ನವದುರ್ಗೆಯರ ಭವ್ಯ ಮೆರವಣಿಗೆಗೆ ಸಿದ್ಧಗೊಳ್ಳುತ್ತಿದೆ ಮಂಗಳೂರು
ಮಂಗಳೂರು, ಅಕ್ಟೋಬರ್.18: ವೈಭವದ ಮಂಗಳೂರು ದಸರಾ ಮೆರವಣಿಗೆಗೆ ಕ್ಷಣಗಣನೆ ಆರಂಭಗೊಂಡಿದೆ. ದಸರಾದ ಮುಖ್ಯ ಆಕರ್ಷಣೆ ಶೋಭಾಯಾತ್ರೆಗೆ ಮಂಗಳೂರು ಸಕಲ ರೀತಿಯಲ್ಲಿ ಸಿದ್ಧಗೊಳ್ಳುತ್ತಿದೆ. ನಗರದ ಬೀದಿಗಳು ವಿದ್ಯುತ್ ದೀಪಗಳ ಅಲಂಕಾರದಿಂದ ಕಂಗೊಳಿಸುತ್ತಿವೆ.
ಶ್ರೀ ಕ್ಷೇತ್ರ ಕುದ್ರೋಳಿ ಗೋಕರ್ಣನಾಥ ದೇವಾಲಯದಿಂದ ಆರಂಭಗೊಳ್ಳುವ ಶಾರದಾ ಮಾತೆ ಹಾಗೂ ನವದುರ್ಗೆಯರ ಶೋಭಾಯಾತ್ರೆ ಮೆರವಣಿಗೆಗೆ ಎಲ್ಲ ಸಿದ್ಧತೆ ನಡೆಸಲಾಗುತ್ತಿದ್ದು , ಶುಕ್ರವಾರ ಸಂಜೆ ಭವ್ಯ ಶೋಭಾಯಾತ್ರೆ ಆರಂಭಗೊಳ್ಳಲಿದೆ.
ವಿಶ್ವ ವಿಖ್ಯಾತ ಮೈಸೂರು ದಸರಾಕ್ಕೆ ಅರಮನೆ ಮೆರಗು ನೀಡಿದರೆ, ಮಂಗಳೂರು ದಸರಾಕ್ಕೆ ಕುದ್ರೋಳಿ ಗೋಕರ್ಣನಾಥ ದೇವಾಲಯದ್ದೇ ದರ್ಬಾರು. ಮೈಸೂರಲ್ಲಿ ಚಾಮುಂಡೇಶ್ವರಿ ಅಗ್ರದೇವತೆಯಾದರೆ, ಮಂಗಳೂರು ದಸರಾಕ್ಕೆ ಶಾರದ ಮಾತೆಯೊಂದಿಗೆ ಶಕ್ತಿಯ ಪ್ರತೀಕವಾಗಿರುವ ನವದುರ್ಗೆಯರೇ ಧರೆಗಿಳಿದು ಬರುತ್ತಾರೆ.

ಒಂದೆಡೆ ಮೈಸೂರಿನಲ್ಲಿ ವಿಶ್ವ ವಿಖ್ಯಾತ ಜಂಬು ಸವಾರಿ ನಡೆದರೆ, ಇನ್ನೊಂದೆಡೆ ಮಂಗಳೂರಿನಲ್ಲಿ ನವದುರ್ಗೆಯರ ಭವ್ಯ ಸವಾರಿ ಜರುಗುತ್ತದೆ.
10 ದಿನಗಳ ಕಾಲ ನಡೆಯುವ ಮಂಗಳೂರು ದಸರಾ ಉತ್ಸವ ಕೊನೆಯ ದಿನ ಈ ಭವ್ಯ ಮೆರವಣಿಗೆಯೊಂದಿಗೆ ತೆರೆಬೀಳುತ್ತದೆ. ಮಂಗಳೂರಿನಲ್ಲಿ ನಡೆಯುವ ಈ ವಿಜೃಂಭಣೆಯ ದಸರಾ ಉತ್ಸವದ ಆಕರ್ಷಕ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಲಕ್ಷಾಂತರ ಜನರು ಬರುತ್ತಾರೆ.

ಸುಮಾರು 9 ಕಿಮೀ ಈ ಭವ್ಯ ಮೆರವಣಿಗೆ ಜರಗುತ್ತದೆ. ಮೆರವಣಿಗೆ ಹಾದು ಹೋಗುವ ರಸ್ತೆಯುದ್ದಕ್ಕೂ ಶ್ರೀ ಕ್ಷೇತ್ರದ ವತಿಯಿಂದ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ದಸರಾ ಮೆರವಣಿಗೆಯಲ್ಲಿ 75 ಕ್ಕೂ ಅಧಿಕ ಸ್ತಬ್ಧಚಿತ್ರಗಳು ನೂರಕ್ಕೂ ಹೆಚ್ಚಿನ ಕಲಾತಂಡಗಳು ಭಾಗವಹಿಸಲಿವೆ. ಈ ಭವ್ಯ ಶೋಭಾಯಾತ್ರೆಯ ಮೆರವಣಿಗೆ 16 ಗಂಟೆಗಳ ಕಾಲ ನಡೆಯಲಿದ್ದು, ನವದುರ್ಗೆಯರ ಶೋಭಾ ಮೆರವಣಿಗೆ ಸಾಂಗವಾಗಿ ನಡೆಯಲು ಬಿಗಿ ಪೊಲೀಸ್ ಬಂದೋಬಸ್ತ್ ಗೆ ವ್ಯವಸ್ಥೆ ಮಾಡಲಾಗಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications