ಬಿಜೆಪಿ ಮುಖಂಡನಿಗೆ ಮಸಿ ಬಳಿದವರಿಗೆ 1 ಲಕ್ಷ ರೂ. ಘೋಷಿಸಿದ್ದ ಹಣವನ್ನು ಬಡಮಕ್ಕಳಿಗೆ ನೀಡಿದ ಪ್ರತಿಭಾ ಕುಳಾಯಿ
ಮಂಗಳೂರು, ಫೆಬ್ರವರಿ 15: ಕೋಟಿ ಚೆನ್ನಯರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆನ್ನಲಾದ ಬಿಜೆಪಿ ನಾಯಕ ಜಗದೀಶ್ ಅಧಿಕಾರಿ ವಿರುದ್ಧ ಬಹಿರಂಗ ಪ್ರತಿಜ್ಞೆ ಹಾಕಿದ್ದಲ್ಲದೆ, ಅವರ ಮುಖಕ್ಕೆ ಮಸಿ ಬಳಿದರೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದರು.
ಈಗ ಕಾಂಗ್ರೆಸ್ ನಾಯಕಿ, ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಅವರು ಆ 1 ಲಕ್ಷ ರುಪಾಯಿಯನ್ನು ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಹಂಚಿದ್ದಾರೆ.
ಶನಿವಾರ ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನವಾದ ಗೆಜ್ಜೆಗಿರಿ ನಂದನ ಬಿತ್ತಿಲ್ಗೆ ಆಗಮಿಸಿದ ಅವರು, ಸತ್ಯಧರ್ಮ ಚಾವಡಿಯಲ್ಲಿ ಪ್ರಾರ್ಥನೆ ಮಾಡಿ, ಸ್ಥಳದಲ್ಲೇ 10 ವಿದ್ಯಾರ್ಥಿನಿಯರಿಗೆ ತಲಾ 10 ಸಾವಿರ ರೂ. ನಂತೆ ವಿತರಿಸಿದರು.

ಪುತ್ತೂರು ಆಸುಪಾಸಿನ ಇನ್ನೂ 20 ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೆಜ್ಜೆಗಿರಿ ಮೂಲಕ ಆರಿಸಿಕೊಟ್ಟಲ್ಲಿ ಜಾತಿ ಮತ ಭೇದವಿಲ್ಲದೆ ಅವರ ಶಿಕ್ಷಣ ವೆಚ್ಚ ಭರಿಸುವುದಾಗಿಯೂ ಪ್ರಕಟಿಸಿದರು. ಗೆಜ್ಜೆಗಿರಿ ಕ್ಷೇತ್ರದಲ್ಲಿ ಯಜಮಾನರಾದ ಶ್ರೀಧರ ಪೂಜಾರಿ ಅವರ ಸಮ್ಮುಖದಲ್ಲಿ ಪ್ರಾರ್ಥನೆ ಮಾಡಿದ ಪ್ರತಿಭಾ ಕುಳಾಯಿ, ದೇಯಿ ಬೈದ್ಯೆತಿ ಮತ್ತು ಕೋಟಿ ಚೆನ್ನಯರ ಕಾರಣಿಕದಿಂದಾಗಿ ತಪ್ಪು ಮಾಡಿದ ವ್ಯಕ್ತಿ ಪ್ರಾಯಶ್ಚಿತ್ತ ಪಟ್ಟಿದ್ದಾರೆ.
ಗರಡಿ ಕ್ಷೇತ್ರಗಳಲ್ಲೇ ತಪ್ಪು ಕಾಣಿಕೆ ಹಾಕಿದ್ದಾರೆ. ಹೀಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿ ತಾನಾಡಿದ ಮಾತುಗಳನ್ನು ಕೂಡ ಈ ಪುಣ್ಯದ ಮಣ್ಣಿನಲ್ಲಿ ಬಿಟ್ಟು ಬಿಡುತ್ತಿದ್ದೇನೆ. ಅದಕ್ಕಾಗಿ ಮೀಸಲಿಟ್ಟ ಹಣವನ್ನು ಎಲ್ಲ ಜಾತಿ, ಸಮುದಾಯದ 10 ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಸಮಾನವಾಗಿ ಹಂಚುತ್ತಿದ್ದೇನೆ ಎಂದರು.
ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕೋಟಿ ಚೆನ್ನಯರು ಮತ್ತು ಬಿಲ್ಲವ ಸಮಾಜದ ಕುರಿತು ಜಗದೀಶ ಅಧಿಕಾರಿ ಅವಹೇಳನಕಾರಿಯಾಗಿ ಮಾತನಾಡಿದಾಗ ತುಂಬಾ ಬೇಸರವಾಯಿತು. ಅಪರಾಧಿಯ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರೂ. ಬಹುಮಾನ ನೀಡುತ್ತೇನೆಂದು ಘೋಷಿಸಿದ್ದೆ. 3 ದಿನಗಳ ಗಡುವು ಕೊಟ್ಟಿದ್ದೆ. ಎರಡೇ ದಿನದಲ್ಲಿ ಅವರು ಗರಡಿ ಕ್ಷೇತ್ರಗಳಲ್ಲಿ ತಪ್ಪು ಕಾಣಿಕೆ ಹಾಕಿದ್ದಾರೆ. ಹೀಗಾಗಿ ನನ್ನ ಘೋಷಣೆಯನ್ನು ವಾಪಸ್ ಪಡೆದಿದ್ದೇನೆ ಎಂದು ಹೇಳಿದರು.
ನಾನು ಜಾತಿವಾದಿಯಲ್ಲ, ನಾರಾಯಣಗುರು ತತ್ವದಲ್ಲಿ ನಂಬಿಕೆ ಇಟ್ಟವಳು. ಜಾತಿ, ಧರ್ಮ, ಕುಲ, ದೇವರ ಹೆಸರಿನಲ್ಲಿ ವಿಷ ಬೀಜ ಬಿತ್ತುವುದರ ವಿರುದ್ಧ ಸಮಾಜದಲ್ಲಿ ಜಾಗೃತಿ ಮೂಡಿಸಲು ಆ ಮಾತು ಹೇಳಿದ್ದೆ. ಈಗ ಎಲ್ಲ ಸಮಾಜದ ವಿದ್ಯಾರ್ಥಿನಿಯರಿಗೆ ನೆರವು ನೀಡಿದ್ದೇನೆ ಎಂದು ತಿಳಿಸಿದರು.
ಸರ್ವ ಸಮಾಜದ 20 ಬಡ ಮಕ್ಕಳನ್ನು ಗೆಜ್ಜೆಗಿರಿ ಮೂಲಕವೇ ಆರಿಸಿಕೊಟ್ಟಲ್ಲಿ ಅವರ ಶಿಕ್ಷಣದ ವೆಚ್ಚ ಭರಿಸುತ್ತೇನೆ ಎಂದ ಅವರು, ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷ ಜಯಂತ ನಡುಬೈಲ್, ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ಉಪಸ್ಥಿತರಿದ್ದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications