ಪ್ರಧಾನಿ ಮೋದಿ ಬೆಂಗಾವಲಿನಲ್ಲಿ ಮಂಗಳೂರು ಮೂಲದ ಅಧಿಕಾರಿ
ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಯಾಗಿರುವ ಕಾರ್ತಿಕ್ ಕಶ್ಯಪ್ ಅವರು 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರಿಗೆ ಭದ್ರತಾ ಕರ್ತವ್ಯದಲ್ಲಿದ್ದರು.
ಮಂಗಳೂರು, ಜನವರಿ 28: ದೇಶದ ಅಗ್ರಗಣ್ಯ ನಾಯಕ ಪ್ರಧಾನಿ ನರೇಂದ್ರ ಮೋದಿಯವರ ಭದ್ರತೆಯಲ್ಲಿ ಮಂಗಳೂರಿನ ಮಾಜಿ ಮೇಯರ್ ಒಬ್ಬರ ಮಗ ಬೆಂಗಾವಲು ಅಧಿಕಾರಿಯಾಗಿ ಗಮನಸೆಳೆದಿದ್ದಾರೆ. ಪ್ರಧಾನಿಗಳ ಬೆಂಗಾವಲು ಅಧಿಕಾರಿಯಾಗಿ ಮಂಗಳೂರಿನ ಕಾರ್ತಿಕ್ ಕಶ್ಯಪ್ ಕರ್ತವ್ಯ ನಿರ್ವಹಿಸಿದ್ದಾರೆ.
ಕೇಂದ್ರ ಗೃಹ ಸಚಿವಾಲಯದ ಅಧಿಕಾರಿಯಾಗಿರುವ ಕಾರ್ತಿಕ್ ಕಶ್ಯಪ್ ಅವರು 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರಿಗೆ ಭದ್ರತಾ ಕರ್ತವ್ಯದಲ್ಲಿದ್ದರು. ಕಪ್ಪು ಕನ್ನಡಕ, ಟೈ, ಕೋಟ್ಗಳನ್ನು ಧರಿಸಿ ಟಿಪ್ ಟಾಪ್ ಆಗಿ ವೇದಿಕೆಯಲ್ಲಿದ್ದ ಇವರು ಮಂಗಳೂರು ಮಾಜಿ ಶಂಕರ್ ಭಟ್ ಪುತ್ರ. ಇವರು ನಗರದ ಚಿನ್ಮಯ್ ಶಾಲೆ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಶಿಕ್ಷಣ ಪೂರೈಸಿ ನಿಟ್ಟೆ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದರು. ಬಳಿಕ ಯುಪಿಎಸ್ಸಿ ತರಬೇತಿಗೆ ದಿಲ್ಲಿಗೆ ತೆರಳಿದ್ದರು.

ತಮ್ಮ 23ನೇ ವಯಸ್ಸಿಗೆ ಯುಪಿಎಸ್ಸಿ ಪರೀಕ್ಷೆಯನ್ನು ಮೊದಲೇ ಪ್ರಯತ್ನದಲ್ಲೇ ಯಶಸ್ಸು ಕಂಡವರು. ಐಎಎಸ್ ಪದವಿ ಪಡೆಯುವ ಅವಕಾಶವಿದ್ದರೂ ಐಪಿಎಸ್ನಲ್ಲಿ ಸೇವೆಗೆ ಸೇರಿದರು. ಐಪಿಎಸ್ ಅವಧಿಯಲ್ಲಿ ಬೆಸ್ಟ್ ಸ್ಟೂಡೆಂಟ್ ಪ್ರಶಸ್ತಿ ಪಡೆದಿದ್ದರು. ಬಳಿಕ ಐಪಿಎಸ್ ನಲ್ಲಿ ಗುಜರಾತ್ ಕೆಡರ್ ತೆಗೆದುಕೊಂಡು ಅಲ್ಲಿ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು. ಯುಪಿಎಸ್ಸಿನಲ್ಲಿ ತಮ್ಮ ಬ್ಯಾಚ್ ಮೇಟ್ ಆಗಿರುವ ಪ್ರಿಯಾಂಕಾ ಕಶ್ಯಪ್ ಅವರನ್ನು ವಿವಾಹವಾಗಿರುವ ಇವರು, ತಮ್ಮ ಸೇವಾ ವ್ಯಾಪ್ತಿಯನ್ನು ಕೇಂದ್ರಾಡಳಿತ ಪ್ರದೇಶಕ್ಕೆ ಬದಲಾಯಿಸಿಕೊಂಡರು. ಅಲ್ಲಿ ಜೊತೆಯಾಗಿ ಈ ದಂಪತಿ ಸೇವೆ ಗೋವಾದಲ್ಲಿ ಆರು ವರ್ಷಗಳ ಕಾಲ ಎಸ್ಪಿಯಾಗಿ ಸೇವೆ ಸಲ್ಲಿದ್ದರು.
ಯುಪಿಎಸಿಯಲ್ಲಿ ಬ್ಯಾಚ್ ಮೇಟ್ ಆಗಿರುವ ಚಂಡಿಗಢದ ಪ್ರಿಯಾಂಕಾ ಕಶ್ಯಪ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಕಾರ್ತಿಕ್, ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಬಳಿಕ ತನ್ನ ಸೇವಾ ವ್ಯಾಪ್ತಿಯನ್ನು ಕೇಂದ್ರಾಡಳಿತ ಪ್ರದೇಶಕ್ಕೆ ಬದಲಾಯಿಸಿಕೊಂಡಿದ್ದರು. ಈ ದಂಪತಿ ಒಟ್ಟಿಗೆ ದಿಲ್ಲಿ,ಅಂಡಮಾನ್,ದಿಯು-ದಾಮನ್,ಮಿಜೋರಾಂ ನಲ್ಲಿ ಒಟ್ಟಿಗೆ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಪ್ರಿಯಾಂಕಾ ಕಶ್ಯಪ್ ಉತ್ತರ ದಿಲ್ಲಿಯಲ್ಲಿ ಎಸ್ಪಿಯಾಗಿದ್ದಾರೆ. ಈ ದಂಪತಿಗೆ ಒಂದು ಹೆಣ್ಣು,ಒಂದು ಗಂಡು ಮಗು ಇದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications