'ಚಿನ್ನ'ಕ್ಕೆ ಕರಾಟೆ ಪಂಚ್ ನೀಡಿದ ಮಂಗಳೂರು ಮೇಯರ್ ಕವಿತಾ ಸನಿಲ್
ಮಂಗಳೂರು, ನವೆಂಬರ್ 6: ಕರಾಟೆ ಫೈಟ್ ರಿಂಗ್ ನಲ್ಲಿ ಮಂಗಳೂರು ಮೇಯರ್... ಕವಿತಾ ಸನಿಲ್ ಪಂಚ್ ಗೆ ಎದುರಾಳಿ ಚಿತ್... ಅಂಮತಿಮವಾಗಿ ಚಿನ್ನ ಗೆದ್ದು ನಗೆ ಬೀರಿದ ಮೇಯರ್ ಕವಿತಾ ಸನಿಲ್...
ಮುಖ್ಯಮಂತ್ರಿಗಳ ಜತೆ ಕರಾಟೆ ಆಟವಾಡಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಮಂಗಳೂರು ಮೇಯರ್ ಕವಿತಾ ಸನಿಲ್ ಭಾನುವಾರ ಸ್ವತಃ ಕರಾಟೆ ರಿಂಗ್ ಗೆ ಇಳಿದಿದ್ದರು. ಹಲವು ವರ್ಷಗಳ ಬಳಿಕ ಮತ್ತೆ ಕರಾಟೆ ಫೈಟ್ ಗೆ ಇಳಿದ ಕವಿತಾ ಸನಿಲ್ ಎದುರಾಳಿ ಸ್ಪರ್ಧಿಯನ್ನು ಮಣಿಸಿ ಪಾರಮ್ಯ ಮೆರೆದಿದ್ದಾರೆ.
ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ಇಂಡಿಯನ್ ಕರಾಟೆ ಚಾಂಪಿಯನ್ಶಿಪ್ 2017 ನಲ್ಲಿ ಮಂಗಳೂರು ಮೇಯರ್ ಕವಿತಾ ಸನಿಲ್ ಚಿನ್ನದ ಪದಕ ಗೆದ್ದು ಗೆಲುವಿನ ನಗೆ ಬೀರಿದ್ದಾರೆ.

ಫೈನಲ್ ಫೈಟ್ ನಲ್ಲಿ ಗೆಲುವು
ಫೈನಲ್ನಲ್ಲಿ ಕರಾಟೆ ಪಟು ನಿಶಾ ನಾಯಕ್ ವಿರುದ್ಧ ಸೆಣೆಸಿದ ಕವಿತಾ ಸನಿಲ್ 7-3 ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿದರು.

ತೀವ್ರ ಪೈಪೋಟಿಯ ಪಂದ್ಯ
ಆರಂಭದಲ್ಲಿ ನಿಶಾ ನಾಯಕ್ ತೀವ್ರ ಪೈಪೋಟಿ ಒಡ್ಡಿ ಮೊದಲ ರೌಂಡ್ ನಲ್ಲಿ 3-3 ಅಂಕಗಳಿಂದ ಸಮಬಲ ಸಾಧಿಸಿದರು. ಅಂತಿಮ ರೌಂಡ್ ನಲ್ಲಿ ತನ್ನ ಅನುಭವದ ಚಾಕಚಕ್ಯತೆ ಪ್ರದರ್ಶಿಸಿದ ಕವಿತಾ ಸನಿಲ್ ಜಯಗಳಿಸಿದರು.

ಚಿನ್ನಗೆದ್ದ ಮೇಯರ್
ಈ ಸ್ಪರ್ಧೆಯಲ್ಲಿ ಕವಿತಾ ಸನಿಲ್ ಚಿನ್ನ ಗೆದ್ದರೆ ನಿಶಾ ನಾಯಕ್ ಬೆಳ್ಳಿಗೆ ತೃಪ್ತಿಪಡಬೇಕಾಯಿತು. ಪೃಥ್ವಿ ಹಾಗು ಕಾವ್ಯ ಕಂಚಿನ ಪದಕ ಗೆದ್ದರು.

ಏಕಪಕ್ಷೀಯ ಸೆಮಿ ಫೈನಲ್
ಫೈನಲ್ ಗೂ ಮೊದಲು ನಡೆದ ಸೆಮಿಫೈನಲ್ನಲ್ಲಿ ಕವಿತಾ ಸನಿಲ್ ಎದುರಾಳಿ ಕಾವ್ಯ ಅವರನ್ನು ಎದುರಿಸಿ 8-0 ಅಂಕಗಳಿಂದ ಜಯಗಳಿಸಿದರು. ಶಕ್ತಿಶಾಲಿ ಪಂಚ್ ಮೂಲಕ ಎದುರಾಳಿ ವಿರುದ್ಧ ಆರಂಭದಿಂದಲೇ ಪ್ರಹಾರ ನಡೆಸಿದ ಸನಿಲ್ ಎದುರಾಳಿಗೆ ಒಂದೇ ಒಂದು ಅಂಕವನ್ನೂ ಬಿಟ್ಟುಕೊಡಲಿಲ್ಲ.

ಸತತ 8 ವರ್ಷದ ರಾಷ್ಟ್ರೀಯ ಚಾಂಪಿಯನ್
65 ಕೆ.ಜಿ.ಗಿಂತ ಮೇಲ್ಪಟ್ಟ ತೂಕದ ಬ್ಲ್ಯಾಕ್ಬೆಲ್ಟ್ ವಿಭಾಗದಲ್ಲಿ ಸ್ಪರ್ಧಿಸಿದ ಕವಿತಾ ಸನಿಲ್ ಮೂರು ಬಾರಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಪದಕ ಪಡೆದವರು. 1996ರಿಂದ 2008ರವರೆಗೆ ಸತತ ರಾಷ್ಟ್ರೀಯ ಚಾಂಪಿಯನ್ ಆಗಿದ್ದ ಅವರು 9 ವರ್ಷದ ಬಳಿಕ ಫೈಟ್ ರಿಂಗ್ ಗೆ ಇಳಿದಿದ್ದರು.

ಎರಡು ತಿಂಗಳ ಅಭ್ಯಾಸ
ಹುಟ್ಟೂರಿನಲ್ಲಿ ರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ ನಡೆದಿದ್ದ ಹಿನ್ನೆಲೆಯಲ್ಲಿ ನಗರದ ಮೇಯರ್ ಆಗಿ ಕಾರ್ಯಭಾರಗಳ ಒತ್ತಡದ ನಡುವೆಯೂ ಸತತ ಎರಡು ತಿಂಗಳಿಂದ ಅಭ್ಯಾಸ ನಡೆಸಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications