ಕುದ್ರೋಳಿ ಶಾರದಾ ಮಾತೆ ಶೋಭಾಯಾತ್ರೆ ಭಾರೀ ಜೋರು
ಮಂಗಳೂರು, ಅಕ್ಟೋಬರ್, 22 : ನವರಾತ್ರಿ ಮಹೋತ್ಸವದ ಶ್ರೀ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಅ. 23ರ ಶುಕ್ರವಾರದಂದು ಸಂಜೆ 4ಕ್ಕೆ ಆರಂಭವಾಗಲಿದೆ. ಆದರೆ ಇದರ ಉದ್ಘಾಟನೆಯನ್ನು ಯಾರು ಮಾಡುತ್ತಾರೆ ಎನ್ನುವುದು ಮಾತ್ರ ಇನ್ನೂ ನಿಗೂಢವಾಗಿದೆ.
ಮಾಜಿ ಕೇಂದ್ರ ಸಚಿವ ಹಾಗೂ ಶ್ರೀ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಮಾರ್ಗ ದರ್ಶನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮೆರವಣಿಗೆಯು ಶ್ರೀ ಕ್ಷೇತ್ರ- ಕಂಬಳರಸ್ತೆ-ಮಣ್ಣಗುಡ್ಡೆ-ಲೇಡಿಹಿಲ್ ಸರ್ಕಲ್- ಲಾಲ್ಬಾಗ್-ಪಿವಿಎಸ್ ಸರ್ಕಲ್-ಹಂಪನಕಟ್ಟೆ- ವಿ.ವಿ. ಕಾಲೇಜು-ಗಣಪತಿ ಹೈಸ್ಕೂಲ್ ರಸ್ತೆ- ರಥಬೀದಿ-ಚಿತ್ರಾ-ಅಳಕೆ ಹಾದು ಮತ್ತೆ ಕುದ್ರೋಳಿ ಕ್ಷೇತ್ರಕ್ಕೆ ಶನಿವಾರ ಮುಂಜಾನೆ ಬರಲಿದೆ.[ಶಾಸ್ತ್ರೋಕ್ತವಾಗಿ ನವರಾತ್ರಿ ಉತ್ಸವ ಆಚರಿಸುವ ಬಗೆ ಹೇಗೆ?]

ಶ್ರೀ ಮಹಾಗಣಪತಿ, ಆದಿಶಕ್ತಿ, ನವ ದುರ್ಗೆಯರು, ಶಾರದಾ ಮಾತೆಯ ವಿಗ್ರಹಗಳ ಸಹಿತವಾದ ಈ ವರ್ಣರಂಜಿತ ಬೃಹತ್ ದಸರಾ ಮೆರವಣಿಗೆ ಆಕರ್ಷಕ ವಿದ್ಯುದ್ದೀಪಾಲಂಕೃತ ಮಂಟಪ, ಟ್ಯಾಬ್ಲೋಗಳು, ಕೇರಳದ ಚೆಂಡೆ ವಾದ್ಯ, ಬೆಂಗಳೂರಿನ ವಾದ್ಯ ತಂಡ, ರಾಜ್ಯದ ವಿವಿಧೆಡೆಯ ಕಲಾವಿದರ ಜಾನಪದ-ಸಾಂಸ್ಕೃತಿಕ ಪ್ರದರ್ಶನ, ಮಹಾರಾಷ್ಟ್ರದ ಡೋಲು ನೃತ್ಯ, ಆಂಧ್ರಪ್ರದೇಶದ ಬಾಲಮುರಳಿಕೃಷ್ಣ ಕೋಲಾಟ, ಕಲ್ಲಡ್ಕದ ಶಿಲ್ಪಾ ಗೊಂಬೆ, ತೃಶ್ಶೂರ್ ನ ಬಣ್ಣದ ಕೊಡೆ, ಹುಲಿವೇಷಗಳು, ವಾದ್ಯವೃಂದ, ಕರಾವಳಿಯ ವಿವಿಧ ಪುಣ್ಯಕ್ಷೇತ್ರಗಳ ಸಹಕಾರದ ಟ್ಯಾಬ್ಲೋಗಳು, ದೇಶದ ಪರಂಪರೆಯ ಸ್ತಬ್ಧಚಿತ್ರಗಳನ್ನು ಹೊಂದಿರುತ್ತವೆ ಎಂದು ತಿಳಿಸಲಾಗಿದೆ.[ಅಂಬಾರಿ ಹೊರುವ ಅರ್ಜುನನ ತಾಲೀಮು ಹೇಗಿರುತ್ತೆ?]
ಅ. 13ರಂದು ನವದುರ್ಗೆಯರು ಹಾಗೂ ಶ್ರೀ ಶಾರದೆಯ ಪ್ರತಿಷ್ಠೆ ಸಹಿತ ಕುದ್ರೋಳಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ ಆರಂಭವಾಗಿತ್ತು. ನಿತ್ಯವೂ ಸಹಸ್ರಾರು ಜನ ನವದುರ್ಗೆಯರನ್ನು ನೋಡಿ ಕಣ್ತುಂಬಿಕೊಳ್ಳುತ್ತಿದ್ದಾರೆ. ಎಲ್ಲಿ ನೋಡಿದರೂ ಜನಸಾಗರವೇ ಕಾಣುತ್ತದೆ.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications