ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿಗೆ ಚಾಲನೆ: ಮೊದಲ ಪ್ರಯಾಣದಲ್ಲಿ ಬಿಜೆಪಿ ಮುಖಂಡರು
ಮಂಗಳೂರು, ಡಿಸೆಂಬರ್ 30: ಮಂಗಳೂರು- ಮಡಗಾಂವ್ ನಡುವಿನ ವಂದೇ ಭಾರತ್ ರೈಲಿಗೆ ನಗರದ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಾಲನೆ ದೊರಕಿತು. ಮೊದಲ ಪ್ರಯಾಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್ ಸೇರಿದಂತೆ ಬಿಜೆಪಿ ಮುಖಂಡರು, ವಿಶೇಷ ಅಹ್ವಾನಿತರು, ಶಾಲಾ ಮಕ್ಕಳು ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದ್ದಾರೆ.
ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ವರ್ಚುವಲ್ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು. ಚಾಲನೆ ದೊರಕಿದ ತಕ್ಷಣ ವಂದೇ ಭಾರತ್ ರೈಲು ಮಡ್ಗಾಂವ್ ನತ್ತ ಪ್ರಯಾಣ ಬೆಳೆಸಿತು. ಮಂಗಳೂರು - ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್, ಉಡುಪಿ, ಕಾರವಾರ ಆಗಿ ಮಡಗಾಂವ್ ನಲ್ಲಿ ನಿಲುಗಡೆಯಾಗಲಿದೆ.

ಹೈಫೈ ಲುಕ್ನಲ್ಲಿ ಗೋಚರಿಸುವ ಈ ರೈಲು ಒಳಭಾಗದಲ್ಲೂ ಅತ್ಯಾಧುನಿಕ ಸವಲತ್ತುಗಳನ್ನು ಹೊಂದಿದೆ. ಈ ರೈಲು ಗಂಟೆಗೆ 160 ಕಿ.ಮೀ.ನಷ್ಟು ವೇಗದಲ್ಲಿ ಸಂಚರಿಸುತ್ತದೆ. ಈ ಹಿಂದೆ ಸಾಮಾನ್ಯ ರೈಲು ಗೋವಾ ತಲುಪುಲು ಬೇಕಾಗಿದ್ದ 6-7ಗಂಟೆಯ ಅವಧಿ ಇದೀಗ ವಂದೇ ಭಾರತ್ ಮೂಲಕ ಕೇವಲ ನಾಲ್ಕುವರೇ ಗಂಟೆಗೆ ಇಳಿದಿದೆ.
ಈ ರೈಲು ಮಂಗಳವಾರ ಹೊರತುಪಡಿಸಿ ವಾರದ ಆರು ದಿನವೂ ಸಂಚರಿಸಲಿದೆ. ಸಾಮಾನ್ಯವಾಗಿ ಈ ರೈಲು ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ಆರಂಭಿಸಿ ಮಧ್ಯಾಹ್ನ 1.15ಕ್ಕೆ ಗೋವಾ ಮಡ್ಗಾಂವ್ ತಲುಪುತ್ತದೆ. ಮತ್ತೆ ಸಂಜೆ ಮಡಗಾಂವ್ ನಿಂದ 6.10 ಕ್ಕೆ ಹೊರಟು ರಾತ್ರಿ 10.45ಕ್ಕೆ ಮಂಗಳೂರಿಗೆ ವಾಪಾಸ್ ಆಗಲಿದೆ. ಈ ರೈಲು 8 ಬೋಗಿಗಳನ್ನ ಹೊಂದಿದ್ದು ಸಂಪೂರ್ಣ ಹವಾ ನಿಯಂತ್ರಿತ ವಾಗಿದೆ.

ಏರ್ ಲೈನ್ ಮಾದರಿ ಸೀಟುಗಳೊಂದಿಗೆ ಎಕ್ಸಿಕ್ಯುಟಿವ್ ಚೇರ್ ಗಳ ವ್ಯವಸ್ಥೆಗಳನ್ನು ಹೊಂದಿದೆ. ಆನ್ ಬೋರ್ಡ್ ಸಸ್ಯಾಹಾರಿ ಮತ್ತು ಮಾಂಸಹಾರಿ ಊಟದ ವ್ಯವಸ್ಥೆಯೂ ಇದೆ. ಆನ್ ಬೋರ್ಡ್ ವೈ ಫೈ ಮತ್ತು ಇನ್ಫೋಟೈನ್ ಮೆಂಟ್ ಸಿಸ್ಟಮ್ ಕೂಡ ಇದೆ. ಇದರೊಂದಿಗೆ ಸ್ವಯಂ ಚಾಲಿತ ಬಾಗಿಲುಗಳು, ಸ್ಮೋಕ್ ಅಲರ್ಟ್, ಸಿಸಿಟಿವಿ ಕ್ಯಾಮೆರಾಗಳು, ಸೆನ್ಸಾರ್ ಆಧಾರಿತ ವಾಶ್ ಬೇಸಿನ್ ಮುಂತಾದ ಸವಲತ್ತು ಹೊಂದಿದ್ದು. ಮಂಗಳೂರಿನಲ್ಲಿ ಕರ್ನಾಟಕದ ನಾಲ್ಕನೇ ವಂದೇ ಭಾರತ್ ರೈಲು ಸಂಚಾರ ಇದಾಗಿದೆ.

ಇನ್ನು ಮಂಗಳೂರಿನಿಂದ ಉತ್ತರ ಕನ್ನಡ ಜಿಲ್ಲೆಗೆ ಬಂದ ವಂದೇ ಭಾರತ್ ರೈಲಿಗೆ ಕಾರವಾರ ರೈಲು ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ಕೋರಲಾಗಿದೆ. ಪ್ರಾರಂಭದ ದಿನದಂದು ಈ ರೈಲಿನಲ್ಲಿ ಕಾರವಾರದಿಂದ ಮಡಂಗಾವ್ಗೆ ತೆರಳಲು ಮತ್ತು ವಾಪಸ್ ಕಾರವಾರಕ್ಕೆ ಆಗಮಿಸಲು 300ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ವಿತರಿಸಲಾಗಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications