ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ: ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್
ಮಂಗಳೂರು, ಅಗಸ್ಟ್ 12: ರಾಜ್ಯ ಸರ್ಕಾರ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳಿಗೆ ಒದಗಿಸುತ್ತಿದ್ದ ನೆರವಿಗೆ ತಡೆ ಮಾಡಿರುವುದನ್ನು ವಿರೋಧಿಸಿ ಆಗಸ್ಟ್ 11 ರಂದು ನಡೆದ 'ಭಿಕ್ಷಾಂ ದೇಹಿ ಪ್ರತಿಭಟನೆ' ಈಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಿತ ವಿಷಯವಾಗಿದ್ದು ಟ್ವಿಟ್ಟರಿನಲ್ಲಿ ಟ್ರೆಂಡಿಂಗ್ ಆಗಿದೆ.
ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದಲ್ಲಿ ಶೇ 90. ರಷ್ಟು ಅಹಿಂದ ವರ್ಗಕ್ಕೆ ಸೇರಿದ ಮಕ್ಕಳಿದ್ದು, ಧಾರ್ಮಿಕ ದತ್ತಿ ಇಲಾಖೆ ಮೂಲಕ ಅಲ್ಲಿಗೆ ನೀಡುತ್ತಿದ್ದ ಅನುದಾನವನ್ನು ರಾಜ್ಯ ಸರ್ಕಾರ ದಿಢೀರನೆ ರದ್ದುಗೊಳಿಸಿದ್ದು ಚರ್ಚಿತ ವಿಷಯವಾಗಿದೆ.

ಇದೇ ವೇಳೆ ಡಾ. ಪ್ರಭಾಕರ ಭಟ್ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಕೊಲ್ಲೂರು ದೇವಳದಿಂದ ಮಕ್ಕಳ ಊಟಕ್ಕಾಗಿ ಅನುದಾನ ಕೊಡದಿದ್ದರೆ ನಾವು ಭಿಕ್ಷೆ ಬೇಡಿಯಾದರೂ ಮಕ್ಕಳಿಗೆ ಊಟ ಹಾಕಿಸುತ್ತೇನೆ ಎಂದು ಹೇಳಿದ ಬಳಿಕ "ಪೋಸ್ಟ್ ಕಾರ್ಡ್" ಎಂಬ ಸಾಮಾಜಿಕ ಜಾಲತಾಣ ಈ ಅಭಿಯಾನ ಕೈಗೆತ್ತಿಕೊಂಡಿತ್ತು.
School Children of Sri Rama Vidya Kendra protest against the State Govt order to stop grant provided for children's meals.#Bhikshandehi pic.twitter.com/kwcFh6dB6h
— Nandan Mallya Ullal (@nandanmallya) August 11, 2017
ಯಾವಾಗ ಒಬ್ಬ ರಾಜನಾಗಿ ಪ್ರಜೆಯನ್ನು ಕಾಪಾಡಲು ಅಸಾಧ್ಯವೋ ಆಗ ಅದರ ಹೊಣೆ ಸಮಾಜದಲ್ಲಿ ಒಂದಾಗಿರುವ ನಮ್ಮ ಮೇಲಿರುತ್ತದೆ ಸರಕಾರ ಇನ್ನು ಮುಂದಿನ ಎಂಟು ತಿಂಗಳ ಕಾಲ ಆಳ್ವಿಕೆ ಮಾಡಲಿದೆ. ಅಷ್ಟು ಸಮಯ ಅವರ ಊಟದ ವ್ಯವಸ್ಥೆ ಸಮಾಜ ಹಿತವನ್ನು ಬಯಸುವ ನಾವು ಮಾಡಬೇಕಾಗಿದೆ ಹಾಗಾಗಿ ಮಕ್ಕಳ ಪರವಾಗಿ ಭಿಕ್ಷೆ ಬೇಡುವ ಆಂದೋಲನಕ್ಕೆ ಹೊರಟಿದ್ದೇವೆ ಎಂದು ಪೋಸ್ಟ್ ಕಾರ್ಡ್ ಹೇಳಿತ್ತು.
ಒಂದು ವಿದ್ಯಾರ್ಥಿಗೆ ತಲಾ 10.ರೂಪಾಯಿ ನಂತೆ ದಿನ ಖರ್ಚು ಬೀಳುತ್ತದೆ. ಹೀಗೆ 3016 ವಿದ್ಯಾರ್ಥಿಗಳ ಖರ್ಚನ್ನು ನೋಡಿಕೊಳ್ಳಲು ಭಿಕ್ಷೆ ನೀಡಿ ಎಂದು ಭಿಕ್ಷಾಂದೇಹಿ ಹ್ಯಾಶ್ ಟ್ಯಾಗ್ ನೊಂದಿಗೆ ಆರಂಭಿಸಿದೆ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರಕಿದೆ ಇದರಲ್ಲಿ ಬ್ಯಾಂಕ್ ಅಕೌಂಟ್ ಇನ್ನಿತರ ವಿವರಗಳು ನಮೂದಿಸಿದ ಕಾರಣ ಕಲ್ಲಡ್ಕ ಸಂಸ್ಥೆಗೆ ನೆರವಿನ ಹರಿವು ಬರತೊಡಗಿದೆ.
ಪ್ರತಿಭಟನೆ ನಡೆದ ಬೆನ್ನಲ್ಲೇ ಭಿಕ್ಷಾಂ ದೇಹಿ ಟ್ವಿಟ್ಟರಿನಲ್ಲಿ ಮೇಲಿಂದ ಮೇಲೆ ಕಾಣಿಸತೊಡಗಿದವು ಫೇಸ್ ಬುಕ್ ನಲ್ಲೂ ಕಾಣಿಸಿದೆ ಈ ಟ್ರೆಂಡ್ ರಾತ್ರಿಯಾಗುತ್ತಿದ್ದಂತೆ ಜನಪ್ರಿಯವಾಗಿತ್ತು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications