ಮಂಗಳೂರು - ತುಂಬಿದ ತುಂಬೆ, ತುಂಬದ ರೈತರ ತುತ್ತಿನ ಚೀಲ
ಮಂಗಳೂರಿನ ತುಂಬೆ ಅಣೆಕಟ್ಟು ನಿರ್ಮಾಣದಿಂದ ಜಾಗ ಕಳೆದುಕೊಂಡ ರೈತರಿಗೆ ಸರಕಾರ ಇಲ್ಲೀವರೆಗೆ ಬಿಡಿಗಾಸು ಪರಿಹಾರ ನೀಡಿಲ್ಲ. ಡ್ಯಾಂ ನಿರ್ಮಾಣವಾಗಿ ನೀರು ತುಂಬಿದರೂ ರೈತರ ಕಿಸೆಗೆ ಮಾತ್ರ ಪೈಸೆ ಹಣವೂ ಬಂದು ಸೇರಿಲ್ಲ.
ಮಂಗಳೂರು, ಫೆಬ್ರವರಿ 22: ಮಂಗಳೂರಿನ ತುಂಬೆ ಅಣೆಕಟ್ಟು ನಿರ್ಮಾಣದಿಂದ ಜಾಗ ಕಳೆದುಕೊಂಡ ರೈತರಿಗೆ ಸರಕಾರ ಇಲ್ಲೀವರೆಗೆ ಬಿಡಿಗಾಸು ಪರಿಹಾರ ನೀಡಿಲ್ಲ. ಡ್ಯಾಂ ನಿರ್ಮಾಣವಾಗಿ ನೀರು ತುಂಬಿದರೂ ರೈತರ ಕಿಸೆಗೆ ಮಾತ್ರ ಪೈಸೆ ಹಣವೂ ಸೇರಿಲ್ಲ.
ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ನೇತ್ರಾವತಿಗೆ ತುಂಬೆಯಲ್ಲಿ ವರ್ಷಗಳ ಹಿಂದೆ 11 ಮೀ. ಎತ್ತರದ ನೂತನ ಡ್ಯಾಂ ನಿರ್ಮಿಸಲಾಗಿತ್ತು. ಮಂಗಳೂರು ನಗರಕ್ಕೆ ನೀರು ಪೂರೈಸಲು ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಇದೀಗ ಡ್ಯಾಂ ನಿರ್ಮಾಣ ಪೂರ್ಣಗೊಂಡು, ಅಣೆಕಟ್ಟು ತುಂಬಾ ನೀರು ನಿಂತಿದೆ. ಆದರೆ ಮುಳುಗಡೆಯಾದ ಪ್ರದೇಶದ ರೈತರಿಗೆ ಭೂ ಪರಿಹಾರ ಮಾತ್ರ ಮರೀಚಿಕೆಯಾಗಿದೆ.[ಪಿಣರಾಯಿ ಆಗಮನದಂದೇ ದಕ್ಷಿಣ ಕನ್ನಡ ಜಿಲ್ಲಾ ಬಂದ್ - ಸಂಘ ಪರಿವಾರ]

ಆರಂಭದಲ್ಲಿ ಸರ್ಕಾರವೇನೋ ಕೋಟಿ ಕೋಟಿ ರೂಪಾಯಿಗಳ ಪರಿಹಾರ ನೀಡುತ್ತೇವೆ ಎಂದು ಹೇಳಿದರೂ ಈವರೆಗೆ ಇಲ್ಲಿನ ರೈತರ ಕೈಗೆ ಪರಿಹಾರ ಸಿಕ್ಕಿಲ್ಲ. ಮುಳುಗಡೆಯಾದ ಭೂಮಿಗೆ ಸೂಕ್ತ ಪರಿಹಾರ ನೀಡುವಂತೆ ಇಲ್ಲಿನ ಜನಪ್ರತಿನಿಧಿಗಳು ಒತ್ತಾಯನೂ ಮಾಡುತ್ತಿಲ್ಲ. ಈ ಕುರಿತು ಮುತುವರ್ಜಿ ವಹಿಸಲು ಅಧಿಕಾರಿಗಳಿಗೂ ಮನಸ್ಸಿಲ್ಲ.
ಈ ಹಿಂದೆ ತುಂಬೆ ಡ್ಯಾಂ ಸಂತ್ರಸ್ತರ ಹೋರಾಟ ಸಮಿತಿ, ರೈತ ಸಂಘ ಜಂಟಿಯಾಗಿ ಪರಿಹಾರಕ್ಕೆ ಮನವಿ ಸಲ್ಲಿಸಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿತ್ತು. ಆಗ ಕೋರ್ಟ್ ಮ್ಯಾಂಡಮಸ್ ಆಕ್ಟ್ ಮೂಲಕ ಬೆಳೆ ಪರಿಹಾರ ಸಹಿತ ಭೂಸ್ವಾಧೀನ ಮಾಡಿ ಒಂದು ತಿಂಗಳೊಳಗೆ ವರದಿ ನೀಡುವಂತೆ ಜಿಲ್ಲಾಡಳಿತ ಮತ್ತು ನಗರ ಪಾಲಿಕೆಗೆ ಸೂಚನೆ ನೀಡಿತ್ತು. ಆದರೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಇನ್ನು ಕಾರ್ಯಪ್ರವೃತ್ತವಾಗಿಲ್ಲ. ಹೀಗಾಗಿ ಹೋರಾಟಗಾರರು ನ್ಯಾಯಾಂಗ ನಿಂದನೆ ಹೆಸರಿನಲ್ಲಿ ಜಿಲ್ಲಾಡಳಿತದ ವಿರುದ್ಧ ಹೈಕೋರ್ಟ್ನಲ್ಲಿ ದಾವೆ ಹೂಡಲು ಮುಂದಾಗಿದ್ದಾರೆ.[ಮಂಗಳೂರು: ಅತ್ಯಾಚಾರ ಮಾಡಲು ಮೇಲೆರಗಿದ ಕಾಮುಕನಿಗೆ ಮಹಿಳೆ ಮಾಡಿದ್ದೇನು?]
ಈ ಹಿಂದೆ ಎಂಆರ್ಪಿಎಲ್, ಎಎಂಆರ್ ಸರಪಾಡಿ ಅಣೆಕಟ್ಟು, ನಂದಿಕೂರು ಭೂಸ್ವಾಧೀನ ಮಾಡಿದ ವೇಳೆ
ಭೂಮಿ ಕಳೆದುಕೊಂಡ ಭೂ ಮಾಲೀಕರಿಗೆ ಏಕ ತಿಯ ಪರಿಹಾರ ನೀಡಲಾಗಿತ್ತು. ಆದರೆ ತುಂಬೆ ಡ್ಯಾಂ ಪ್ರಕರಣದಲ್ಲಿ ತಾರತಮ್ಯದ ನೆಲ ಬಾಡಿಗೆ ರೀತಿಯ ಪರಿಹಾರ ಹಣವನ್ನು ನಿಗದಿಪಡಿಸಲಾಗಿದೆ. ಇದು ಕೂಡಾ ಇನ್ನೂ ರೈತರ ಕೈ ಸೇರಿಲ್ಲ.
ಇದರಿಂದ ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು, ಪಾಣೆ ಮಂಗಳೂರು, ನರಿಕೊಂಬು, ಬಿ.ಮೂಡ, ಕಳ್ಳಿಗೆ ಗ್ರಾಮದಲ್ಲಿ ನೇತ್ರಾವತಿ ನದಿ ಇಕ್ಕೆಲದ ಬರುವ ಜಮೀನುಗಳು ಮುಳುಗಡೆಯಾಗಿದ್ದೆ. ಹೀಗಾಗಿ ಕೃಷಿಯನ್ನೇ ನಂಬಿ ಬದುಕುವ ರೈತರು ಒಂದೇ ಯೋಜನೆಗೆ ಭೂಮಿ ಕಳೆದುಕೊಂಡು ಕಣ್ಣೀರಿಡುವಂತಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications