ಪಬ್ ದಾಳಿ ಆರೋಪಿಗಳು ದೋಷಮುಕ್ತ, ಸಿಹಿ ಹಂಚಿ ಸಂಭ್ರಮಾಚರಣೆ
ಮಂಗಳೂರು, ಮಾರ್ಚ್ 12: ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರಿ ಸುದ್ದಿಯಾಗಿದ್ದ 2009 ರ ಮಂಗಳೂರು ಪಬ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನ್ಯಾಯಾಲಯ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಈ ಹಿನ್ನಲೆಯಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಸಿಹಿ ವಿತರಣೆ ಮಾಡಿದ್ದಲ್ಲದೇ, ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 9 ವರ್ಷಗಳ ಸುದೀರ್ಘ ವಿಚಾರಣೆ ನಡೆಸಿದ ಮಂಗಳೂರಿನ 3ನೇ ಜೆಎಂಎಫ್ ಸಿ ನ್ಯಾಯಾಲಯ ಸಾಕ್ಷ್ಯಾಧಾರಗಳ ಕೊರತೆಯಿಂದ ಪ್ರಕರಣದ ಪ್ರಮುಖ ಆರೋಪಿಗಳೆಂದು ಗುರುತಿಸಲಾಗಿದ್ದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಪ್ರಸಾದ್ ಅತ್ತಾವರ್ , ಸುಭಾಷ್ ಪಡೀಲ್ ಸೇರಿದಂತೆ ಎಲ್ಲಾ 25 ಆರೋಪಿಗಳನ್ನು ಇಂದು ದೋಷಮುಕ್ತಗೊಳಿಸಿ ತೀರ್ಪು ನೀಡಿದೆ.

ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್, "2009 ಜನವರಿ 24ರಂದು ಅಮ್ನೇಶಿಯಾ ಪಬ್ ಮೇಲೆ ದಾಳಿ ನಡೆದಿತ್ತು. ಇದರಲ್ಲಿ 30 ಜನರ ಮೇಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜೆಎಂಎಫ್ ಸಿ 3ನೇ ನ್ಯಾಯಾಲಯ 25 ಜನರನ್ನು ಖುಲಾಸೆಗೊಳಿಸಿದೆ. ಇದು ಸತ್ಯಕ್ಕೆ ಸಂದ ಜಯ," ಎಂದು ಹೇಳಿದರು.
ಆರೋಪ ಹೊಂದಿದ್ದ ಮೂವರು ವಿದೇಶಕ್ಕೆ ತೆರಳಿದ್ದು, ಇಬ್ಬರು ಮೃತ ಪಟ್ಟಿದ್ದಾರೆ. ಈ ಪ್ರಕರಣದಲ್ಲಿ 9 ಸೆಕ್ಷನ್ ಗಳನ್ನು ಹಾಕಲಾಗಿತ್ತು. ಈ ಘಟನೆಯಲ್ಲಿ ನಾನು ಭಾಗಿಯಾಗಿರಲಿಲ್ಲ ಆದರು ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಿ ಬಂಧಿಸಲಾಯಿತು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಘಟನೆ ನಡೆಯುವ ಸಂದರ್ಭದಲ್ಲಿ ನಾನು ಮಹಾರಾಷ್ಟ್ರದ ಪುಣೆಯ ಸಮ್ಮೇಳನ ಒಂದರಲ್ಲಿ ಭಾಗವಹಿಸಿದ್ದೆ. ಅಲ್ಲಿಂದ ಹಿಂತಿರುಗಿದಾಗ ನನ್ನನ್ನು ಬಂಧಿಸಿದ್ದರು. 16 ದಿನ ನನ್ನನ್ನು ಜೈಲಿನಲ್ಲಿಟ್ಟು ಮಾನಸಿಕ, ದೈಹಿಕ ಹಿಂಸೆ ನೀಡಿದ ಅಂದಿನ ಬಿಜೆಪಿ ಸರಕಾರಕ್ಕೆ ಧಿಕ್ಕಾರ ಎಂದು ಅವರು ಕಿಡಿಕಾರಿದರು.
ನನಗೆ ಹಿಂಸೆ ನೀಡಲೆಂದೇ ಬಿಜೆಪಿಯವರು ಸಂಚು ಮಾಡಿ ಬಂಧಿಸಿದ್ದರು ಎಂದು ಆರೋಪಿಸಿದ ಅವರು, "ಮುಂಬರುವ ದಿನಗಳಲ್ಲಿ ಅದಕ್ಕೆ ತಕ್ಕ ಉತ್ತರ ನೀಡುತ್ತೇನೆ," ಎಂದು ಹೇಳಿದರು. ಬಿಜೆಪಿ ನಾಯಕರಿಂದಲೇ ಹಿಂದೂ ಸಂಘಟನೆಯನ್ನು ಹತ್ತಿಕ್ಕುವ ಕೆಲಸ ಮಾಡಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಕೆ.ಟಿ. ನವೀನ್ ಕುಮಾರ್ ನನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆಯೂ ಆಕ್ರೋಶ ವ್ಯಕ್ತಪಡಿಸಿದ ಪ್ರಮೋದ್ ಮುತಾಲಿಕ್, "ಕೆ.ಟಿ. ನವೀನ್ ನನ್ನು ಪ್ರಕರಣದಲ್ಲಿ ವ್ಯವಸ್ಥಿತವಾಗಿ ಸಿಲುಕಿಸಲಾಗಿದೆ. ಯಾವುದೇ ಆಧಾರವಿಲ್ಲದಿದ್ದರೂ ಗೌರಿ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಘಟನೆ ನಡೆದು ಸಾಕಷ್ಟು ಸಮಯ ಕಳೆದಿದ್ದರೂ ಇಷ್ಟು ದಿನಗಳ ಕಾಲ ತನಿಖೆ ಕೈಗೊಂಡ ಬಳಿಕವೂ ದೊರೆಯದ ಆರೋಪಿಯನ್ನು ಈಗ ಏಕಾಏಕಿ ಪತ್ತೆ ಮಾಡಲು ಹೇಗೆ ಸಾಧ್ಯ?" ಎಂದು ಅವರು ಪ್ರಶ್ನಿಸಿದರು.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications