Mangaluru: ಪಿಯು ವಿದ್ಯಾರ್ಥಿ ನಿಗೂಢ ನಾಪತ್ತೆ: ಗಾಂಜಾ ಗ್ಯಾಂಗ್ ಕೈವಾಡದ ಶಂಕೆ, ಸಂಘಟನೆಗಳ ಪ್ರತಿಭಟನೆ
ಮಂಗಳೂರು ಮಾರ್ಚ್ 1: ಪಿಯು ವಿದ್ಯಾರ್ಥಿ ನಿಗೂಢ ನಾಪತ್ತೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಫರಂಗಿಪೇಟೆಯಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. ಹಿಂದೂ ಸಂಘಟನೆಗಳು ಇಂದು ಬಂದ್ಗೆ ಕರೆ ನೀಡಿದ್ದರ ಹಿನ್ನಲೆಯಲ್ಲಿ ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಅಲ್ಲದೆ ವಿದ್ಯಾರ್ಥಿ ನಾಪತ್ತೆ ಹಿಂದೆ ಗಾಂಜಾ ಗ್ಯಾಂಗ್ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.
ಹೌದು.. ಫರಂಗಿಪೇಟೆಯ ಪಿಯು ವಿದ್ಯಾರ್ಥಿ ದಿಗಂತ್ ಫೆಬ್ರವರಿ 25ರಂದು ಸಂಜೆ 7 ಗಂಟೆಗೆ ನಾಪತ್ತೆ ಆಗಿದ್ದಾನೆ. ದಿಗಂತ್ ನಾಪತ್ತೆಯಾಗಿ 5 ದಿನವಾದರೂ ಪತ್ತೆಯಾಗಿಲ್ಲ. ದಿಗಂತ್ ಕಾಣೆಯಾಗಿರುವುದರ ಹಿಂದೆ ಗಾಂಜಾ ಗ್ಯಾಂಗ್ ಕೈವಾಡವಿದೆ ಎಂದು ಸಂಘಟನೆಗಳು ಆರೋಪಿಸಿವೆ. ಹೀಗಾಗಿ ಇಂದು ಬಂದ್ಗೆ ಕರೆ ನೀಡಿದ ಹಿಂದೂ ಪರ ಸಂಘಟನೆಗಳು ಇದು ಪೊಲೀಸ್ ಇಲಾಖೆ ವೈಫಲ್ಯ ಎಂದು ಆಕ್ರೋಶ ವ್ಯಕ್ತಪಡಿಸಿವೆ.

ವ್ಯಾಯಾಮ ಶಾಲೆಗೆ ಹೋಗಿದ್ದ ದಿಗಂತ ನಾಪತ್ತೆ
ಪ್ರತಿಭಟನೆಯ ಹಿನ್ನೆಲೆಯಲ್ಲಿ ಫರಂಗಿಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎರಡು ಕೆಎಸ್ಆರ್ಪಿ ತುಕಡಿ ಸೇರಿ 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಫೆಬ್ರವರಿ 25ರ ಸಂಜೆ ವ್ಯಾಯಾಮ ಶಾಲೆಗೆ ಹೋಗಿದ್ದ ದಿಗಂತ್ ಮನೆಗೆ ವಾಪಾಸ್ ಆಗಿಲ್ಲ. ವ್ಯಾಯಾಮ ಶಾಲೆಗೆ ಹೋಗಿದ್ದ ದಿನದಿಂದ ದಿಗಂತ್ ನಾಪತ್ತೆಯಾಗಿದ್ದಾನೆ.
ರೈಲು ಹಳಿಯಲ್ಲಿ ಈತನ ಚಪ್ಪಲಿ ಹಾಗೂ ಮೊಬೈಲ್ ದೊರಕಿದೆ. ದಿಗಂತ್ ಧರಿಸಿದ ಚಪ್ಪಲಿಗೆ ರಕ್ತದ ಕಲೆ ಇರುವುದು ಕಂಡು ಬಂದಿದೆ. ಇದರಿಂದ ಈತನನ್ನು ಯಾರು ಕರೆದುಕೊಂಡು ಹೋಗಿದ್ದಾರೆ, ಯಾರು ಕಿಡ್ನ್ಯಾಪ್ ಮಾಡಿದ್ದಾರೆ ಇದ್ಯಾವುದರ ಸುಳಿವು ಈವರೆಗೂ ಸಿಕ್ಕಿಲ್ಲ.
ಹೀಗಾಗಿ ಮಂಗಳೂರಿನ ಖಾಸಗಿ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ದಿಗಂತ ನಾಪತ್ತೆ ಹಿಂದೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿವೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೂ ಕೂಡ ಈವರೆಗೂ ವಿದ್ಯಾರ್ಥಿಯ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಹೀಗಾಗಿ ಪೊಲೀಸರ ವಿರುದ್ಧ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಪೊಲೀಸರ ವೈಫಲ್ಯದ ಬಗ್ಗೆ ಪ್ರತಿಭಟನಾಕಾರರು ಪ್ರಶ್ನೆಯನ್ನು ಮಾಡುತ್ತಿದ್ದಾರೆ.
ವ್ಯಾಯಾಮ ಶಾಲೆಯ ಸುತ್ತ ಅಪರಿಚಿತ ಕಾರು ಓಡಾಟ
ಇದೇ ವೇಳೆ ಅಪರಿಚಿತ ಕ್ವಾಲಿಸ್ ಕಾರು ಓಡಾಟ ಅನುಮಾನ ಹುಟ್ಟಿಸಿದೆ. ದಿಗಂತ್ ನಾಪತ್ತೆಯಾದ ಸಮಯದಲ್ಲಿ ಬಂದಿದ್ದ ಕಾರು, ಆಂಜನೇಯ ವ್ಯಾಯಾಮ ಶಾಲೆ ಸಿಸಿಟಿವಿಯಲ್ಲಿ ದೃಶ್ಯದಲ್ಲಿ ಸೆರೆಯಾಗಿದೆ. ಇದು ಗಾಂಜಾ ಗ್ಯಾಂಗ್ ಕೈವಾಡ ಎಂದು ವಿಹೆಚ್ಪಿ ಆರೋಪ ಮಾಡಿದೆ.
ಈ ಅನುಮಾನ ಬಗೆಹರಿಸಬೇಕು. ಈ ಪ್ರಕರಣದ ಸತ್ಯ ಬಯಲು ಮಾಡಬೇಕು, ಇದರ ಹಿಂದೆ ಇರುವವರು ಯಾರು ಎನ್ನುವುದನ್ನು ಪೊಲೀಸರು ಹೊರತೆಗೆಯಬೇಕಿದೆ. ಆದರೆ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೆ, ಪ್ರಕರಣವನ್ನು ಭೇದಿಸುವಲ್ಲಿ ವಿಫಲರಾಗಿದ್ದಾರೆ ಎಂದು ಪ್ರತಿಭಟನಾಕಾರರು ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ.
ಪರೀಕ್ಷೆಗೆ ಹೆದರಿಕೊಂಡ ಓಡಿ ಹೋದ ದಿಗಂತ?
ಇಂದಿನಿಂದ ದ್ವೀತಿಯ ಪಿಯುಸಿ ಪರೀಕ್ಷೆ ಆರಂಭವಾಗಿವೆ. ಪರೀಕ್ಷೆಗೆ ಹೆದರಿ ದಿಗಂತ ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ ಕುಟುಂಬಸ್ಥರು ಹೇಳುವ ಪ್ರಕಾರ ದಿಗಂತ್ ಪರೀಕ್ಷೆಗೆ ಹೆದರಿಕೊಳ್ಳುವ ಹುಡುಗನಲ್ಲ. ಆತ ಪರೀಕ್ಷೆಯ ಹಾಲ್ ಟಿಕೆಟ್ ಕೂಡ ತೆಗೆದುಕೊಂಡು ಬಂದಿದ್ದ.
ಪೊಲೀಸರು ಹೇಳುವಂತೆ ದಿಗಂತ್ ಪರೀಕ್ಷೆಗೆ ಹೆದರಿ ಹೋಗಿದ್ದರೆ ಅವನ ಚಪ್ಪಲಿಗೆ ರಕ್ತದ ಕಲೆ ಹೇಗೆ ಬಂತು. ಆತನ ಮೊಬೈಲ್ ರೈಲು ಹಳಿಯ ಮೇಲೆ ಯಾಕೆ ಬಂತು? ಎಂದು ಪೋಷಕರು ಪ್ರಶ್ನೆ ಮಾಡುತ್ತಿದ್ದಾರೆ. ಈ ಸಾಕ್ಷಿ ಸಿಕ್ಕ ಬಳಿಕ ಪೊಲೀಸರು ಅಲರ್ಟ್ ಆಗಿದ್ದಾರೆ.
ಆದರೆ ದುರ್ದೈವ ಇನ್ನೂ ಕುಡ ದಿಗಂತ ಸಿಕ್ಕಿಲ್ಲ. ಮೋಬೈಲ್ ಕೂಡ ರೈಲು ಹಳಿಯ ಮೇಲೆ ಬಿದ್ದಿದೆ. ಅಪರಿಚಿತ ಕಾರು ಓಡಾಡಿದೆ. ಇದು ಸಾಕಷ್ಟು ಅನುಮಾನಗಳನ್ನು ಹುಟ್ಟಿಸಿದೆ. ಆದಷ್ಟು ಬೇಗ ಪೊಲೀಸರು ದಿಗಂತ್ನನ್ನು ಹುಡುಕಿ ಕೊಡಬೇಕು ಎಂದು ಹಿಂದೂಪರ ಸಂಘಟನೆ ಮುಖ್ಯಸ್ಥರು ಮನವಿ ಮಾಡಿದ್ದಾರೆ.
ಮುಂದಿನ ಎರಡು ದಿನದಲ್ಲಿ ಉಗ್ರ ಹೋರಾಟ ಎಚ್ಚರಿಕೆ
ಹೀಗಾಗಿ ಹಿಂದೂ ಸಂಘಟನೆಗಳು ಫರಂಗಿಪೇಟೆಯಲ್ಲಿ ಬಂದ್ಗೆ ಕರೆ ಕೊಟ್ಟಿವೆ. ಮುಂದಿನ ಎರಡು ದಿನದಲ್ಲಿ ಆತನ ಬಗ್ಗೆ ಯಾವುದೇ ಸುಳಿವು ಸಿಗದೇ ಇದ್ದಲ್ಲಿ ಇದಕ್ಕಿಂತ ಉಗ್ರವಾದ ಹೋರಾಟ ಮಾಡುವುದಾಗಿ ಸಂಘಟನೆಗಳು ಎಚ್ಚರಿಕೆ ನೀಡಿವೆ. ಫರಂಗಿಪೇಟೆಯಲ್ಲಿ ಗಾಂಜಾ ವೆಸನಿಗಳು ಹೆಚ್ಚಾಗಿದ್ದಾರೆ. ಅವರಿಂದಲೇ ಈ ಕೃತ್ಯ ಆಗಿದೆ ಎಂದು ಸಂಘಟನೆಗಳು ಆರೋಪಿಸಿವೆ. ತನಿಖಾ ಭಾಗವಾಗಿ ಪೊಲೀಸರು ಮೂರು ತಂಡಗಳನ್ನು ರಚಿಸಿದ್ದಾರೆ. ದಿಗಂತ್ ಪತ್ತೆ ಹಚ್ಚಲು ಪೊಲೀಸರು ಶ್ರಮ ಹಾಕುತ್ತಿದ್ದಾರೆ. ಆದರೂ ಕೂಡ ದಿಗಂತ ಸುಳಿವು ಸಿಗದೇ ಇರುವುದು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications