ಮಂಗಳೂರು; ಜಾಹೀರಾತು ಕ್ಷೇತ್ರದಲ್ಲೂ ಮಿಂಚು ಹರಿಸಿದ ಕಂಬಳ ಓಟಗಾರ ಶ್ರೀನಿವಾಸ ಗೌಡ
ಮಂಗಳೂರು, ಡಿಸೆಂಬರ್, 28: ಕಂಬಳದ ದಾಖಲೆಯ ಓಟಗಾರ ಮಿಜಾರು ಅಶ್ವಥಪುರ ಶ್ರೀನಿವಾಸ್ ಗೌಡ ಚಿನ್ನಾಭರಣಗಳ ಜಾಹೀರಾತುವಿನ ಮಾಡೆಲ್ ಆಗಿ ಮಿಂಚಿದ್ದಾರೆ. ಚಿನ್ನಾಭರಣ ಕಂಪನಿ ತುಳುನಾಡಿನ ಜಾನಪದೀಯ ಆಚರಣೆ ಕಂಬಳ ಓಟಗಾರ ಶ್ರೀನಿವಾಸ್ ಗೌಡನನ್ನು ತಮ್ಮ ಬ್ರಾಂಡ್ನ ರಾಯಭಾರಿ ಆಗಿ ಗುರುತಿಸಿದ್ದು, ಕರಾವಳಿಯೆಲ್ಲೆಡೆ ಕಂಪೆನಿಯ ನೂತನ ಪ್ರಯೋಗಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಹಸಿರು ಕಾನನದ ನಡುವೆ ಕಟ್ಟುಮಸ್ತಾದ ದೇಹ ಹೊಂದಿರುವ ಕಂಬಳ ಓಟಗಾರ ಶ್ರೀನಿವಾಸ ಗೌಡ ಮೈ ತುಂಬಾ ಚಿನ್ನಾಭರಣ ಧರಿಸಿ ಕಂಬಳ ಕೋಣವನ್ನು ಹಿಡಿದಿರುವ ಫೋಟೋ ಇದೀಗ ಕರಾವಳಿಯೆಲ್ಲೆಡೆ ಜಾಹೀರಾತು ಫ್ಲೆಕ್ಸ್ಗಳಲ್ಲಿ ರಾರಾಜಿಸುತ್ತಿದೆ. ಸ್ಥಳೀಯ ಪ್ರತಿಭೆಗೆ ಅವಕಾಶ ನೀಡುವುದರ ಜೊತೆಗೆ ಕಂಪೆನಿಯ ವಿನೂತನ ಪ್ರಚಾರದ ಶೈಲಿಗೆ ಜನರು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಫ್ಲೆಕ್ಸ್ನಲ್ಲಿ ನಗುಮುಖದ ಮೂಲಕ ಶ್ರೀನಿವಾಸ ಗೌಡ ಫೋಟೋಗೆ ಫೋಸ್ ನೀಡಿದ್ದಾರೆ. ಕೈಬೆರಳುಗಳ ತುಂಬಾ ವೈವಿಧ್ಯಮಯ ಉಂಗುರಗಳು, ಕೈಗೊಂದು ಕಡಗ, ಬ್ರಾಸ್ಲೇಟ್, ಪೆಂಡೆಂಟ್ ಸಹಿತ ಚಿನ್ನದ ಹಾರ ಧರಿಸಿ ಪುರುಷರೂ ಸ್ವರ್ಣಾಲಂಕಾರ ಹೇಗೆ ಮಾಡಿಕೊಳ್ಳಬಹುದು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ.
ಶ್ರೀನಿವಾಸ್ ಗೌಡರಿಗೆ ಸಾಥ್ ನೀಡಿದ ಕೋಣ "ಅಪ್ಪು"
ಶ್ರೀನಿವಾಸ ಗೌಡರಿಗೆ ಕಂಬಳದ ಅತೀ ವೇಗದ ಓಟದ ಕೋಣ "ಅಪ್ಪು" ಸಾಥ್ ನೀಡಿರುವುದು ಗಮನ ಸೆಳೆದಿದೆ. ಮಿಜಾರು ಪ್ರಸಾದ್ ನಿಲಯದ ಶಕ್ತಿ ಪ್ರಸಾದ್ ಶೆಟ್ಟಿಯವರ ಮಾಲಿಕತ್ವದ ಅಪ್ಪು ಕೋಣ ಈಗಾಗಲೇ ಸ್ಪರ್ಧೆಗಳಲ್ಲಿ ಹಲವು ಪದಕಗಳನ್ನು ಗೆದ್ದಿದೆ. ಈ ಕೋಣವನ್ನು ಓಡಿಸುವುದು ಕೂಡ ಶ್ರೀನಿವಾಸ್ ಗೌಡರೇ ಆಗಿದ್ದಾರೆ. ಹೀಗಾಗಿ ಕೋಣವೂ ತನ್ನ ಸಾರಥಿ ಜೊತೆ ಫೋಟೋದಲ್ಲಿ ಅದ್ಭುತವಾಗಿ ಕಾಣಿಸಿಕೊಂಡಿದೆ.

ತೆಲುಗು ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ಶ್ರೀನಿವಾಸ
ಕಂಬಳದಲ್ಲಿ ಅತೀ ವೇಗದ ಓಟಗಾರನಾಗಿ ಪ್ರಸಿದ್ಧಿ ಪಡೆದ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ, ದಾಖಲೆ ಸೃಷ್ಟಿಸುವ ಮುನ್ನವೇ ಭಾರತೀಯ ಚಿತ್ರರಂಗದ ಸೂಪರ್ ಹಿಟ್ ಸಿನಿಮಾ ಬಾಹುಬಲಿಯಲ್ಲಿ ಕೋಣ ಓಡಿಸುವ ಸಣ್ಣ ಪಾತ್ರದಲ್ಲಿ ಗುರುತಿಸಿಕೊಂಡಿದ್ದರು. ಇದೀಗ ಶೂಟಿಂಗ್ ಹಂತದಲ್ಲಿರುವ ಪಂಚಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ, ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಬಿರ್ದ್ದ ಕಂಬಳ ಚಿತ್ರದಲ್ಲೂ ಶ್ರೀನಿವಾಸ ಗೌಡ ಕಾಣಿಸಿಕೊಳ್ಳಲಿದ್ದಾರೆ. ಇದರ ನಡುವೆ ಈಗ ಮಾಡೆಲಿಂಗ್ ಕ್ಷೇತ್ರದಲ್ಲೂ ಅವರು ವೇಗವಾಗಿ ಬೆಳೆಯುತ್ತಿದ್ದಾರೆ. ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡಿದೇನೆ. ಆದ್ದರಿಂದ ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಯಿತು ಎಂದು ಹೇಳಿದರು.
ಆಭರಣ ಕಂಪನಿಯವರು ಹೇಳಿದ್ದೇನು?
ಇನ್ನು ಈ ಹೊಸ ಪ್ರಯೋಗದ ಬಗ್ಗೆ ಆಭರಣ ಕಂಪನಿಯ ಮಹೇಶ್ ಕಾಮತ್ ಮಾತನಾಡಿ, ನಮ್ಮ ಸಂಸ್ಥೆಯ ಜಾಹೀರಾತುಗಳಲ್ಲಿ ಸ್ಥಳೀಯ ಪ್ರತಿಭೆ, ಸ್ಥಳೀಯ ವಿಚಾರಣೆಗಳಿಗೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ. ಕರಾವಳಿಯ ಪ್ರತಿಭೆಗಳನ್ನು,ಇಲ್ಲಿನ ಸೊಬಗು ವೈಭವವನ್ನು ಎಲ್ಲೆಡೆ ಪರಿಚಯಿಸಬೇಕೆಂಬ ಉತ್ಸಾಹದಿಂದ ಈ ಕಾರ್ಯಕ್ಕೆ ಇಳಿದಿದ್ದೇವೆ. ಉಡುಪಿಯ ಶಂಕರಪುರ ಮಲ್ಲಿಗೆ, ಅಡಕೆ ಕೃಷಿಯ ರೈತ ಹೀಗೆ ಹತ್ತು ಹಲವು ಪರಿಕಲ್ಪನೆಗಳನ್ನು
ಪರಿಚಯಿಸಿದ್ದೇವೆ. ಮಾಡೆಲಿಂಗ್ ತಾರೆ ಕರಾವಳಿಯ ಸಾಧಕಿ ಸಿನಿ ಶೆಟ್ಟಿಯವರನ್ನೂ ಇದಕ್ಕೆ ಬಳಸಿ ಕೊಳ್ಳುತ್ತಿದ್ದೇವೆ. ಕರಾವಳಿಯ ಸಾಂಸ್ಕೃತಿಕ ವೈಭವ, ಪ್ರಾಕೃತಿಕ ಸೊಬಗು ಯಾವುದಕ್ಕೂ ಕಡಿಮೆಯಿಲ್ಲ ಎನ್ನುವುದನ್ನೂ ತೋರಿಸಿಕೊಡುವ ಪ್ರಯತ್ನವನ್ನು ಮಾಡುತ್ತಿದ್ದೇವೆ ಎಂದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications