ದೆಹಲಿಯಲ್ಲಿ ಮಂಗಳೂರು ಯುವಕನ ಅಪಹರಣ: 3 ಲಕ್ಷ ರೂ.ಗೆ ಬೇಡಿಕೆ
ಮಂಗಳೂರು, ಜೂನ್ 23: ಪುತ್ತೂರು ತಾಲೂಕಿನ ಹಳೆನೇರಂಕಿ ಎಂಬಲ್ಲಿಯ ಯುವಕನೋರ್ವನನ್ನು ಕೆಲ ದುಷ್ಕರ್ಮಿಗಳು ಅಪಹರಿಸಿದ್ದು ಮೂರೂ ಲಕ್ಷ ರೂ. ಬೇಡಿಕೆ ಇಟ್ಟಿದ್ದಾರೆ ಎಂಬ ವರದಿಯೊಂದು ಬಂದಿದೆ.
ಹಳೆನೇರಂಕಿ ಕೊರಗಪ್ಪ ಪೂಜಾರಿ ಎಂಬವರ ಪುತ್ರ ಕೃಷ್ಣ ಪ್ರಸಾದ್ (26) ತನ್ನ ನಾಲ್ವರು ಸ್ನೇಹಿತರೊಂದಿಗೆ ಇತ್ತೀಚಿಗೆ ದೆಹಲಿಗೆ ತೆರಳಿದ್ದು ಈ ಸಂದರ್ಭದಲ್ಲಿ ನಾಲ್ವರನ್ನೂ ಅಪಹರಿಸಿ ಹಣದ ಬೇಡಿಕೆ ಇಡಲಾಗಿದೆ ಎಂದು ಹೇಳಲಾಗುತ್ತಿದೆ. ಕೃಷ್ಣ ಪ್ರಸಾದ್ ನಾಪತ್ತೆಯಾದ ಬಗ್ಗೆ ಅವರ ತಂದೆ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪುತ್ರನನ್ನು ಬಿಡಿಸುವ ದೆಸೆಯಲ್ಲಿ ಕ್ರಮ ಕೈಗೊಳ್ಳುವಂತೆ ಸಚಿವ ಡಿ.ವಿ ಸದಾನಂದ ಗೌಡರಲ್ಲಿ ಮೊರೆ ಇಟ್ಟಿದ್ದಾರೆ.

ಕೃಷ್ಣ ಪ್ರಸಾದ್ ಜೊತೆ ಅಭಿಲಾಷ್, ಪ್ರಶಾಂತ್ ದೆಹಲಿಗೆ ತೆರಳಿದ್ದರು ಎಂದು ಹೇಳಲಾಗುತ್ತಿದೆ. ಕೃಷ್ಣ ಪ್ರಸಾದ್ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಎಂಜಿನಿಯರಿಂಗ್ ಮಾಡಿದ್ದೂ, ಕಳೆದ ಎರಡು ವರ್ಷಗಳಿಂದ ಬೆಂಗಳೂರಿನ ವಿಪ್ರೋ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾನೆ. ಹದಿನೈದು ದಿನಗಳ ಹಿಂದೆ ಊರಿಗೆ ಬಂದವನು ಜೂ. 18 ರಂದು ಬೆಂಗಳೂರಿಗೆ ಹಿಂದಿರುಗದ್ದ. ಅಲ್ಲಿಂದ ಜಿಮ್ ಪರಿಕರಗಳ ಖರೀದಿಗೆಂದು ತನ್ನ ಗೆಳೆಯರೊಂದಿಗೆ ದೆಹಲಿಗೆ ತೆರಳಿದ್ದ.
ಜೂ. 20 ರೆಂದು ಮನೆಗ ಕರೆ ಮಾಡಿ ದೆಹಲಿಗೆ ತಲುಪಿರುವ ಬಗ್ಗೆ ಮಾಹಿತಿ ನೀಡಿದ್ದ. ಬಳಿಕ ಮನೆಗೆ ಕರೆ ಮಾಡಿ ಇಲ್ಲಿ ನನನ್ನು ಯಾರೋ ಅಪಹರಿಸಿದ್ದಾರೆ. ನಮ್ಮಲ್ಲಿದ್ದ ಎಟಿಎಂ ಕಾರ್ಡ್ ಸೇರಿದಂತೆ ಎಲ್ಲ ದಾಖಲೆಗಳನ್ನೂ ಕಸಿದುಕೊಂಡಿದ್ದಾರೆ. 3 ಲಕ್ಷ ರೂ. ಬ್ಯಾಂಕ್ ಖಾತೆಯಲ್ಲಿ ಹಾಕುವಂತೆ ಮನೆಯವರಿಗೆ ತಿಳಿಸಲು ಹೇಳಿದ್ದಾರೆ. ನೀವು ಮೂರು ಲಕ್ಷ ರೂ. ಬ್ಯಾಂಕ್ ಗೆ ಹಾಕಿ ಇಲ್ಲದಿದ್ದರೆ ಇವರು ನಮ್ಮ ಪ್ರಾಣ ತೆಗೆಯುತ್ತಾರೆ ಎಂದು ಗೋಗರೆದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕೃಷ್ಣ ಪ್ರಸಾದ್ ನ ಹೆತ್ತರು ತಮ್ಮ ಪುತ್ರನನ್ನು ರಕ್ಷಿಸುವಂತೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಮೊರೆ ಹೋಗಿದ್ದಾರೆ. ಯುವಕರು ದೂರವಾಣಿ ಕರೆ ಮಾಡುತ್ತಿರುವುದು ಹರಿಯಾಣ ಮತ್ತು ದಿಲ್ಲಿ ಬಾರ್ಡರ್ ನಿಂದ ಎಂದು ಪತ್ತೆ ಹಚ್ಚಲಾಗಿದೆ. ಪೊಲೀಸರು ಪತ್ತೆ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications