ಮಂಗಳೂರು ದಸರಾ; 300ರೂಪಾಯಿನಲ್ಲಿ ಮಂಗಳೂರಿನ ಒಂಭತ್ತು ದೇವಸ್ಥಾನಗಳ ದರ್ಶನ
ಮಂಗಳೂರು, ಸೆಪ್ಟೆಂಬರ್, 21: ಮೈಸೂರು ದಸರಾ ಬಳಿಕ ರಾಜ್ಯದ ಗಮನಸೆಳೆಯುವ ಮಂಗಳೂರು ದಸರಾಗೆ ಪ್ರವಾಸಿಗರನ್ನು ಆಕರ್ಷಿಸಲು ಕೆಎಸ್ಆರ್ಟಿಸಿ ನೂತನ ಪ್ರಯೋಗ ಮಾಡಿದೆ. ಮಂಗಳೂರು ದಸರಾ ದರ್ಶನ ಎಂಬ ಪರಿಕಲ್ಪನೆಯಡಿ ಒಂದು ಇಡೀ ದಿನ ಮಂಗಳೂರಿನ ಒಂಭತ್ತು ದೇವಸ್ಥಾನಗಳನ್ನು ಸಂದರ್ಶಿಸುವ ಪ್ಯಾಕೇಜ್ ಟೂರ್ ಅನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಡಿದೆ.
'ಮಂಗಳೂರು ದಸರಾ ದರ್ಶನ' ಪ್ರವಾಸ ಪ್ಯಾಕೇಜ್
ಕೆಎಸ್ಆರ್ಟಿಸಿ ವತಿಯಿಂದ 'ಮಂಗಳೂರು ದಸರಾ ದರ್ಶನ' ಪ್ರವಾಸ ಪ್ಯಾಕೇಜ್ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5ರ ವರೆಗೆ ನಡೆಯಲಿದೆ. ದಸರಾ ವೇಳೆ ಮಂಗಳೂರಿನ ಸುತ್ತ ಮುತ್ತಲಿನ ದೇವಸ್ಥಾನಗಳಿಗೆ ಧಾರ್ಮಿಕ ಪ್ರವಾಸ ಈ ಟೂರ್ ಪ್ಯಾಕೇಜ್ನ ಉದ್ದೇಶವಾಗಿದೆ. ಮಂಗಳೂರಿನ ಪ್ರಸಿದ್ಧ 10 ವಿವಿಧ ದೇವಸ್ಥಾನಗಳಿಗೆ ಈ ಪ್ರವಾಸ ಪ್ಯಾಕೇಜ್ ಇರಲಿದ್ದು, ಊಟ, ಉಪಹಾರ ಹೊರತು ಪಡಿಸಿ, ಪ್ರತಿ ಪ್ರಯಾಣಿಕರಿಗೆ ಕನಿಷ್ಠ ದರ ನಿಗದಿಪಡಿಸಲಾಗಿದೆ. ಒಂದು ದಿನದ ಪ್ರವಾಸ ಇದಾಗಿದ್ದು, ಬೆಳಗ್ಗೆ ಹೊರಟರೆ, ದೇವಸ್ಥಾನಗಳ ದರ್ಶನ ಮುಗಿಸಿ ಸಂಜೆ ವೇಳೆಗೆ ವಾಪಸ್ ಆಗಬಹುದು. ಹಸಿರು ಬಣ್ಣದ ನರ್ಮ್ ಬಸ್ ಅನ್ನು ಇದಕ್ಕೆ ಪ್ರಾಯೋಗಿಕವಾಗಿ ಬಳಸಲಾಗುತ್ತಿದೆ. ಒಂದು ಬಸ್ನಲ್ಲಿ 40 ಜನರಿಗೆ ಮಾತ್ರ ಅವಕಾಶ ಇರುತ್ತದೆ.

ದಸರಾ ಪ್ರವಾಸದ ಸಮಯ
ಬೆಳಗ್ಗೆ 8 ಗಂಟೆಗೆ ಬಿಜೈ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಹೊರಟರೆ, ರಾತ್ರಿ 8:30ಕ್ಕೆ ಬಸ್ ನಿಲ್ದಾಣಕ್ಕೆ ಮರಳಲಿದೆ. ಚಾಲಕನಲ್ಲದೆ, ಓರ್ವ ಸಹಾಯಕನೂ ಇರಲಿದ್ದಾರೆ. ಈಗಾಗಲೇ ಆನ್ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್ ಆರಂಭಿಸಲಾಗಿದೆ. ಅಲ್ಲದೆ ಬಸ್ ಹೊರಡುವ ಮುನ್ನ ಸ್ಥಳದಲ್ಲೇ ಟಿಕೆಟ್ ಕೂಡ ನೀಡಲಾಗುತ್ತದೆ. ವಯಸ್ಕರಿಗೆ 300 ರೂಪಾಯಿ ಹಾಗೂ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ 250 ರೂಪಾಯಿ ನಿಗದಿಪಡಿಸಲಾಗಿದೆ.

ಮಂಗಳೂರಿನ ಶ್ರೀ ಮಂಗಳಾದೇವಿ, ಪೊಳಲಿ ಶ್ರೀ ರಾಜರಾಜೇಶ್ವರಿ, ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ, ಕಟೀಲು ದುರ್ಗಾಪರಮೇಶ್ವರಿ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ, ಸಸಿಹಿತ್ಲು ಶ್ರೀ ಭಗವತಿ, ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ, ಉರ್ವಾ ಶ್ರೀ ಮಾರಿಯಮ್ಮ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ದರ್ಶನ ಮಾಡಬಹುದಾಗಿದೆ. ಇದರ ನಡುವೆ ಬೀಚ್ಗೂ ಪ್ರವಾಸಿಗರನ್ನು ಕರೆದುಕೊಂಡು ಹೋಗಲಾಗುತ್ತದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications