ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದಿಂದ 1,269 ಕೊರೊನಾ ಸೋಂಕಿತರ ಅಂತ್ಯಕ್ರಿಯೆ
ಮಂಗಳೂರು, ಸೆಪ್ಟೆಂಬರ್ 25: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ವತಿಯಿಂದ ರಾಜ್ಯದಲ್ಲಿ ಈವರೆಗೆ ಕೊರೊನಾ ಸೋಂಕಿತ 1,269 ಮೃತದೇಹಗಳ ಅಂತ್ಯಸಂಸ್ಕಾರವನ್ನು ನಡೆಸಲಾಗಿದೆ.
ಕೊರೊನಾ ಕಾಲದ ಪ್ರಾರಂಭದಲ್ಲಿ ವೈರಸ್ ಭೀತಿಯ ಕಾರಣದಿಂದಾಗಿ ಸೋಂಕಿತ ವ್ಯಕ್ತಿಗಳಿಗೆ ಬಹಿಷ್ಕಾರ ಹಾಕುವ, ಮೃತದೇಹಗಳನ್ನು ಕುಟುಂಬಸ್ಥರೇ ತಿರಸ್ಕರಿಸುವ ಸನ್ನಿವೇಶ ಕಂಡು ಬಂದಿತ್ತು.
ಕೊರೊನಾ ಸೋಂಕಿತ ಮೃತದೇಹಗಳಿಗೆ ಕನಿಷ್ಠ ಗೌರವವನ್ನೂ ನೀಡದೆ ಅವುಗಳನ್ನು ಎಲ್ಲೆಂದರಲ್ಲಿ ಎಸೆಯುವ, ಸಾಮೂಹಿಕವಾಗಿ ಹೂತು ಬಿಡುವ ಘಟನಾವಳಿಗಳಿಗೆ ರಾಜ್ಯದ ಜನರು ಸಾಕ್ಷಿಯಾಗಿದ್ದರು.

ಇಂಥಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೊರೊನಾ ವಾರಿಯರ್ಸ್ ಗಳಾಗಿ ಮುಂದೆ ಬಂದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು, ಧರ್ಮ ಬೇಧವಿಲ್ಲದೆ ದೇಶದಾದ್ಯಂತ ಕೋವಿಡ್ ಬಾಧಿತ ಮೃತದೇಹಗಳ ಅಂತ್ಯಸಂಸ್ಕಾರದಲ್ಲಿ ಕೈಜೋಡಿಸಿದರು.
ಮಹಾರಾಷ್ಟ್ರದ ಪುಣೆಯಲ್ಲಿ ಮೃತದೇಹವೊಂದನ್ನು ಕುಟುಂಬಸ್ಥರೇ ನಿರಾಕರಿಸಿದಾಗ, ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರು ಸ್ಥಳೀಯಾಡಳಿತ ಸಂಸ್ಥೆಯ ಅನುಮತಿಯೊಂದಿಗೆ ಮೊದಲ ಬಾರಿ ಕೋವಿಡ್ ಅಂತ್ಯಸಂಸ್ಕಾರಕ್ಕೆ ಧುಮುಕಿದರು.

ಕರ್ನಾಟಕದಲ್ಲಿ ಕೋವಿಡ್ ಸಾವುಗಳು ಸಂಭವಿಸಲಾರಂಭಿಸಿದಾಗ ಪಾಪ್ಯುಲರ್ ಫ್ರಂಟ್, ಆರೋಗ್ಯ ಇಲಾಖೆಯ ಸಹಯೋಗದಲ್ಲಿ ತರಬೇತಿ ಪಡೆದ ತನ್ನ ಕಾರ್ಯಕರ್ತರ ಪಡೆಯನ್ನು ಸಜ್ಜುಗೊಳಿಸಿತು.
Recommended Video
ಕರ್ನಾಟಕ ರಾಜ್ಯಾದ್ಯಂತ ಪಾಪ್ಯುಲರ್ ಫ್ರಂಟ್ ಇಲ್ಲಿಯವರೆಗೆ 1,269 ಮಂದಿಯ ಅಂತ್ಯ ಸಂಸ್ಕಾರವನ್ನು ನಡೆಸಿದ್ದು, ಜಾತಿ, ಧರ್ಮವನ್ನು ಮೀರಿದ ಈ ಮಾನವೀಯ ಕಾರ್ಯವು ವ್ಯಾಪಕವಾಗಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications