ಕ್ಯಾನ್ಸರ್ ರೋಗಿಗಳಿಗಾಗಿ ಕೂದಲನ್ನೇ ದಾನ ಮಾಡಿದ ಮಂಗಳೂರಿನ ಮಾಡೆಲ್
Recommended Video

ಮಂಗಳೂರು, ಅಕ್ಟೋಬರ್ 22: ರಂಗುರಂಗಿನ ಸ್ಪಾಟ್ ಲೈಟ್ ನಡಿ ಸಾವಿರಾರು ಜನರ ಎದುರು ಆಕರ್ಷಕ ರಾಂಪ್ ಮೇಲೆ ನಡೆದು ಮಿಂಚಬೇಕೆಂಬುದು ಹೆಚ್ಚಿನ ಯುವ ಮನಸ್ಸುಗಳ ಮಿಡಿತ.
ಅಷ್ಟೇ ಏಕೆ, ಮಾಡೆಲಿಂಗ್ ಕ್ಷೇತ್ರದಲ್ಲಿ ಮಿಂಚಿ ಹೆಸರು ಗಳಿಸಬೇಕೆಂದು ಅದೆಷ್ಟೋ ಯುವಕ-ಯುವತಿಯರು ಕನಸು ಸಹ ಕಂಡಿರುತ್ತಾರೆ. ಹಾಗೆಯೇ ಅದೆಷ್ಟೋ ಚೆಲುವೆಯರು ಮಾಡೆಲಿಂಗ್ ಕ್ಷೇತ್ರದಲ್ಲಿ ಮಿಂಚಿ ನೇರ ಸಿನಿ ಲೋಕವನ್ನು ಪ್ರವೇಶಿಸಿದ್ದಾರೆ.
ಆದರೆ ಇಲ್ಲಿ ನಾವು ಹೇಳಲು ಹೊರಟಿರುವ ಮಾಡೆಲ್ ಇವರೆಲ್ಲರಿಗಿಂತ ಸ್ವಲ್ಪ ಭಿನ್ನವಾಗಿದ್ದಾರೆ. ಹೌದು, ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ಮಂಗಳೂರಿನ ಚೆಲುವೆಯೊಬ್ಬರು ಕ್ಯಾನ್ಸರ್ ರೋಗಿಗಳಿಗಾಗಿ ತಮ್ಮ ಕೂದಲನ್ನೇ ದಾನ ಮಾಡಿದ್ದಾರೆ.
ಆ ಚೆಲುವೆಯ ಹೆಸರು ವಸುದಾ ರಾವ್. ಮುರುಡೇಶ್ವರದ ತಿಲಕ್ ರಾವ್ ಮತ್ತು ನಮ್ರತಾ ರಾವ್ ದಂಪತಿಗಳ ಮಗಳು. ಹುಟ್ಟಿ ಬೆಳೆದಿದ್ದು ಮಂಗಳೂರಿನಲ್ಲಿ. ಮಾಡೆಲಿಂಗ್ ಕ್ಷೇತ್ರದಲ್ಲಿ ಮಿಂಚುತ್ತಿದ್ದ ಈ ಸುಂದರಿ ಈಗ ಕ್ಯಾನ್ಸರ್ ರೋಗಿಗಳಿಗೆ ತಮ್ಮ ಕೂದಲನ್ನು ದಾನ ಮಾಡುವ ಮೂಲಕ ಎಲ್ಲರಿಗಿಂತ ತಾನು ಭಿನ್ನ ಎಂದು ಸಾಬೀತುಪಡಿಸಿದ್ದಾರೆ. ಮುಂದೆ ಓದಿ..

15 ಇಂಚಿನ ಕೂದಲು
ತಮ್ಮ15 ಇಂಚಿನ ಕೂದಲನ್ನು ಬ್ಲಿಸ್ ಹೇರ್ ಸೆಲೂನ್ ಗೆ ದಾನ ಮಾಡುವ ಮೂಲಕ ಕೇಶ ಮುಂಡನ ಮಾಡಿಸಿಕೊಂಡು ಇತರ ಚೆಲುವೆಯರಿಗೆ ಮಾದರಿಯಾಗಿ ಬೆಳೆದು ನಿಂತಿದ್ದಾರೆ.

ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ
ಮಾಡೆಲಿಂಗ್ ನಲ್ಲಿ ಮಿಂಚುತ್ತಿದ್ದ ಈ ಯುವತಿ ಈ ರೀತಿಯ ನಿರ್ಧಾರ ಕೈಗೊಂಡ ಬಗ್ಗೆ ನಂಬಲು ತುಸು ಕಷ್ಟವೆನಿಸಿದರೂ ನಂಬಲೇಬೇಕು. ಯಾಕೆಂದರೆ ಇತ್ತೀಚೆಗೆ ಬ್ಲಿಸ್ ಹೇರ್ ಸೆಲೂನ್ ಆಯೋಜಿಸಿದ ಲ್ಯಾಕ್ಸ್ ಆಫ್ ಲವ್ ಅಭಿಯಾನದಡಿ ಕ್ಯಾನ್ಸರ್ ರೋಗಿಗಳಿಗೆ ಹೆಚ್ಚಿನ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಕೇಶ ಮುಂಡನ ಮಾಡಿಸಿಕೊಂಡಿದ್ದಾರೆ.

ಸ್ವಯಂ ಪ್ರೇರಿತರಾಗಿಯೇ ದಾನ
ಇಲ್ಲಿ ಹೇಳಲೇಬೇಕಾದ ಇನ್ನೊಂದು ಸಂಗತಿ ಇದೆ. ಅದೇನೆಂದರೆ ಯಾರ ಮಾತನ್ನು ಕೇಳದೆ, ಮುಲಾಜಿಗೆ ಒಳಗಾಗದೆ ಸ್ವಯಂ ಪ್ರೇರಿತರಾಗಿಯೇ ವಸುದಾ ತಮ್ಮ ಕೂದಲನ್ನು ದಾನ ಮಾಡಿದ್ದಾರೆ. ಅವರ ಈ ನಡೆ ಈಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಮಿಸ್ ಫೋಟೊ ಜೆನಿಕ್
ವಸುದಾ ರಾವ್ ಅವರಿಗೆ ಮಾಡೆಲಿಂಗ್ ಕ್ಷೇತ್ರದಲ್ಲಿ ಮಿಂಚಬೇಕೆಂದು ಬಾಲ್ಯದಲ್ಲಿಯೇ ಕನಸು ಕಂಡಿದ್ದರು. ಈ ಹಿನ್ನೆಲೆಯಲ್ಲಿ ಬಾಲ್ಯದ ಕನಸಿನಂತೆ ಅವರು ಗ್ಲಾಮರ್ ಲೋಕಕ್ಕೆ ಕಾಲಿಟ್ಟರು . 2018ರ ಮಿಸ್ ಮಂಗಳೂರು ಸ್ಪರ್ಧೆಯಲ್ಲಿ ವಸುದಾ ರಾವ್ ಮಿಸ್ ಫೋಟೊ ಜೆನಿಕ್ ಮತ್ತು ಫಸ್ಟ್ ರನ್ನರ್ ಆಪ್ ಆಗಿ ಹೊರಹೊಮ್ಮಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications