ಮಂಗಳೂರು: ಹಜ್ ಯಾತ್ರಿಗಳ ಲಸಿಕಾ ಶಿಬಿರಕ್ಕೆ ಚಾಲನೆ
ಮಂಗಳೂರು, ಜುಲೈ 4: ಹಜ್ ಯಾತ್ರೆಗೆ ತೆರಳುವ ಭಾಗ್ಯ ಎಲ್ಲರಿಗೂ ಲಭಿಸುವುದಿಲ್ಲ. ಶ್ರೀಮಂತನಿಗೆ ಹೋಗುವ ಅವಸರ ಲಭಿಸದೇ ಇರಬಹುದು. ಹಾಗೂ ಅತೀ ಬಡವನಿಗೆ ಪವಿತ್ರ ಕಅಬಾ ಸಂದರ್ಶಿಸುವ ಭಾಗ್ಯ ಲಭಿಸಿದ ಉದಾಹರಣೆಗಳು ಬಹಳಷ್ಟಿವೆ. ಹಜ್'ಗೆ ತೆರಳುವವರು ನಮ್ಮ ನಾಡಿನ ಒಳಿತಿಗಾಗಿ ದುಆ ಮಾಡಬೇಕು ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಹೇಳಿದರು.
ಅವರು ಮಂಗಳವಾರ ಮಂಗಳೂರು ಕೊಡಿಯಾಲ್ ಬೈಲ್ ಯೇನಪೋಯ ಆಸ್ಪತ್ರೆಯಲ್ಲಿ ಸರಕಾರದ ಹಜ್ ಸಮಿತಿ ಮೂಲಕ ತೆರಳುವ ಹಜ್ಜಾಜ್ ಗಳಿಗೆ ನೀಡಲಾಗುವ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ರಾಜ್ಯದಿಂದ ಹಜ್'ಗೆ ತೆರಳುತ್ತಿರುವ ಎಲ್ಲಾ ಹಜ್ಜಾಜ್'ಗಳ ಸುಗಮ ಯಾತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಸಚಿವರಾದ ರೋಶನ್ ಬೇಗ್ ನೇತೃತ್ವದಲ್ಲಿ ರಾಜ್ಯ ಸರಕಾರ ಸಕಲ ವ್ಯವಸ್ಥೆಯನ್ನು ಕಲ್ಪಿಸಿದೆ. ಕೇಂದ್ರ ಹಾಗೂ ರಾಜ್ಯ ಹಜ್ ಸಮಿತಿ ಸುಸೂತ್ರವಾಗಿ ಕೆಲಸ ಮಾಡುತ್ತಿದೆ. ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ ರಾಜ್ಯ ಸರಕಾರ ಜಾಗ ಗುರುತಿಸಿದ್ದು, ಅನುದಾನ ಬಿಡುಗಡೆಗೊಳಿಸಿದೆ ಎಂದು ಸಚಿವ ಯು.ಟಿ.ಖಾದರ್ ಹೇಳಿದರು.

ಮಂಗಳೂರು ಹಜ್ ನಿರ್ವಹಣಾ ಸಮಿತಿ ಅಧ್ಯಕ್ಷರಾದ ಯೇನಪೋಯ ಮಹಮ್ಮದ್ ಕುಂಞಿ ಅಧ್ಯಕ್ಷತೆ ವಹಿಸಿದರು. ಮಾಣಿ ದಾರುಲ್ ಇರ್ಶಾದ್ ಎಜುಕೇಶನಲ್ ಸೆಂಟರ್ ಮುಖ್ಯಸ್ಥರಾದ ಮಚ್ಚಂಪಾಡಿ ಅಬ್ದುಲ್ ಹಮೀದ್ ಮುಸ್ಲಿಯಾರ್ ದುಆ ನೆರವೇರಿಸಿದರು.

ರಾಜ್ಯ ಹಜ್ ಸಮಿತಿ ಕಾರ್ಯನಿರ್ವಾಹಕರಾದ ಸರ್ಫರಾಝ್ ಖಾನ್ ಮಾತನಾಡಿ ಇಂದು ದ.ಕ.ಜಿಲ್ಲೆಯ 565 ಹಜ್ಜಾಜ್ ಗಳಿಗೆ ರೋಗ ತಡೆಗಟ್ಟುವ ಹಾಗೂ ಪೋಲಿಯೋ ಲಸಿಕೆ ನೀಡಲಾಗುತ್ತದೆ. ಜುಲೈ 24, 25 ರಂದು ಮಧ್ಯಾಹ್ನ 1 ಗಂಟೆ ಹಾಗೂ ಸಂಜೆ 4.10ಕ್ಕೆ, ಜುಲೈ 25ರಂದು ಮಧ್ಯಾಹ್ನ 1 ಗಂಟೆಗೆ ಹೀಗೇ ಒಟ್ಟು 5 ವಿಮಾನಗಳು ಮಂಗಳೂರು ವಿಮಾನ ನಿಲ್ದಾಣದಿಂದ ಹಜ್'ಗೆ ಹೊರಡಲಿದೆ. ಬಜ್ಪೆ ಅನ್ಸಾರಿಯಾ ಸ್ಕೂಲ್'ನಲ್ಲಿ ಈ ಬಾರಿಯ ಮಂಗಳೂರು ಹಜ್ ಕ್ಯಾಂಪ್ ನಡೆಯಲಿದೆ ಎಂದು ಮಾಹಿತಿ ನೀಡಿದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications