ಸ್ನೇಹಿತನ ಮದುವೆಗೆ ಬಂದು ಹಳ್ಳಿಯ ಹಣೆಬರಹ ಬದಲಿಸಿದ ಯುವತಿ!
ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಚ್ಛ ಭಾರತ ಅಭಿಯಾನದ ಯೋಚನೆಯನ್ನು ದೇಶದ ಜನರ ಮುಂದಿಡುವ ನಾಲ್ಕು ವರ್ಷಕ್ಕೆ ಮುನ್ನವೇ ಗ್ರಾಮಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಪಣ ತೊಟ್ಟ ಯುವತಿಯ ಯಶಸ್ಸಿನ ಗಾಥೆ ಇದು. ಹಾಗೆ ಶೌಚಾಲಯ ನಿರ್ಮಿಸುವ ಮೂಲಕ ಬಯಲುಮುಕ್ತ ಶೌಚಾಲಯ ಗ್ರಾಮದ ಕಿರೀಟ ತೊಡಲು ಕಾರಣಳಾದ ಆ ಯುವತಿ ಇತರರಿಗೆ ಪ್ರೇರಣೆ ಆಗಿದ್ದಾರೆ.
ಬೆಂಗಳೂರಿನಲ್ಲಿ ಸಂಸ್ಥೆ ಒಂದರಲ್ಲಿ ಕೈ ತುಂಬಾ ಸಂಬಳವನ್ನು ಪಡೆಯುತಿದ್ದ ಎಂ.ಸ್.ಡಬ್ಲ್ಯೂ ಸ್ನಾತಕೋತ್ತರ ಪದವೀಧರೆ ಭವ್ಯ ರಾಣಿ ಇತರರಿಗೆ ಪ್ರೇರಣೆಯಾಗಿರುವ ಯುವತಿ. 2010ರಲ್ಲಿ ತುಮಕೂರು ಜಿಲ್ಲೆಯ ತುರವೇಕೆರೆ ತಾಲ್ಲೂಕಿನ ಶೆಟ್ಟಿಗೊಂಡನಹಳ್ಳಿಗೆ ಸ್ನೇಹಿತರ ಮದುವೆಗೆ ಹೋದಾಗ ಆಕೆಗೆ ಆದ ಕಹಿ ಅನುಭವ ಇಂದಿನ ಸಾಧನೆಗೆ ಕಾರಣವಾಗಿದೆ. 400ಕ್ಕೂ ಹೆಚ್ಚು ಶೌಚಾಲಯ ನಿರ್ಮಾಣಕ್ಕೆ ಪ್ರೇರಣೆಯಾಗಿದೆ.[ಗ್ರಾಪಂ ಅಧ್ಯಕ್ಷೆಯಿಂದ ಒಂದೇ ದಿನದಲ್ಲಿ ಶೌಚಾಲಯ ಸಿದ್ಧ!]

ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಅನಂತಡಿಯ ಈ ಯುವತಿ, ತನ್ನ ಸ್ನೇಹಿತನ ಮದುವೆಗೆ ಅಂತ ಬಂದಾಗ ಗ್ರಾಮದಲ್ಲಿ ಶೌಚಾಲಯ ಇಲ್ಲದೆ ಕಹಿ ಅನುಭವ ಎದುರಿಸಿದ್ದರು. ಅದನ್ನೇ ಮನಸಿನಲ್ಲಿ ಇಟ್ಟುಕೊಂಡಿದ್ದ ಭವ್ಯ ರಾಣಿ ಕೆಲವೇ ದಿನಗಳಲ್ಲಿ ತಮ್ಮ ಕೆಲಸಕ್ಕೆ ರಾಜೀನಾಮೆ ಕೊಟ್ಟು ಗ್ರಾಮಕ್ಕೆ ವಾಪಸ್ ಬಂದು ಗ್ರಾಮಸ್ಥರನ್ನು ಪರಿಚಯ ಮಾಡಿಕೊಂಡರು. ಶೌಚಾಲಯದ ಬಗ್ಗೆ ಅರಿವನ್ನು ಮೂಡಿಸಿದರು.

ಆದರೆ ಶೆಟ್ಟಿಗೊಂಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಒಟ್ಟು 22 ಹಳ್ಳಿಗಳಿದ್ದು, 1200 ಶೌಚಾಲಯಗಳ ಕೊರತೆ ಇದ್ದವು. ಭವ್ಯ ಮಾತು ಕೇಳಿದ ಗ್ರಾಮಸ್ಥರು ಶೌಚಾಲಯ ಕಟ್ಟಿಕೊಳ್ಳುವುದಕ್ಕೆ ಒಪ್ಪಿಕೊಂಡರು. ಆದರೆ ಅವರ ಯಾರ ಬಳಿಯೂ ಹಣ ಇರಲಿಲ್ಲ. ಇದರಿಂದ ಎದೆಗುಂದದೆ ತಾನು ಕೂಡಿಸಿಟ್ಟ 2 ಲಕ್ಷ ರುಪಾಯಿಯಲ್ಲಿ 2010ರಲ್ಲಿಯೇ 100 ಶೌಚಾಲಯಗಳ ನಿರ್ಮಾಣಕ್ಕೆ ಸಾಮಗ್ರಿಗಳನ್ನು ಒದಗಿಸಿದರು.[5 ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಗಳು : ಸಿದ್ದರಾಮಯ್ಯ ಘೋಷಣೆ!]

ಅಷ್ಟಕ್ಕೇ ಸುಮ್ಮನಾಗದ ಭವ್ಯ ರಾಣಿ, ಬಳಿಕ ಗ್ರಾಮ ಪಂಚಾಯತಿಗೆ ಹೋಗಿ ಚರ್ಚಿಸಿ ಸರಕಾರದಿಂದ ಬರುವಂತಹ ಅನುದಾನವನ್ನು ಬಳಸಲು ಸಲಹೆ ನೀಡಿ, ತಾವೇ ಖುದ್ದಾಗಿ ನಿಂತು ಶೌಚಾಲಯ ನಿರ್ಮಿಸಲು ಸಹಕಾರಿಯಾಗಿದ್ದಾರೆ. ಗ್ರಾಮದ ಸುತ್ತಮುತ್ತ ಸುಮಾರು 400ಕ್ಕೂ ಅಧಿಕ ಶೌಚಾಲಯ ನಿರ್ಮಾಣಕ್ಕೆ ಕಾರಣರಾಗಿದ್ದಾರೆ.
ಆದರೆ, ಇಂಥ ಮಹತ್ತರ ಕೆಲಸದ ಆರಂಭದಲ್ಲೆ ಈಕೆಗೇನೋ ಹುಚ್ಚು ಅಂತ ಕೆಲವರು ಮಾತನಾಡುತ್ತಿದ್ದರು. ಈಗ ಭವ್ಯ ನಮ್ಮ ಗ್ರಾಮದ ದತ್ತು ಮಗಳು ಅಂತ ಗುಣಗಾನ ಮಾಡುತ್ತಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications