ದರೋಡೆಗೆ ಸಂಚು ರೂಪಿಸಿದ್ದ ಕುಖ್ಯಾತ ಕ್ರಿಮಿನಲ್ ಗಳನ್ನು ಬಂಧಿಸಿದ ಮಂಗಳೂರು ಪೊಲೀಸರು
ಮಂಗಳೂರು, ನವೆಂಬರ್. 14:ಮಂಗಳೂರಿನ ಆಭರಣ ಮಳಿಗೆಯೊಂದರ ಮಾಲೀಕರನ್ನು ಅಪಹರಣ ಮಾಡಲು ಸಂಚು ರೂಪಿಸಿದ್ದ ದರೋಡೆಕೋರರ ತಂಡವನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಪಚ್ಚನಾಡಿಯ ಮಂಗಳೂರು ಹಿಲ್ಸ್ ರಸ್ತೆಯಲ್ಲಿ ಕೆಲ ಯುವಕರ ತಂಡ ಅಪಹರಣಕ್ಕೆ ಸಂಚು ರೂಪಿಸಿರುವ ಬಗ್ಗೆ ಮಂಗಳೂರು ರೌಡಿ ನಿಗ್ರಹ ದಳದ ಪೊಲೀಸರಿಗೆ ಮಾಹಿತಿ ದೊರೆತಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು 11 ಮಂದಿ ಕುಖ್ಯಾತ ಅಂತರ ರಾಜ್ಯ ದರೋಡೆಕೋರರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಶೇಖ್ ಮಹಮ್ಮದ್ ಅನ್ಸಾರ್(34), ರಮೀಝ್ ಕೆ.ಸಿ.ರೋಡ್(21), ಮಹಮ್ಮದ್ ತೌಸೀಫ್ ಅಲಿಯಾಸ್ ತಚ್ಚು(24), ತೌಸೀಫ್ (25), ಉಬೇದುಲ್ಲಾ(25), ಮಹಮ್ಮದ್ ಅಲಿ(25), ಅಹಮ್ಮದ್ ಕಬೀರ್(30), ಅಸ್ಗರ್ ಅಲಿ ಅಲಿಯಾಸ್ ಅಚ್ಚು (27), ಸಾಬೀತ್(19), ಮಹಮ್ಮದ್ ಸಬಾದ್ ಅಲಿಯಾಸ್ ಸವಾದ್(22), ಅಮೀರ್ ಅಲಿ ಅಲಿಯಾಸ್ ಅಮೀರ್ (19) ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಗಳಿಂದ 2 ಕಾರು, 3 ಕಬ್ಬಿಣದ ರಾಡ್, 1 ಚೂರಿ, 3 ಮರದ ದೊಣ್ಣೆ, 4 ನಕಲಿ ನಂಬರ್ ಪ್ಲೇಟ್, 16,050 ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ.
ಪೊಲೀಸರು ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಮೌಲ್ಯ 3.66ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಬಂಧಿತ ಆರೋಪಿಗಳ ವಿರುದ್ಧ ಕರ್ನಾಟಕ ಮತ್ತು ಕೇರಳದ ಕಾಸರಗೋಡಿನಲ್ಲಿ ಕೊಲೆ, ಕೊಲೆ ಯತ್ನ, ದರೋಡೆ, ಹಲ್ಲೆ ಪ್ರಕರಣ ಹಾಗೂ ಪೊಕ್ಸೊ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿರುವುದು ತನಿಖೆ ವೇಳೆ ತಿಳಿದುಬಂದಿದೆ.
-
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications