ಫಾಸ್ಟ್ ಚೆಕ್ : ಸಾರ್ವಜನಿಕರಿಗೆ ಮಂಗಳೂರು ಪೊಲೀಸರ ಮಹತ್ವದ ಮನವಿ
ಮಂಗಳೂರು, ಡಿ 26: ನಿಧಾನವಾಗಿ ಸಹಜಸ್ಥಿತಿಗೆ ಮರಳುತ್ತಿರುವ ಮಂಗಳೂರು ನಗರದಲ್ಲಿ ಮತ್ತೆ ಶಾಂತಿ ಕದಡುವ ಕೆಲಸವನ್ನು ಯಾರೂ ಮಾಡಬಾರದು. "ಕೆಲವು ಕಿಡಿಗೇಡಿಗಳು ಸುಳ್ಳು ಸಂದೇಶವನ್ನು ಸಾಮಾಜಿಕ ತಾಣದಲ್ಲಿ ಹರಿಯ ಬಿಡುತ್ತಿದ್ದಾರೆ. ಇದನ್ನು ಸಾರ್ವಜನಿಕರು ನಂಬಬಾರದು" ಎಂದು ನಗರದ ಪೊಲೀಸ್ ಆಯುಕ್ತ ಪಿ.ಎಸ್.ಹರ್ಷ ಮನವಿ ಮಾಡಿದ್ದಾರೆ.
"ಕೆಲವರು ಇಲಾಖೆಯ ಹೆಸರಿನಲ್ಲಿ ಸುಳ್ಳು ಸಂದೇಶವನ್ನು ಹರಿಯಬಿಡುತ್ತಿದ್ದಾರೆ. ಇಲಾಖೆಯ ಅಧಿಕೃತ ಸಂವಹನದ ಹೆಸರಿನಲ್ಲಿ ಜನರ ದಾರಿತಪ್ಪಿಸುವ ಕೆಲಸವನ್ನು ಮಾಡಲಾಗುತ್ತಿದೆ" ಎಂದು ಆಯುಕ್ತರು ಟ್ವೀಟ್ ಮೂಲಕ ಎಚ್ಚರಿಸಿದ್ದಾರೆ.
ಮಂಗಳೂರು ಪೊಲೀಸರ ಲೆಟರ್ ಹೆಡ್ ನಲ್ಲಿ, ನಗರದಲ್ಲಿನ ಗಲಭೆಯ ವೇಳೆ, ಕರ್ತವ್ಯ ನಿರತ ಪೊಲೀಸರ ಶ್ಲಾಘನೀಯ ಸೇವೆಗಾಗಿ ನಗದು ಬಹುಮಾನ ನೀಡಲಾಗಿದೆ ಎನ್ನುವ ಒಕ್ಕಣೆಯಿರುವ ಪತ್ರವನ್ನು ಕಿಡಿಗೇಡಿಗಳು ಸಾಮಾಜಿಕ ತಾಣದಲ್ಲಿ ಹರಿಯಬಿಟ್ಟಿದ್ದರು. ಸುಳ್ಳು ಸುದ್ದಿಯ ಆ ಪತ್ರದಲ್ಲಿ, ಬರೆದುಕೊಂಡಿದ್ದು ಹೀಗೆ:

"CAB & NRC ಮಸೂದೆಯ ವಿರುದ್ಧವಾಗಿ ದಿನಾಂಕ ಡಿ.19 ರಂದು ಮಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ತೀವ್ರವಾಗಿ ಭಂಗ ಉಂಟಾಗಿದ್ದು, ಪ್ರತಿಭಟನಾ ನಿರತ ವ್ಯಕ್ತಿಗಳು ಪೊಲೀಸ್ ಅಧಿಕಾರಿ/ ಸಿಬ್ಬಂದಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ನಷ್ಟ ಉಂಟುಮಾಡಿರುತ್ತಾರೆ".
"ಆದ ಕಾರಣ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿರುತ್ತದೆ. ಈ ಪರಿಸ್ಥಿತಿಯನ್ನು ನಿಯಂತ್ರಿಸಲು ಹಾಗೂ ನಗರದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿ ಹಗಲು ರಾತ್ರಿ ಅವಿರತ ಪರಿಶ್ರಮ ನಡೆಸಿರುತ್ತಾರೆ".
"ಆದ್ದರಿಂದ ಈ ಕೆಳಕಂಡ ಅಧಿಕಾರಿ/ ಸಿಬ್ಬಂದಿ ಅವರ ಶ್ಲಾಘನೀಯ ಸೇವೆಯನ್ನು ಗುರುತಿಸಿ ನಗದು ಬಹುಮಾನವನ್ನು ನೀಡಲಾಗಿದೆ ಎಂಬ ವಿಷಯವನ್ನು ಮಾನ್ಯರ ಅವಗಾಹನೆಗೆ ಈ ಮೂಲಕ ತರುತ್ತಿದ್ದೇನೆ" ಎಂದು ಪತ್ರದಲ್ಲಿ ಬರೆಯಲಾಗಿತ್ತು. ಈ ಪತ್ರವನ್ನು, ಮಂಗಳೂರು ಆಯುಕ್ತರು, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು/ ಮಹಾ ನಿರೀಕ್ಷಕರಿಗೆ ಬರೆದ ಪತ್ರದಂತೆ ಸೃಷ್ಟಿಸಲಾಗಿತ್ತು.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications