97ನೇ ವಯಸ್ಸಿನಲ್ಲೂ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಮಂಗಳೂರಿನ ಕರೀಂ ಬ್ಯಾರಿ!
ಮಂಗಳೂರು, ಸೆಪ್ಟೆಂಬರ್, 20: ಕರೀಂ ಬ್ಯಾರಿ ಎಂಬ 97 ವರ್ಷದ ಅಜ್ಜ ತನ್ನ ಸಂಪಾದನೆಯಲ್ಲಿಯೇ ಜೀವನ ನಡೆಸುತ್ತಿದ್ದಾರೆ. ಇವರು ಅಡ್ಡೂರಿನ ಬಳಿ ಫಲ್ಗುಣಿ ನದಿಯಲ್ಲಿ ಅಂಬಿಗನಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ತನ್ನ 30ನೇ ವರ್ಷದಲ್ಲಿ ಈ ವೃತ್ತಿಯನ್ನು ಆರಂಭಿಸಿದ್ದರು. ಕಳೆದ 67 ವರ್ಷಗಳಿಂದ ಇದೇ ವೃತ್ತಿಯನ್ನು ಮುಂದುವರೆಸುತ್ತಾ ಬಂದಿದ್ದಾರೆ. ನೀರಿನ ಜೊತೆ ಪ್ರಾಣದ ಹಂಗು ತೊರೆದು ಇಂದಿಗೂ ಅಂಬಿಗನಾಗಿ ಕೆಲಸ ಮಾಡುತ್ತಿದ್ದಾರೆ.
ಅಡ್ಡೂರು ಹೊಳೆ ಬದಿಯ ಕಡವು ಪ್ರದೇಶದ ಎರಡು ಗ್ರಾಮಗಳ ಸಂಪರ್ಕದ ಬಗ್ಗೆ ಅತೀ ಹೆಚ್ಚಾಗಿ ಇವರು ತಿಳಿದುಕೊಂಡಿದ್ದಾರೆ. ಒಂದು ತೀರದಿಂದ ಮತ್ತೊಂದು ತೀರಕ್ಕೆ ಜನರನ್ನು ಸಾಗಿಸುವಾಗ ಹಳೇ ಕಾಲದ ನೆನಪನ್ನು ವಿವರಿಸುತ್ತಾ, ಜನರಿಗೂ ದೋಣಿ ಪ್ರಯಾಣ ಬೋರ್ ಆಗದಂತೆ ಕೊಂಡೊಯ್ಯುತ್ತಿದ್ದಾರೆ. ತುರ್ತು ಸಂದರ್ಭದಲ್ಲಿ ಮಳೆ, ಬಿಸಿಲು ಹಾಗೆಯೇ ರಾತ್ರಿ, ಹಗಲೆನ್ನದೇ ಕರೀಂ ಸೇವೆಯಲ್ಲಿ ಕಾರ್ಯನಿರತರಾಗಿರುತ್ತಿದ್ದರು. ಇವರ ಸೇವೆಗೆ ಜನರು ಇಂದಿಗೂ ಧನ್ಯವಾದಗಳನ್ನು ಅರ್ಪಿಸುತ್ತಲೇ ಇದ್ದಾರೆ.
ವಯಸ್ಸಾದರೂ ಸೇವೆಯ ಛಲ ಬಿಡದ ಕರೀಂ
ಜೀವನ ಶೈಲಿ, ಸಾಂಪ್ರದಾಯಿಕ ಆಹಾರ ಪದ್ಧತಿ ಇವೆಲ್ಲವೂ ಕರೀಂ ಅವರ ಆರೋಗ್ಯವನ್ನು ಇಂದಿಗೂ ಕಾಯ್ದುಕೊಂಡಿದೆ. ಈ ನಿಟ್ಟಿನಲ್ಲಿ ಗ್ರಾಮದ ಜನತೆಗೆ ಇಂದಿಗೂ ಇವರ ಸೇವೆಯನ್ನು ಭಯಸುತ್ತಲೇ ಇದ್ದಾರೆ. 97 ವರ್ಷ ಆದರೂ ಅಪಾಯದ ಮಟ್ಟದಲ್ಲಿ ತುಂಬಿ ತುಳುಕುತ್ತಿರುವ ನದಿಯಲ್ಲಿ ದೋಣಿ ನಾವಿಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗೆ ಕರೀಂ ಬ್ಯಾರಿ ಮಂಗಳೂರಿನ ಪೊಳಲಿ ಸಮೀಪದ ಅಡ್ಡೂರಿನ ಪಲ್ಗುಣಿ ನದಿಯಲ್ಲಿ ಜನರ ಸಂಪರ್ಕ ಸೇತುವೆಯಂತೆ ಜನರ ಸೇವೆ ಮಾಡುತ್ತಿದ್ದಾರೆ.

ಯುವಕರನ್ನೂ ನಾಚಿಸುವಂತಹ ಜೀವನೋತ್ಸಾಹವನ್ನು ಕರೀಂ ಬ್ಯಾರಿ ಹೊಂದಿದ್ದು, ನದಿ ನೀರಿನ ಜೊತೆಗೆ ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಇವರ ನಿಸ್ವಾರ್ಥ ಸೇವೆಗೆ ಜನರು ಮಾರುಹೋಗಿದ್ದಾರೆ. ತುರ್ತು ಸಂದರ್ಭ, ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲೂ ದೋಣಿ ಸೇವೆಯನ್ನು ನೀಡುತ್ತಲೇ ಬಂದಿದ್ದು, ಎಲ್ಲರ ಮೆಚ್ಚುಗೆಗೂ ಪಾತ್ರರಾಗಿದ್ದಾರೆ.

97ನೇ ವಯಸ್ಸಿನಲ್ಲಿಯೂ ನಿಸ್ವಾರ್ಥ ಸೇವೆ
ತಮ್ಮ ಉತ್ಸಾಹದ ಬಗ್ಗೆ ಕರೀಂ ಬ್ಯಾರಿ ಮಾತನಾಡಿದ್ದು, ನಾನು ದೋಣಿ ಆರಂಭಿಸುವ ಕಾಲದಲ್ಲಿ ಬಸ್ ವ್ಯವಸ್ಥೆ ಇರಲಿಲ್ಲ. ಅಂದಿನಿಂದ ಇಂದಿನವರೆಗೆ ದೋಣಿಯ ಅಂಬಿಗನಾಗಿ ಕೆಲಸ ಮಾಡುತ್ತಿದ್ದೇನೆ. ಹಣಕ್ಕಾಗಿ ಕೆಲಸ ಮಾಡುತ್ತಿಲ್ಲ, ದೇವರ ಸೇವೆ ಎಂದು ಭಾವಿಸಿ ಕೆಲಸ ಮಾಡುತ್ತಿದ್ದೇನೆ. ಮಕ್ಕಳು ಇದೆಲ್ಲ ಬೇಡ, ಸುಮ್ಮನೆ ಮನೆಯಲ್ಲಿಯೇ ಅರಮಾಗಿರಿ ಎಂದು ಹೇಳುತ್ತಾರೆ. ಆದರೆ ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳುವುದಕ್ಕೆ ನನ್ನಿಂದ ಸಾಧ್ಯವಿಲ್ಲ. ದೋಣಿಯಲ್ಲಿ ಕೆಲಸ ಮಾಡಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದು ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಪರಿಸರದ ಬಗ್ಗೆ ಅಪಾರ ಜ್ಞಾನ ಹೊಂದಿರುವ ಕರೀಂ ಬ್ಯಾರಿ, ದೋಣಿಯಲ್ಲಿ ಹೋಗುವವರಿಗೆ ಪ್ರಕೃತಿಯ ಬಗ್ಗೆ ಮಾರ್ಗದರ್ಶನ ನೀಡುತ್ತಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯ ನಂತರದ ಜೀವನ ಅನುಭವ ಹೊಂದಿರುವ ಕರೀಂ ಬ್ಯಾರಿ, ಹವಾಮಾನ ವೈಪರಿತ್ಯದ ಬಗ್ಗೆಯೂ ಸ್ವಂತ ಪಾಂಡಿತ್ಯವನ್ನು ಹೊಂದಿದ್ದಾರೆ. ಬೆಳಗ್ಗೆ ಹತ್ತು ಗಂಟೆಯಿಂದ ಸಂಜೆ ನಾಲ್ಕು ಗಂಟೆವರೆಗೂ ದೋಣಿ ನಡೆಸುತ್ತಾರೆ. ಮಲ್ಲೂರು- ಅಡ್ಡೂರು ಭಾಗದ ಜನರಿಗೆ ಸುಲಭ ಸಂಪರ್ಕ ಒದಗಿಸುತ್ತಾರೆ ಎಂದು ಸ್ಥಳೀಯರಾದ ಮೊಯಿದ್ದೀನ್ ಹಾಜಿ ಮಾಹಿತಿ ನೀಡಿದರು.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications