18 ವರ್ಷಗಳ ಹಿಂದಿನ ಪ್ರಕರಣ ಭೇದಿಸಿದ ಪುತ್ತೂರು ಪೊಲೀಸರು
ಮಂಗಳೂರು, ನವೆಂಬರ್.07: 18 ವರ್ಷಗಳ ಹಿಂದೆ ಎಸಗಿದ ಅಪರಾಧ ಕೃತ್ಯಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸುಳ್ಯ ನಿವಾಸಿ ಬಿ.ಎಮ್.ಹನೀಫ್ ಎಂದು ಗುರುತಿಸಲಾಗಿದೆ.
ಟಾಟಾ ಸುಮೊ ಒಂದನ್ನು ಬಾಡಿಗೆ ಪಡೆದು ಸಕಲೇಶಪುರ, ಹಾಸನ ಇತ್ಯಾದಿ ಕಡೆಗಳಿಗೆ ಟಿಂಬರ್ ವ್ಯಾಪಾರದ ವಿಚಾರವಾಗಿ ಸುತ್ತಾಡಿ ಕೊನೆಗೆ ಆ ಬಾಡಿಗೆ ಕಾರನ್ನು ಕಳವುಗೈದ ಪ್ರಕರಣ ಇದಾಗಿದೆ.
ಬಿ.ಎಮ್. ಹನೀಫ್ ಮತ್ತು ಇನ್ನೊಬ್ಬ ಆರೋಪಿ ಸುಧೀರ್ ಪ್ರಭು ಎಂಬುವವರು 2001, ಮಾರ್ಚ್ 8ರಂದು ಮಂಗಳೂರಿನ ಹಂಪನಕಟ್ಟೆಯಿಂದ ಜಯಂತ ಎಂಬುವವರಿಂದ ಕಾರು ಬಾಡಿಗೆ ಪಡೆದಿದ್ದರು. ಬಳಿಕ ಸಕಲೇಶಪುರ, ಹಾಸನ ಇತ್ಯಾದಿ ಕಡೆಗಳಿಗೆ ಟಿಂಬರ್ ವ್ಯಾಪಾರದ ವಿಚಾರವಾಗಿ ಸುತ್ತಾಡಿ 13ರಂದು ಬೆಳಗಿನ ಜಾವ 03 ಗಂಟೆ ಸುಮಾರಿಗೆ ಪುತ್ತೂರಿನ ಆರಾಧನ ಟೂರಿಸ್ಟ್ ಹೋಂನಲ್ಲಿ ತಂಗಿದ್ದರು.

ಹೋಟೆಲ್ ಹೊರಗೆ ಬಾಡಿಗೆ ಕಾರನ್ನು ಪಾರ್ಕ್ ಮಾಡಲಾಗಿತ್ತು. ಬಳಿಕ ಚಾಲಕ ಇಲ್ಲದ ಸಮಯದಲ್ಲಿ ಈ ಇಬ್ಬರು ಆರೋಪಿಗಳು ಬಾಡಿಗೆ ಕಾರನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಕುರಿತು ತನಿಖೆ ನಡೆಸಿದ ಪೊಲೀಸರು ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದರು.
ಆದರೆ ಇತ್ತೀಚೆಗೆ ಈ ಹಳೆ ಆರೋಪಿ ಕುಶಾಲನಗರದಲ್ಲಿ ಇರುವ ಮಾಹಿತಿ ಪಡೆದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಶಾಲನಗರದ ಕೂಡಿಗೆಯಲ್ಲಿ ಆರೋಪಿ ಬಿ.ಎಮ್.ಹನೀಫ್ ನನ್ನು ಪತ್ತೆ ಮಾಡಿದ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಇನ್ನು ತಲೆ ಮರೆಸಿಕೊಡಿದ್ದಾನೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications