ಪಕೋಡ ಮಾರಿ ಜೀವನ ಕಟ್ಟಿಕೊಂಡ ರಾಜೇಶ್ ಬಾಳಿಗ
Recommended Video

ಮಂಗಳೂರು, ಫೆಬ್ರವರಿ 08: ಪ್ರಧಾನಿ ನರೇಂದ್ರ ಮೋದಿ ಅವರ ಪಕೋಡಾ ಹೇಳಿಕೆ ಭಾರಿ ಸದ್ದು ಮಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಮೋದಿ ಅವರ ಪಕೋಡಾ ಹೇಳಿಕೆ ಬಗ್ಗೆ ಪರ ವಿರೋಧ ಚರ್ಚೆಗಳು ಕಾವು ಪಡೆದುಕೊಳ್ಳುತ್ತಿದೆ. ಇನ್ನೊಂದೆಡೆ ಮೋದಿ ಅವರ ಹೇಳಿಕೆ ವಿರೋಧಿಸಿ ರಾಜಕೀಯ ಪಕ್ಷಗಳ ಕಾರ್ಯಕರ್ತರು ಬೀದಿಗಿಳಿದು ಪಕೋಡಾ ಪ್ರತಿಭಟನೆ ನಡೆಸುತ್ತಿದ್ದಾರೆ. ಚುನಾವಣೆಯ ಹೊಸ್ತಿಲಲ್ಲಿರುವ ಕರ್ನಾಟಕ ದಲ್ಲಿ ಮೋದಿ ಅವರ ಪಕೋಡಾ ಹೇಳಿಕೆ ರಾಜಕೀಯ ಮುಖಂಡರ ವಾಗ್ವಾದಕ್ಕೆ ವೇದಿಕೆ ಯಾಗುತ್ತಿದೆ.
ರಾಜಕೀಯ ಪಕ್ಷಗಳ ಈ ಪಕೋಡಾ ಜಟಾಪಟಿ, ಪಕೋಡಾ ಮಾರಾಟಗಾರರನ್ನು ಕೆರಳಿಸಿದೆ. ಪಕೋಡಾ ಮಾರಾಟ ಭಿಕ್ಷಾಟನೆಗೆ ಹೋಲಿಸಿರುವುದುರ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ. ನಿರುದ್ಯೋಗಿಯಾಗಿರುವುದಕ್ಕಿಂತ ಪಕೋಡಾ ಮಾರುವುದೇ ಲೇಸು ಎನ್ನುವುದು ಪಕೋಡಾ ಮಾರಾಟಗಾರರ ಅಭಿಮತ.
ಪಕೋಡಾ ಮಾರಾಟ ಮಾಡಿ ಜೀವನದ ಉತ್ತುಂಗಕ್ಕೆರಿದವರ ಹಲವಾರು ನಿದರ್ಶನಗಳು ನಮ್ಮ ಮುಂದಿದೆ. ಪಕೋಡಾ ಮಾರಾಟ ಮಾಡಿ ಸ್ವಾಭಿಮಾನಿ ಬದುಕು ನಡೆಸುತ್ತಿರುವ ಉದಾಹರಣೆ ಮಂಗಳೂರಿನಲ್ಲಿದೆ. ಮಂಗಳೂರಿನ ರಥ ಬೀದಿಯಲ್ಲಿರುವ ಬಳ್ಳಿ ಮಾಮ್ ಪಕೋಡಾ ಮಂಗಳೂರಿನಲ್ಲಿ ಭಾರಿ ಫೇಮಸ್. ಬಳ್ಳಿ ಮಾಮ್ ಅವರು ತಯಾರಿಸುವ ರುಚಿಕರ ಪಕೋಡಾ. ಅವರು ವ್ಯಾಪಾರ ಆರಂಭಿಸಿ, ನಂತರ ಅದನ್ನು ಉತ್ತುಂಗಕ್ಕೆರಿಸಿದ ಪರಿ ಆಷ್ಟೇ 'ಕ್ರಿಸ್ಪಿ' ವಿಚಾರ ಕೂಡ.

ಪದವಿ ಶಿಕ್ಷಣಕ್ಕೆ ಗುಡ್ ಬೈ
ಪದವಿ ಶಿಕ್ಷಣವನ್ನು ನಡುವಿನಲ್ಲೇ ನಿಲ್ಲಿಸಿ ಕುಟುಂಬ ನಿರ್ವಹಣೆಗೆ ಉದ್ಯೋಗ ಅರಸುವ ಅನಿವಾರ್ಯತೆ ರಾಜೇಶ್ ಬಾಳಿಗ ಅವರಿಗೆ ಎದುರಾಯಿತು. ಆದರೆ ಕೈಯಲ್ಲಿ ಬಿಡಿಗಾಸೂ ಇರಲಿಲ್ಲ. ಹತಾಷರಾಗಿ ಕುಳಿತು ಕೊಳ್ಳದ ರಾಜೇಶ್ ಬಾಳಿಗ ಮಂಗಳೂರಿನ ಹೃದಯ ಭಾಗದ ರಥ ಬೀದಿ ಯಲ್ಲಿ 1993 ರಲ್ಲಿ ಪುಟ್ಟದೊಂದು ಅಂಗಡಿ ಮಾಡಿ ಪಕೋಡಾ ವ್ಯಾಪಾರ ಆರಂಭಿಸಿದರು.

ವ್ಯಾಪಾರದಲ್ಲಿ ವೃದ್ಧಿ
ಜೀವನ ನಿರ್ವಹಣೆಗಾಗುವಷ್ಟು ಗಳಿಕೆ ತರುತ್ತಿದ್ದ ಪಕೋಡಾ ವ್ಯಾಪಾರ ಮತ್ತಷ್ಟು ವೃದ್ದಿಸುವ ಪಣ ತೊಟ್ಟ ರಾಜೇಶ್ ಬಾಳಿಗಾ ಮತ್ತೆ ಹಿಂದಿರುಗಿ ನೋಡಲಿಲ್ಲ. ಈ ಹಿಂದೆ ಎರಡು ರೀತಿಯ ಪಕೋಡಾ ಮಾರಾಟ ಮಾಡುತ್ತಿದ ಬಳ್ಳಿ ಮಾಮ್ ಈಗ ಹಲವಾರು ಬಗೆಯ ರುಚಿಕರ ಪಕೋಡಾ ಸೇರಿದಂತೆ ಇನ್ನಿತರ ತಿನಿಸುಗಳನ್ನು ತಯಾರಿಸಿ ಮಾರಾಟ ಮಾಡುತ್ತಾರೆ. ಕಳೆದ 24 ವರ್ಷಗಳಿಂದ ರಾಜೇಶ್ ಮಾಮ್ ಪಕೋಡಾ ವ್ಯಾಪಾರ ನಡೆಸುತ್ತಿದ್ದಾರೆ.

8 ಜನಕ್ಕೆ ಉದ್ಯೋಗ
ಪ್ರತಿನಿತ್ಯ ಇವರ ವ್ಯಾಪಾರ ಮುಂಜಾನೆ 11 ಗಂಟೆ ಯಿಂದ ಸಂಜೆ 7 ವರೆಗೆ. ಬಾಳಿಗಾ ಅವರ ದಿನ ನಿತ್ಯದ ಗಳಿಕೆ ಕನಿಷ್ಟ 30 ರಿಂದ 40 ಸಾವಿರ ರೂಪಾಯಿ. ಅಂಗಡಿಯಲ್ಲಿ 8 ಜನರಿಗೆ ಉದ್ಯೋಗ ನೀಡಿರುವ ರಾಜೇಶ್ ಬಾಳಿಗಾ ಈಗಲೂ ಪಕೋಡಾ ಎಣ್ಣೆಗೆ ಬಿಡುವುದು ಬಳ್ಳಿ ಮಾಮ್ ಮುಂದುವರೆಸಿದ್ದಾರೆ. ರಥಭೀದಿಯ ಬಳ್ಳಿ ಮಾಮ್ ಅವರ ಅಂಗಡಿಯ ಪಕೋಡಾ ಕ್ಕೆ ಭಾರಿ ಬೇಡಿಕೆ ಇದೆ. ಸಂಜೆ ಯಾಗುತ್ತಿದ್ದಂತೆ ರಥ ಬೀದಿಯಲ್ಲಿ ಬಾಳಿಗ ಅವರ ಅಂಗಡಿಯ ಮುಂದೆ ಜನ ಮುಗಿಬಿದ್ದು ಪಕೋಡಾ ಖರೀದಿಸುತ್ತಾರೆ.

ನಿರುದ್ಯೋಗಕ್ಕಿಂತ ಪಕೋಡ ವ್ಯಾಪಾರ ಮೇಲು
ಪ್ರಧಾನಿ ನರೇಂದ್ರ ಮೋದಿ ಅವರ ಪಕೋಡಾ ಹೇಳಿಕೆಯ ಬಳಿಕ ಪಕೋಡಾ ವ್ಯಾಪಾರಿಗಳಿಗೂ ಬೆಲೆ ಬಂದಿದೆ. ಒಂದೆಡೆ ಪಕೋಡಾ ಮಾರಾಟ ಮಾಡಿ ಜೀವನ ಸಾಗಿಸುವವರ ಗುಣಮಟ್ಟವನ್ನು ಕೆಲವರು ಬಡತನ , ಭಿಕ್ಷಾಟನೆಗೆ ಹೋಲಿಸಿದರೆ. ಇನ್ನೂಕೆಲವರು ಪಕೋಡಾ ಮಾರಾಟ ಕೂಡ ಸ್ವಾಭಿಮಾನಿ ಬದುಕಿನ ಮಾರ್ಗ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಈ ವಿಶ್ಲೇಷಣೆಗೆ ಮಂಗಳೂರಿನ ಪಕೋಡಾ ವ್ಯಾಪಾರಿ ರಾಜೇಶ್ ಬಾಳಿಗ ಅವರ ಸ್ವಾಭಿಮಾನಿ ಬದುಕು ಉತ್ತಮ ಉದಾಹರಣೆಯಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications