಗೆಯಲ್ಲಿ 75 ಟ್ಯಾಬ್ಲೋಗಳು, ಕಲಾತಂಡಗಳು ಸೇರಿದಂತೆ ರಾಜ್ಯದ ಸಂಸ್ಕೃತಿ ಪರಂಪರೆ ಬಿಂಬಿಸುವ ಡೊಳ್ಳು ಕುಣಿತ, ಭಜನಾ ತಂಡಗಳು, ಕೋಲಾಟ, ನಂದಿಕೋಲು, ಪಟದ ಕುಣಿತದ ತಂಡಗಳು ಈ ಮೆರವಣಿಗೆಯಲ್ಲಿ ಭಾಗವಹಿಸಿದ್ದವು.

ಅದಲ್ಲದೇ ಈ ಮೆರವಣಿಗೆಯಲ್ಲಿ ತಾಸೆಯ ಬಡಿತಕ್ಕೆ ಹೆಜ್ಜೆಹಾಕುವ ಮಂಗಳೂರಿನ ದಸರಾ ಹುಲಿ ವೇಷದ ತಂಡಗಳ ನರ್ತನ ಮುಖ್ಯ ಆಕರ್ಷಣೆಯಾಗಿತ್ತು.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications