ಸ್ಕೇಟಿಂಗ್ ಚಾಂಪಿಯನ್ ಶಿಪ್; ಮಂಗಳೂರಿನ ಅನಘಾಗೆ ಮೂರು ಚಿನ್ನದ ಪದಕ
ಮಂಗಳೂರು, ಜೂನ್ 26: ರಾಜ್ಯ ಮಟ್ಟದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಮಂಗಳೂರಿನ ಬಾಲಕಿ ಅನಘಾ ಮೂರು ಚಿನ್ನದ ಪದಕ ಜಯಿಸಿದ್ದಾಳೆ. ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಆಯೋಜಿಸಿದ್ದ ರಾಜ್ಯಮಟ್ಟದ ಓಪನ್ ಸ್ಪೀಡ್ ಸ್ಕೇಟಿಂಗ್ ಚಾಂಪಿಯನ್ ಶಿಪ್ 2019ರಲ್ಲಿ ಅನಘಾ ಮೂರು ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾಳೆ.
ಮೈಸೂರಿನ ರಾವ್ಸ್ ಸ್ಕೇಟಿಂಗ್ ರಿಂಕ್ ನಲ್ಲಿ ಜೂನ್ 21 ರಿಂದ 23 ರವರೆಗೆ ನಡೆದ ಸ್ಕೇಟಿಂಗ್ ಚಾಂಪಿಯನ್ ಶಿಪ್ ನ 9 ರಿಂದ 11 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ 500 ಮೀಟರ್ ರಿಂಕ್ ರೇಸ್, 1000 ಮೀಟರ್ ರಿಂಕ್ ರೇಸ್ ಹಾಗೂ 1 ಲ್ಯಾಪ್ ರೋಡ್ ರೇಸ್ ನಲ್ಲಿ ತಲಾ ಮೂರು ಚಿನ್ನದ ಪದಕ ಪಡೆದ ಅನಘಾ, ರಾಜ್ಯಮಟ್ಟದ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾಳೆ.

ಮಂಗಳೂರಿನ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿ ಮಗಳಾದ ಅನಘಾ ಮಂಗಳೂರಿನ ಬಿಜೈ ಲೂರ್ಡ್ಸ್ ಸಿಬಿಎಸ್ಇ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿನಿ. ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯೆಯಾಗಿದ್ದು, ತರಬೇತುದಾರರಾದ ಮೋಹನ್ ದಾಸ್.ಕೆ ಹಾಗೂ ಜಯರಾಜ್ ಅವರಿಂದ ತರಬೇತಿ ಪಡೆಯುತ್ತಿದ್ದಾಳೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications