18 ವರ್ಷಗಳ ಹಿಂದಿನ ಪ್ರಕರಣ ಭೇದಿಸಿದ ಪುತ್ತೂರು ಪೊಲೀಸರು
ಮಂಗಳೂರು, ನವೆಂಬರ್.07: 18 ವರ್ಷಗಳ ಹಿಂದೆ ಎಸಗಿದ ಅಪರಾಧ ಕೃತ್ಯಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸುಳ್ಯ ನಿವಾಸಿ ಬಿ.ಎಮ್.ಹನೀಫ್ ಎಂದು ಗುರುತಿಸಲಾಗಿದೆ.
ಟಾಟಾ ಸುಮೊ ಒಂದನ್ನು ಬಾಡಿಗೆ ಪಡೆದು ಸಕಲೇಶಪುರ, ಹಾಸನ ಇತ್ಯಾದಿ ಕಡೆಗಳಿಗೆ ಟಿಂಬರ್ ವ್ಯಾಪಾರದ ವಿಚಾರವಾಗಿ ಸುತ್ತಾಡಿ ಕೊನೆಗೆ ಆ ಬಾಡಿಗೆ ಕಾರನ್ನು ಕಳವುಗೈದ ಪ್ರಕರಣ ಇದಾಗಿದೆ.
ಬಿ.ಎಮ್. ಹನೀಫ್ ಮತ್ತು ಇನ್ನೊಬ್ಬ ಆರೋಪಿ ಸುಧೀರ್ ಪ್ರಭು ಎಂಬುವವರು 2001, ಮಾರ್ಚ್ 8ರಂದು ಮಂಗಳೂರಿನ ಹಂಪನಕಟ್ಟೆಯಿಂದ ಜಯಂತ ಎಂಬುವವರಿಂದ ಕಾರು ಬಾಡಿಗೆ ಪಡೆದಿದ್ದರು. ಬಳಿಕ ಸಕಲೇಶಪುರ, ಹಾಸನ ಇತ್ಯಾದಿ ಕಡೆಗಳಿಗೆ ಟಿಂಬರ್ ವ್ಯಾಪಾರದ ವಿಚಾರವಾಗಿ ಸುತ್ತಾಡಿ 13ರಂದು ಬೆಳಗಿನ ಜಾವ 03 ಗಂಟೆ ಸುಮಾರಿಗೆ ಪುತ್ತೂರಿನ ಆರಾಧನ ಟೂರಿಸ್ಟ್ ಹೋಂನಲ್ಲಿ ತಂಗಿದ್ದರು.

ಹೋಟೆಲ್ ಹೊರಗೆ ಬಾಡಿಗೆ ಕಾರನ್ನು ಪಾರ್ಕ್ ಮಾಡಲಾಗಿತ್ತು. ಬಳಿಕ ಚಾಲಕ ಇಲ್ಲದ ಸಮಯದಲ್ಲಿ ಈ ಇಬ್ಬರು ಆರೋಪಿಗಳು ಬಾಡಿಗೆ ಕಾರನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ಕುರಿತು ತನಿಖೆ ನಡೆಸಿದ ಪೊಲೀಸರು ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದರು.
ಆದರೆ ಇತ್ತೀಚೆಗೆ ಈ ಹಳೆ ಆರೋಪಿ ಕುಶಾಲನಗರದಲ್ಲಿ ಇರುವ ಮಾಹಿತಿ ಪಡೆದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಶಾಲನಗರದ ಕೂಡಿಗೆಯಲ್ಲಿ ಆರೋಪಿ ಬಿ.ಎಮ್.ಹನೀಫ್ ನನ್ನು ಪತ್ತೆ ಮಾಡಿದ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಇನ್ನು ತಲೆ ಮರೆಸಿಕೊಡಿದ್ದಾನೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications