ಮಂಗಳೂರಿನಲ್ಲಿ ಗ್ಯಾಂಗ್ ವಾರ್, ಕುಖ್ಯಾತ ರೌಡಿ ಇಲ್ಯಾಸ್ ಹತ್ಯೆ
ಮಂಗಳೂರು, ಜನವರಿ 13: ಉಳ್ಳಾಲದ ಟಾರ್ಗೆಟ್ ಗ್ರೂಪ್ ನ ನಟೋರಿಯಸ್ ರೌಡಿಯಾಗಿದ್ದ ಇಲ್ಯಾಸ್ ನನ್ನು ಹಾಡಹಗಲೇ ಕೊಲೆ ಮಾಡಲಾಗಿದೆ. ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಚೂರಿಯಿಂದ ಇರಿದು ಇಲ್ಯಾಸ್ ನನ್ನು ಕೊಲೆ ಮಾಡಲಾಗಿದೆ.
ಕೊಲೆ ಯತ್ನ ಪ್ರಕರಣದಲ್ಲಿ ರೌಡಿ ಇಲ್ಯಾಸ್ (31) ನಿನ್ನೆಯಷ್ಟೇ ಬೇಲ್ ಪಡೆದುಕೊಂಡು ಜೈಲಿನಿಂದ ಹೊರ ಬಂದಿದ್ದ. ಇಂದು ಮುಂಜಾನೆ ಇಲ್ಯಾಸ್ ಮಲಗಿದ್ದ ಜಾಗಕ್ಕೆ ನುಗ್ಗಿದ ಇಬ್ಬರು ಆಗಂತುಕರು ಚೂರಿಯಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಮಂಗಳೂರಿನ ಜಪ್ಪಿನಮೊಗರು ಎಂಬಲ್ಲಿನ ಕುದ್ಪಾಡಿಯಲ್ಲಿ ಈ ಕೊಲೆ ನಡೆದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಇಲ್ಯಾಸ್ ಉಳ್ಳಾಲದ ಯುವ ಕಾಂಗ್ರೆಸ್ ಮುಖಂಡನೂ ಆಗಿದ್ದ ಎಂದು ತಿಳಿದು ಬಂದಿದೆ.












Click it and Unblock the Notifications