ನೋಟು ನಿಷೇಧದ ಎಫೆಕ್ಟು: ಮಂಗಳೂರು ದಡದಲ್ಲಿ ಶೇ 90ರಷ್ಟು ಬೋಟು
ಮಂಗಳೂರು, ಜನವರಿ 1: ಮಂಗಳೂರಿನಲ್ಲಿ ಮೀನುಗಾರಿಕೆ ಸಂಪೂರ್ಣ ನೆಲಕಚ್ಚಿದೆ. ಹೌದು, ನೋಟು ನಿಷೇಧದ ಪರಿಣಾಮ ಮೀನುಗಾರಿಕೆ ವ್ಯವಹಾರದ ಮೇಲೆ ತೀವ್ರ ಪರಿಣಾಮ ಬೀರಿದ್ದು ಶೇ 80ರಷ್ಟು ಬೋಟುಗಳನ್ನು ದಡಕ್ಕೆ ನಿಲ್ಲಿಸಲಾಗಿದೆ. ಮಂಗಳೂರು ಬಂದರಿನಲ್ಲಿ ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು, ಕೇರಳ ರಾಜ್ಯಗಳ ಸುಮಾರು 5 ಸಾವಿರ ಮಂದಿ ಕೊಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ.
ಆದರೆ, ಮೀನುಗಾರಿಕೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಕೊಲಿ ಕಾರ್ಮಿಕರು ಊರಿಗೆ ಮರಳಿದ್ದಾರೆ. ಇನ್ನು ದಕ್ಕೆಯ ಪರಿಸರದಲ್ಲಿ ಶೇ 50ರಷ್ಟು ಅಂಗಡಿ, ಕ್ಯಾಂಟೀನ್ ಗಳು ಮೊದಲಾದ ಹತ್ತಾರು ವ್ಯವಹಾರ ನಡೆಯುತ್ತವೆ. ಮಧ್ಯಾಹ್ನ ತನಕ ಜಾತ್ರೆಯಂತೆ ವ್ಯವಹಾರ ನಡೆಯುವಲ್ಲಿ ಜನರು ಕಡಿಮೆಯಾಗಿ, ವ್ಯವಹಾರ ಕುಂಠಿತಗೊಂಡಿದೆ.[ನೋಟು ನಿಷೇಧದ 50ದಿನ: ಸಮೀಕ್ಷೆಯಲ್ಲಿ ಮತ್ತೆ ಮೋದಿಗೆ ಉಘೇ..ಉಘೇ..]

500 ಮತ್ತು 1000 ರುಪಾಯಿ ನೋಟು ನಿಷೇಧ ಹಾಗೂ ಬ್ಯಾಂಕ್ ನಲ್ಲಿ ನಿಗದಿತ ಪ್ರಮಾಣದ ನಗದು ಸಿಗದ ಹಿನ್ನೆಲೆಯಲ್ಲಿ ದೋಣಿಯಿಂದ ಬರುವ ಮೀನು ಖರೀದಿ ಕಡಿಮೆಯಾಗಿದೆ. ಮೀನಿನ ದರ ಕಡಿಮೆಯಾಗಿ ಮಾಲೀಕರಿಗೆ ನಷ್ಟವಾಗುತ್ತಿದೆ. ಇದನ್ನು ತಪ್ಪಿಸಲು ಮೀನುಗಾರಿಕೆ ಸ್ಥಗಿತ ಮಾಡಲಾಗಿದೆ ಎಂದು ಹೇಳುತ್ತಾರೆ ಮೀನುಗಾರರ ಸಂಘದ ಸದಸ್ಯ ಭಾಸ್ಕರ ಬೆಂಗ್ರೆ.

ಆಳಸಮುದ್ರ ಮೀನುಗಾರಿಕೆಗೆ ತೆರಳುವ ಸುಮಾರು 250ರಷ್ಟು ಬೋಟುಗಳು ನಿತ್ಯ ದಕ್ಕೆಗೆ ಬಂದು ಮೀನು ಖಾಲಿ ಮಾಡುತ್ತಿದ್ದರೆ, ಆದರೆ ಈಗ ಅವುಗಳ ಸಂಖ್ಯೆ ವಿಪರೀತ ಕಡಿಮೆಯಾಗಿದೆ. ನಿತ್ಯ ಮೀನುಗಾರಿಕೆಗೆ ತೆರಳುವ ಶೇ 90ರಷ್ಟು ಸಣ್ಣ ದೋಣಿಗಳು ದಡ ಸೇರಿವೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications